AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್

ಗುಜರಾತ್​​ನ ಐತಿಹಾಸಿಕ ಗೆಲುವಿಗೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Dec 08, 2022 | 6:46 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ತಮ್ಮ ತವರು ರಾಜ್ಯ ಗುಜರಾತ್‌ಗೆ (Gujarat) ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ (Gujarat Assembly Polls) ಅದ್ಭುತ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ ಎಂದು ಅವರು ಹೇಳಿದ್ದಾರೆ. ಧನ್ಯವಾದಗಳು ಗುಜರಾತ್. ಅಭೂತಪೂರ್ವ ಚುನಾವಣಾ ಫಲಿತಾಂಶಗಳನ್ನು ನೋಡಿ ನಾನು ಭಾವುಕನಾದೆ. ಜನರು ಅಭಿವೃದ್ಧಿಯ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಅದೇ ಸಮಯದಲ್ಲಿ ಈ ವೇಗವು ಹೆಚ್ಚಿನ ವೇಗದಲ್ಲಿ ಮುಂದುವರಿಯಬೇಕೆಂದು ಅವರು ಬಯಸುತ್ತಾರೆ. ನಾನು ಗುಜರಾತ್‌ನ ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಕ್ಷದ ಕಾರ್ಯಕರ್ತರನ್ನು ಶ್ಲಾಘಿಸಿದ ಮೋದಿ, ಪ್ರತಿಯೊಬ್ಬರೂ ಚಾಂಪಿಯನ್ ಆಗಿದ್ದಾರೆ ಎಂದು ಹೇಳಿದರು. ಕಠಿಣ ಪರಿಶ್ರಮಿಗಳಾದ ಗುಜರಾತಿನ ಎಲ್ಲ ಬಿಜೆಪಿ ಕಾರ್ಯಕರ್ತರಲ್ಲಿ ನಾನು ನೀವು ಪ್ರತಿಯೊಬ್ಬರೂ ಚಾಂಪಿಯನ್! ಎಂದು ಹೇಳಬಯಸುತ್ತೇನೆ. ನಮ್ಮ ಪಕ್ಷದ ನಿಜವಾದ ಶಕ್ತಿಯಾಗಿರುವ ನಮ್ಮ ಕಾರ್ಯಕರ್ತರ ಅಸಾಧಾರಣ ಪರಿಶ್ರಮವಿಲ್ಲದೆ ಈ ಐತಿಹಾಸಿಕ ಗೆಲುವು ಎಂದಿಗೂ ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡ ಹಿಮಾಚಲ ಪ್ರದೇಶದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗುಡ್ಡಗಾಡು ರಾಜ್ಯದ ಮತದಾರರು ಬಿಜೆಪಿಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಮುಂಬರುವ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳನ್ನು ಎತ್ತಲು ತಮ್ಮ ಪಕ್ಷವು ಕೆಲಸ ಮಾಡುತ್ತದೆ ಎಂದು ಹೇಳಿದರು. ಬಿಜೆಪಿಯ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು ಮತ್ತು ಜನರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲು ನಾವು ಶ್ರಮಿಸುತ್ತೇವೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ