AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಜನ ಈ ಬಾರಿ ಎಲ್ಲ ದಾಖಲೆಯನ್ನೂ ಮುರಿಯುತ್ತಾರೆ; ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ

Gujarat Assembly Elections 2022: ಸೂರತ್​ನಲ್ಲಿ ಮರೆಯಲಾಗದ ಸಂಜೆಯನ್ನು ಕಳೆದಿದ್ದೇನೆ. ಬಿಜೆಪಿಯೇ ಜನರ ಆದ್ಯತೆಯ ಆಯ್ಕೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೂರತ್ ರೋಡ್​​ ಶೋನ ವಿಡಿಯೋ ಶೇರ್ ಮಾಡಿದ್ದಾರೆ.

ಗುಜರಾತ್​ನ ಜನ ಈ ಬಾರಿ ಎಲ್ಲ ದಾಖಲೆಯನ್ನೂ ಮುರಿಯುತ್ತಾರೆ; ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ
ಸೂರತ್ ರೋಡ್​​ಶೋನಲ್ಲಿ ಪ್ರಧಾನಿ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 28, 2022 | 11:22 AM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾನುವಾರ ಸಂಜೆ ಗುಜರಾತ್‌ನ ಸೂರತ್‌ನಲ್ಲಿ ಬೃಹತ್ ರೋಡ್‌ಶೋ (Surat Road Show) ನಡೆಸಿದರು. ಈ ವೇಳೆ ಮಾತನಾಡಿದ ಅವರು, ಗುಜರಾತ್​ ಚುನಾವಣೆಯಲ್ಲಿ (Gujarat Assembly Elections 2022) ಈ ಬಾರಿ ಇಲ್ಲಿನ ಮತದಾರರು ಎಲ್ಲ ದಾಖಲೆಗಳನ್ನೂ ಮುರಿಯುತ್ತಾರೆ. ಅವರು ಬಿಜೆಪಿಗೆ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ನೀಡುತ್ತಾರೆ ಎಂಬ ವಿಶ್ವಾಸ, ನಂಬಿಕೆ ನನಗಿದೆ ಎಂದಿದ್ದಾರೆ. ಸೂರತ್ ವಿಮಾನ ನಿಲ್ದಾಣದಿಂದ ನಗರದ ಪ್ರಮುಖ ಕೇಂದ್ರವಾದ ವರಚ್ಚಾವರೆಗಿನ 27 ಕಿ.ಮೀ ಮಾರ್ಗದ ರೋಡ್‌ಶೋದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಲಕ್ಷಾಂತರ ಜನರು ನಿಂತು, ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ಈ ವಿಡಿಯೋವನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸೂರತ್​ನಲ್ಲಿ ಮರೆಯಲಾಗದ ಸಂಜೆಯನ್ನು ಕಳೆದಿದ್ದೇನೆ. ಬಿಜೆಪಿಯೇ ಜನರ ಆದ್ಯತೆಯ ಆಯ್ಕೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇಲ್ಲಿದೆ. ನಮ್ಮ ಅಭಿವೃದ್ಧಿ ಕಾರ್ಯಗಳಿಂದಾಗಿ ಜನರನ್ನು ತಲುಪಲು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಸೂರತ್‌ನ 12 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೂರತ್​​ನಲ್ಲಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ರಾತ್ರಿಯಾದರೂ ರಸ್ತೆಗಳ ಪಕ್ಕದಲ್ಲಿ, ಕಟ್ಟಡಗಳ ಮೇಲೆ ನಿಂತುಕೊಂಡು ಲಕ್ಷಾಂತರ ಜನರು ಮೋದಿಯನ್ನು ಸ್ವಾಗತಿಸುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿವೆ. ಅಲ್ಲದೆ, ಜನರು ಮೋದಿ ಮೋದಿ ಎಂದು ಜೋರಾಗಿ ಘೋಷಣೆ ಕೂಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರಿನ ಡೋರ್​​ನಲ್ಲಿ ನಿಂತುಕೊಂಡು ರಸ್ತೆಯುದ್ದಕ್ಕೂ ಜನರತ್ತ ಕೈಬೀಸಿದ್ದಾರೆ.

ಇದನ್ನೂ ಓದಿ: ಉಗ್ರರನ್ನು ಟಾರ್ಗೆಟ್ ಮಾಡುವಂತೆ ನಾವು ಹೇಳಿದೆವು, ಅವರು ಮೋದಿಯನ್ನು ಟಾರ್ಗೆಟ್ ಮಾಡಿದರು: ಪ್ರಧಾನಿ ಮೋದಿ

ಇದಕ್ಕೂ ಮುನ್ನ 2 ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಗುಜರಾತ್ ಭಯೋತ್ಪಾದನೆಯ ಬೇಗೆಯಲ್ಲಿ ಹಲವು ವರ್ಷಗಳ ಕಾಲ ನರಳಿತ್ತು. ಗುಜರಾತ್ ನಲ್ಲಿದ್ದ ಬಿಜೆಪಿ ಸರ್ಕಾರ ಭಯೋತ್ಪಾದಕರ ಸ್ಲೀಪರ್ ಸೆಲ್ ಗಳನ್ನು ನಿಗ್ರಹಿಸುವ ಮೂಲಕ ಉಗ್ರವಾದವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದರೆ, ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರ ಭಯೋತ್ಪಾದಕರನ್ನು ಬಿಡುಗಡೆ ಮಾಡುವ ಕೆಲಸ ಮಾಡುತ್ತಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಜರಾತಿನಲ್ಲಿ ಅಂತಿಮ ಸುತ್ತಿನ ಪ್ರಚಾರ: ಸೂರತ್​​ನಲ್ಲಿ ನಡೆಯಲಿದೆ ಅರವಿಂದ ಕೇಜ್ರಿವಾಲ್, ಮೋದಿ ರ್ಯಾಲಿ

ನಾವು ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದು ಮನವಿ ಮಾಡಿದರೆ ಅವರು ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದರು. ಅದರಿಂದಾಗಿ ಭಯೋತ್ಪಾದಕರಿಗೆ ಭಯವೇ ಇಲ್ಲದಂತಾಯಿತು. ಭಯೋತ್ಪಾದನೆ ಹೆಚ್ಚಾಗಿ ಈಗ ದೊಡ್ಡ ನಗರಗಳಿಗೂ ವ್ಯಾಪಿಸಿದೆ ಎಂದು ಮೋದಿ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ವ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?