Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan Politics: ಟಿಕೆಟ್​ಗೆ ಭವಾನಿ ರೇವಣ್ಣ ಪಟ್ಟು, ಕುಮಾರಸ್ವಾಮಿ ಪೆಟ್ಟು; ದೇವೇಗೌಡರ ಮುಂದೆ ನ್ಯಾಯ ಪಂಚಾಯ್ತಿ

ಹಾಸನದಿಂದ ಸ್ಪರ್ಧಿಸೋಕೆ ಭವಾನಿ ರೇವಣ್ಣ ಇಚ್ಚಿಸಿದ್ದು, ಆದರೆ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ ನಿರಾಕರಿಸಿದ್ದು ಮೇಲ್ನೋಟಕ್ಕೆ ಜೆಡಿಎಸ್​ ಕುಟುಂಬದಲ್ಲೇ ಭಿನ್ನಾಬಿಪ್ರಾಯ ಮೂಡಿದಂತಾಗಿದೆ.

Hassan Politics: ಟಿಕೆಟ್​ಗೆ ಭವಾನಿ ರೇವಣ್ಣ ಪಟ್ಟು, ಕುಮಾರಸ್ವಾಮಿ ಪೆಟ್ಟು; ದೇವೇಗೌಡರ ಮುಂದೆ ನ್ಯಾಯ ಪಂಚಾಯ್ತಿ
ಭವಾನಿ ರೇವಣ್ಣ (ಎಡಚಿತ್ರ) ಹೆಚ್​ ಡಿ ಕುಮಾರಸ್ವಾಮಿ (ಬಲಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 25, 2023 | 12:04 PM

ಹಾಸನ: ಹಾಸನದಿಂದ ಸ್ಪರ್ಧಿಸೋಕೆ ಭವಾನಿ ರೇವಣ್ಣ (Bhavani Revanna) ಇಚ್ಚಿಸಿದ್ದು, ಆದರೆ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ (HD Kumaraswamy) ನಿರಾಕರಿಸಿದ್ದಾರೆ. ನಿನ್ನೆ (ಜ.24) ಹಾಸನ ಕ್ಷೇತ್ರದಿಂದ ಟಿಕೇಟ್​ ನನಗೆ ನೀಡುತ್ತಾರೆ ಎಂದು ಬಹಿರಂಗವಾಗಿಯೇ ಘೋಷಿಸಿದ್ದರು. ಆದರೆ ಕುಮಾರಸ್ವಾಮಿ ಟಿಕೇಟ್​ ನೀಡುವುದು ಬೇಡ್ವೇ ಬೇಡ ಅಂತಿದ್ದಾರೆ. ಇನ್ನು ಭವಾನಿ ರೇವಣ್ಣ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಭವಾನಿ ರೇವಣ್ಣ ಸ್ವಯಂ ಟಿಕೆಟ್ ಘೋಷಿಸಿಕೊಂಡಿದ್ದಾರಾ? ಅಲ್ಲದೇ ಮಾಜಿ ಸಚಿವ, ಪತಿ ರೇವಣ್ಣ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ.  ಮಾಜಿ ಪ್ರಧಾನಿ ಹೆಚ್.ಡಿ.‌ದೇವೇಗೌಡರ (HD Devegowda) ಮನವೊಲಿಸಲು ರೇವಣ್ಣ ಮೂಲಕ ಕಸರತ್ತು ನಡೆಯುತ್ತಿದೆ.

ದೇವೇಗೌಡರ ಮತ್ತು ಕುಮಾರಸ್ವಾಮಿ ಅವರ ಜೊತೆ ಮಾತಾಡಿ ಟಿಕೆಟ್ ಕೊಡಿಸುವಂತೆ ಭವಾನಿ ರೇವಣ್ಣ ಹಠ  ಹಿಡಿದಿದ್ದಾರೆ. ಇನ್ನು ರೇವಣ್ಣ, ಪತ್ನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಮಾತ್ರ ಭವಾನಿ ರೇವಣ್ಣಗೆ ಟಿಕೆಟ್ ನೀಡಲು ಒಪ್ಪುತ್ತಿಲ್ಲ.

ಇದನ್ನೂ ಓದಿ: ಗುಜರಾತ್ ಮಾದರಿಯಲ್ಲಿ ಅಭ್ಯರ್ಥಿ ಆಯ್ಕೆ: ಈ ಬಾರಿ ಹಾಸನ ಟಿಕೆಟ್ ಸಿಗುವ ಅನುಮಾನ ವ್ಯಕ್ತಿಪಡಿಸಿದ ಪ್ರೀತಂಗೌಡ

ಭವಾನಿ ರೇವಣ್ಣಗೆ ಟಿಕೇಟ್ ಕೊಟ್ಟರೆ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡಿದ ಆರೋಪಕ್ಕೆ ಗುರಿಯಾಗುವ ಆತಂಕ ಇದೆ. 4 ಭಾರಿ ಶಾಸಕರಾಗಿ ಪಕ್ಷಕ್ಕೆ ದುಡಿದಿದ್ದ ದಿವಂಗತ ಹೆಚ್.ಎಸ್. ಪ್ರಕಾಶ್ ಕುಟುಂಬಕ್ಕೆ ದ್ರೋಹ‌ ಮಾಡಿದರು ಎಂಬ ಕಳಂಕ  ಬರುತ್ತದೆ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣನೆ ಮಾಡಿದಂತಾಗುತ್ತದೆ ಎಂದು ಜನರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ. ಈ ಹಿನ್ನೆಲೆ ಕುಮಾರಸ್ವಾಮಿ ಹೆಚ್.ಪಿ. ಸ್ವರೂಪ್​ಗೆ ಟಿಕೆಟ್ ನೀಡುವ ಮನಸ್ಸು ಮಾಡಿದ್ದಾರೆ. ಇನ್ನು ಹೆಚ್.ಪಿ. ಸ್ವರೂಪ್, ದಿವಂಗತ ಮಾಜಿ ಶಾಸಕ ಹೆಚ್.ಎಸ್.‌ಪ್ರಕಾಶ್ ಅವರ ಪುತ್ರ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:57 am, Wed, 25 January 23

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ