AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ಜೆಡಿಎಸ್ ಟಿಕೆಟ್ ಫೈಟ್; ಅಭ್ಯರ್ಥಿ ಘೋಷಣೆಗೂ ಮುನ್ನವೇ ಸ್ವರೂಪ್​ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್​ಗೆ ಶುಕ್ರವಾರ ಬಿ ಫಾರಂ ನೀಡಿರುವುದು ಕುತೂಹಲ ಹೆಚ್ಚಿಸಿದೆ.

Hassan: ಜೆಡಿಎಸ್ ಟಿಕೆಟ್ ಫೈಟ್; ಅಭ್ಯರ್ಥಿ ಘೋಷಣೆಗೂ ಮುನ್ನವೇ ಸ್ವರೂಪ್​ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿImage Credit source: FILE
Follow us
Ganapathi Sharma
|

Updated on:Apr 14, 2023 | 4:55 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಬಿ ಪಾರಂ ಪಡೆದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ, ಜೆಡಿಎಸ್​​ (JDS) ಪಕ್ಷದಿಂದ ಹಾಸನ ಕ್ಷೇತ್ರದ ಟಿಕೆಟ್ ಪಡೆಯಲು ಪೈಪೋಟಿಯೂ ಹೆಚ್ಚಾಗಿದೆ. ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಸ್ವರೂಪ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ರೇವಣ್ಣ ಹಾಗೂ ಕುಮಾರಸ್ವಾಮಿ ಮಧ್ಯೆ ಟಿಕೆಟ್ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಉಭಯರೂ ತಮ್ಮ ಕಡೆಯವರಿಗೇ ಟಿಕೆಟ್​ ಸಿಗಬೇಕೇಂದು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಹೆಚ್​ಡಿ ಕುಮಾರಸ್ವಾಮಿ ಅವರು ಸ್ವರೂಪ್​ಗೆ (Swaroop) ಶುಕ್ರವಾರ ಬಿ ಫಾರಂ ನೀಡಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ ನಡೆಯುತ್ತಿದ್ದು, ಬಸವನಗುಡಿ ಕ್ಷೇತ್ರದ ಅಭ್ಯರ್ಥಿ ಅರಮನೆ ಶಂಕರ್​, ಯಾದಗಿರಿ ಜಿಲ್ಲೆ ಶಹಾಪುರ ಕ್ಷೇತ್ರದ ಅಭ್ಯರ್ಥಿ ಗುರುಪಾಟೀಲ್​ ಸೇರಿದಂತೆ ಅನೇಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ. ಇದೇ ವೇಳೆ ಹಾಸನದ ಅಭ್ಯರ್ಥಿ ಘೋಷಣೆಯಾಗದಿದ್ದರೂ ಸ್ವರೂಪ್​ಗೆ ಬಿ ಫಾರಂ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿರುವ ಕಾರಣ ಜೆಡಿಎಸ್​​ ಇನ್ನೂ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಅತ್ತ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಭವಾನಿ ರೇವಣ್ಣ ಅವರಿಗೆ ಕೊಡದಿದ್ದರೆ ತಮಗೂ ಹೊಳೆನರಸೀಪುರ ಕ್ಷೇತ್ರದ ಟಿಕೆಟ್ ಬೇಡ ಎಂದು ಹೆಚ್​ಡಿ ರೇವಣ್ಣ ಪಟ್ಟುಹಿಡಿದಿದ್ದಾರೆ. ಮತ್ತೊಂದೆಡೆ, ಸಾಮಾನ್ಯ ಕಾರ್ಯಕರ್ತನಿಗೇ ಹಾಸನದ ಟಿಕೆಟ್ ನೀಡುತ್ತೇನೆ ಎಂಬ ನಿಲುವಿಗೆ ಬದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ. ಇದೀಗ ಸ್ವರೂಪ್​ಗೆ ಬಿ ಫಾರಂ ನೀಡಿರುವುದು ಕುತೂಹಲ ಹೆಚ್ಚಿಸಿದೆ.

ದತ್ತಾ ಜೆಡಿಎಸ್​ ಸೇರ್ಪಡೆ ಬಗ್ಗೆಯೂ ವ್ಯಂಗ್ಯವಾಡಿದ್ದ ಹೆಚ್​​ಡಿಕೆ

ಚಿಕ್ಕಮಗಳೂರಿನ ಕಡೂರು ಕ್ಷೇತ್ರದಲ್ಲಿ ವೈಎಸ್​ವಿ ದತ್ತಾ ಜೆಡಿಎಸ್​ಗೆ ಮರಳಿರುವುದಕ್ಕೂ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದರು. ದತ್ತಾ ಅಂತರರಾಷ್ಟ್ರೀಯ ಮಟ್ಟದ ಪಕ್ಷ ಸೇರಲು ಹೋಗಿದ್ದವರು. ಅವರ ಬಗ್ಗೆ ಹೆಚ್ಚು ಮಾತನಾಡಲಾರೆ. ದೇವೇಗೌಡರು ಹೇಳಿದ್ದಕ್ಕೆ ಪಕ್ಷಕ್ಕೆ ಮರಳಿದ್ದೇನೆ ಎಂದಿದ್ದಾರೆ. ಈ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ವಿಶೇಷವೆಂದರೆ, ಹೆಚ್​ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರು ದತ್ತಾ ನಿವಾಸಕ್ಕೆ ತೆರಳಿ ಅವರನ್ನು ಜೆಡಿಎಸ್​ಗೆ ಸೇರ್ಪಡೆ ಮಾಡಿಕೊಂಡಿದ್ದರು. ಆದರೆ, ಕಡೂರು ಕ್ಷೇತ್ರದಿಂದ ಈಗಾಗಲೇ ಜೆಡಿಎಸ್ ಟಿಕೆಟ್ ಪಡೆದಿರುವ ಧನಂಜಯ್ ಅವರು ದತ್ತಾ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳು ಜೆಡಿಎಸ್​​ನಲ್ಲಿ ಒಡಕು ಹೆಚ್ಚಾಗುವ ಸುಳಿವನ್ನು ನೀಡಿರುವುದಂತೂ ನಿಜ ಎನ್ನಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Fri, 14 April 23

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?