AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hekani Jakhalu: ನಾಗಾಲ್ಯಾಂಡ್​ನ ಮೊದಲ ಮಹಿಳಾ ಶಾಸಕಿಯಾಗಿ ಹೆಕಾನಿ ಜಖಾಲು ಆಯ್ಕೆ

60 ವರ್ಷಗಳ ನಂತರ ಇಂದು ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಮಿತ್ರಪಕ್ಷವಾದ ಎನ್‌ಡಿಪಿಪಿಯ ಹೆಕಾನಿ ಜಖಾಲು (Hekani Jakhalu) ಅವರು ದಿಮಾಪುರ್ 3 ಕ್ಷೇತ್ರದಿಂದ ಗೆದ್ದಿದ್ದಾರೆ.

Hekani Jakhalu: ನಾಗಾಲ್ಯಾಂಡ್​ನ ಮೊದಲ ಮಹಿಳಾ ಶಾಸಕಿಯಾಗಿ ಹೆಕಾನಿ ಜಖಾಲು ಆಯ್ಕೆ
ಹೆಕಾನಿ ಜಖಾಲು
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk|

Updated on:Mar 02, 2023 | 2:18 PM

Share

ಕೋಹಿಮ: ನಾಗಾಲ್ಯಾಂಡ್ (Nagaland) ರಾಜ್ಯ ಸ್ಥಾನಮಾನವನ್ನು ಪಡೆದ 60 ವರ್ಷಗಳ ನಂತರ ಇಂದು ಮೊದಲ ಬಾರಿ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಮಿತ್ರಪಕ್ಷವಾದ ಎನ್‌ಡಿಪಿಪಿಯ ಹೆಕಾನಿ ಜಖಾಲು (Hekani Jakhalu) ಅವರು ದಿಮಾಪುರ್ 3 ಕ್ಷೇತ್ರದಿಂದ ಗೆದ್ದಿದ್ದಾರೆ. ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರಲ್ಲಿ 48 ವರ್ಷದ ವಕೀಲೆ ಹೆಕಾನಿ ಜಖಾಲು ಒಬ್ಬರು. ಪಶ್ಚಿಮ ಅಂಗಮಿ ಕ್ಷೇತ್ರದಲ್ಲಿ ಎನ್‌ಡಿಪಿಪಿಯ ಮತ್ತೊಬ್ಬ ಮಹಿಳಾ ಅಭ್ಯರ್ಥಿ ಸಲ್ಹೌಟುನೊ ಕ್ರೂಸ್ ಮುನ್ನಡೆಯಲ್ಲಿದ್ದಾರೆ. ಆಡಳಿತಾರೂಢ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ ರಾಜ್ಯದಲ್ಲಿ ಮೂರು ಸ್ಥಾನಗಳನ್ನು ಗೆದ್ದು 35ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

ಮುಖ್ಯಮಂತ್ರಿ ನೈಫಿಯು ರಿಯೊ ನೇತೃತ್ವದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯು 2018 ರ ಕೊನೆಯ ಚುನಾವಣೆಯಿಂದ ಬಿಜೆಪಿಯೊಂದಿಗೆ ಮೈತ್ರಿಯಲ್ಲಿದೆ. ಹಿಂದಿನ ಚುನಾವಣೆಯಲ್ಲಿ ಮೈತ್ರಿಕೂಟವು 30 ಸ್ಥಾನಗಳನ್ನು ಗೆದ್ದಿದ್ದರೆ ಎನ್‌ಪಿಎಫ್ 26 ಸ್ಥಾನಗಳನ್ನು ಗೆದ್ದಿತ್ತು. ತ್ರಿಪುರಾದಲ್ಲಿ ಪಕ್ಷವು ಬಹುಪಾಲು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ನಾಗಾಲ್ಯಾಂಡ್‌ನಲ್ಲಿ ತನ್ನ ಮೈತ್ರಿ ಸರ್ಕಾರವು ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿರುವಂತೆ ತೋರುತ್ತಿರುವಾಗ ಈಶಾನ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಶಾಂತಿ ಮತ್ತು ಅಭಿವೃದ್ಧಿಯ ಕಾರ್ಯಸೂಚಿಯನ್ನು ಬಿಜೆಪಿ ಗುರುವಾರ ಶ್ಲಾಘಿಸಿದೆ.

ಇದನ್ನೂ ಓದಿ: Nagaland Election 2023: ನಾಗಾಲ್ಯಾಂಡ್ ಉತ್ತಮ ರಸ್ತೆಗಳು, ವಿದ್ಯುತ್, ನೀರು ಸರಬರಾಜು, ಉದ್ಯೋಗಗಳ ಕೊರತೆಯಿಂದ ಬಳಲುತ್ತಿದೆ: ಕಾಂಗ್ರೆಸ್

ಹೆದ್ದಾರಿ ನಿರ್ಮಾಣದಂತಹ ದೊಡ್ಡ ಯೋಜನೆಗಳಾಗಲಿ ಅಥವಾ ಕುಡಿಯುವ ನೀರು, ಉಚಿತ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತಹ ಯೋಜನೆಗಳಾಗಲಿ, ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ತರಲು ಕೇಂದ್ರವು ಎಷ್ಟು ನಿಕಟವಾಗಿ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿದೆ ಎಂಬುದನ್ನು ಈ ಪ್ರದೇಶದ ಜನರು ಮೊದಲ ಬಾರಿಗೆ ನೋಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದರು.

Published On - 2:12 pm, Thu, 2 March 23