Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಕಟ್ಟಿನಲ್ಲಿ ನಾನು ಮೋದಿಯವರಿಗೆ ಸಹಾಯ ಮಾಡಿದ್ದೆ: ಶರದ್ ಪವಾರ್

ಆಗಿನ ಗುಜರಾತ್ ಮುಖ್ಯಮಂತ್ರಿ ಮೋದಿ ಒಮ್ಮೆ ನನಗೆ ಕರೆ ಮಾಡಿ, ಅಲ್ಲಿನ ವಿಶಿಷ್ಟ ಕೃಷಿ ತಂತ್ರಗಳನ್ನು ಅಧ್ಯಯನ ಮಾಡಲು ಇಸ್ರೇಲ್‌ಗೆ ಭೇಟಿ ನೀಡಬೇಕೆಂದು ಹೇಳಿದರು. ಅವರು ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಂಡು ನನ್ನ ಬಳಿಗೆ ಬರುತ್ತಿದ್ದರು. ನನ್ನನ್ನು ಗುಜರಾತ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಒಮ್ಮೆ ಅವರು ಇಸ್ರೇಲ್‌ಗೆ ಭೇಟಿ ನೀಡಲು ಬಯಸಿದ್ದರಿಂದ ನಾನು ಅವರನ್ನು ಅಲ್ಲಿಗೆ ಕರೆದುಕೊಂಡು ಹೋದೆ

ಬಿಕ್ಕಟ್ಟಿನಲ್ಲಿ ನಾನು ಮೋದಿಯವರಿಗೆ ಸಹಾಯ ಮಾಡಿದ್ದೆ: ಶರದ್ ಪವಾರ್
ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on:May 16, 2024 | 4:35 PM

ಮುಂಬೈ ಮೇ 16: ರೈತರ ಸಂಕಷ್ಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶರದ್ ಪವಾರ್ (Sharad Pawar) ಅವರನ್ನು ಟೀಕಿಸಿದ ಒಂದು ದಿನದ ನಂತರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP-SP) ಮುಖ್ಯಸ್ಥರು, ಅವರು ಕೇಂದ್ರ ಸಚಿವರಾಗಿದ್ದಾಗ (2004-2014) ಆಗಿನ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಮೋದಿಯವರಿಗೆ ಸಹಾಯ ಮಾಡಿದ್ದರು ಎಂದು ಹೇಳಿದ್ದಾರೆ. ಶರದ್ ಪವಾರ್ ಅವರು 2004 ರಿಂದ 2014 ರವರೆಗೆ ಕೇಂದ್ರ ಕೃಷಿ ಸಚಿವರಾಗಿದ್ದರು. ಒಂದು ಸಂದರ್ಭದಲ್ಲಿ, ಆಗಿನ ಗುಜರಾತ್ ಮುಖ್ಯಮಂತ್ರಿ ಒಮ್ಮೆ ನನಗೆ ಕರೆ ಮಾಡಿ, ಅಲ್ಲಿನ ವಿಶಿಷ್ಟ ಕೃಷಿ ತಂತ್ರಗಳನ್ನು ಅಧ್ಯಯನ ಮಾಡಲು ಇಸ್ರೇಲ್‌ಗೆ ಭೇಟಿ ನೀಡಬೇಕೆಂದು ಹೇಳಿದರು. ಅವರು ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಂಡು ನನ್ನ ಬಳಿಗೆ ಬರುತ್ತಿದ್ದರು. ನನ್ನನ್ನು ಗುಜರಾತ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಒಮ್ಮೆ ಅವರು ಇಸ್ರೇಲ್‌ಗೆ ಭೇಟಿ ನೀಡಲು ಬಯಸಿದ್ದರಿಂದ ನಾನು ಅವರನ್ನು ಅಲ್ಲಿಗೆ ಕರೆದುಕೊಂಡು ಹೋದೆ. ನರೇಂದ್ರ ಮೋದಿ ಈಗ ಏನೇ ಹೇಳಿದರೂ ನನಗೆ ಚಿಂತೆ ಇಲ್ಲ ಎಂದು ಪವಾರ್ ಹೇಳಿದ್ದಾರೆ.

ಜುಲೈ 2017 ರಲ್ಲಿ ಇಸ್ರೇಲ್ ಗೆ ಮೋದಿ ಭೇಟಿ ನೀಡಿದಾಗ ಪ್ರಸ್ತುತ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕೇಂದ್ರ ಕೃಷಿ ಸಚಿವರಾಗಿದ್ದಾಗ ರೈತರಿಗಾಗಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿ ಶರದ್ ಪವಾರ್ ಅವರ ಹೆಸರನ್ನು ಹೇಳದೆ ಪ್ರಧಾನಿ ಮೋದಿ ಟೀಕಾ ಪ್ರಹಾರ ಮಾಡಿದ ಒಂದು ದಿನದ ನಂತರ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಕಳೆದ 10 ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಹೆಚ್ಚಿನ ಲಾಭವಾಗಿದೆ ಎಂದು ಹೇಳಿದ ಮೋದಿ, ಶರದ್ ಪವಾರ್ ಅವರು ರೈತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಟೀಕಿಸಿದ್ದರು.

ಶಿವಸೇನಾ ಮತ್ತು ಎನ್‌ಸಿಪಿಯಲ್ಲಿನ ವಿಭಜನೆಯ ನಂತರ ಕೆಲಸದಲ್ಲಿ ಬಲವಾದ ಸಹಾನುಭೂತಿಯ ಅಂಶವಿದೆ ಎಂದು ಒಪ್ಪಿಕೊಂಡಿರುವ ಶರದ್ ಪವಾರ್ ಅವರು ಗ್ರಾಮೀಣ ಬೆಲ್ಟ್‌ನಲ್ಲಿ ರೈತ ಸಮುದಾಯದೊಳಗಿನ ಭಾರೀ ಅಶಾಂತಿಯು ಬಿಜೆಪಿ ನೇತೃತ್ವದ ಮೈತ್ರಿ ವಿರುದ್ಧ ಕೆಲಸ ಮಾಡುತ್ತದೆ ಎಂದು ಹೇಳಿದರು. ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸೋಲುತ್ತದೆ ಎಂದು ಅವರು ಹೇಳಿದರು.

ಮುಂಬೈನಲ್ಲಿ ಅನೌಪಚಾರಿಕ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಪವಾರ್, ಪ್ರಧಾನಿ ನರೇಂದ್ರ ಮೋದಿ ಪರವಾಗಿ ಯಾವುದೇ ಸ್ಪಷ್ಟವಾದ ಅಲೆ ಇಲ್ಲ ಎಂದಿದ್ದಾರೆ.

“ಬಿಜೆಪಿಯು 272 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದರೆ, ಮೋದಿಯವರೇ ಅವರೇ ಪಕ್ಕಕ್ಕೆ ಸರಿಯುತ್ತಾರೆ ..ರೈತ ಸಮುದಾಯದೊಳಗಿನ ಅಶಾಂತಿಯು ಒಂದು ಸಮಸ್ಯೆಯಾಗಿ ಮಾರ್ಪಟ್ಟಿದೆ, ಇದು ಬಿಜೆಪಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಕ್ಕೆ ಹಾನಿಕಾರಕವಾಗಿದೆ” ಎಂದು ಪವಾರ್ ಹೇಳಿದರು.

ಇದನ್ನೂ ಓದಿ: ನಾನು ಸದಾ ಮಹಿಳೆಯರ ಪರ; ಸ್ವಾತಿ ಮಲಿವಾಲ್ ಪ್ರಕರಣಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

ಈ ಹಿಂದೆ ಮೋದಿ ಅವರೇ ಸ್ವಾಮಿನಾಥನ್ ಆಯೋಗದ ವರದಿಗೆ ಒತ್ತು ನೀಡುತ್ತಿದ್ದರು, ಆದರೆ ಬಿಜೆಪಿ ವರದಿಯ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಪವಾರ್ ಹೇಳಿದ್ದಾರೆ. ರೈತರು ಸ್ವಾಮಿನಾಥನ್ ಆಯೋಗದ ಮಾರ್ಗಸೂಚಿಗಳನ್ನು ಚೆನ್ನಾಗಿ ತಿಳಿದಿದ್ದಾರೆ ಮತ್ತು ಅವರು ಆಗಾಗ್ಗೆ ಈ ಪ್ರಶ್ನೆಗಳನ್ನು ಕೇಳುತ್ತಾರೆ.

ನಿರುದ್ಯೋಗ ಮತ್ತು ಹಣದುಬ್ಬರವನ್ನು ಪ್ರಮುಖ ಸಮಸ್ಯೆಗಳೆಂದು ಹೇಳಿದ ಪವಾರ್, “ಪ್ರಸಕ್ತ ಚುನಾವಣೆಯಲ್ಲಿ ರಾಮಮಂದಿರವು ಚುನಾವಣಾ ಉದ್ದೇಶ ಅಲ್ಲ” ಎಂದು ಹೇಳಿದರು. ಚುನಾವಣಾ ಬಾಂಡ್‌ಗಳ ವಿಚಾರವಾಗಿ ಮಾತನಾಡಿದ ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥರು, ಪ್ರತಿಪಕ್ಷಗಳು ಇದನ್ನು ಉತ್ತಮ ರೀತಿಯಲ್ಲಿ ಜನರ ಬಳಿಗೆ ಕೊಂಡೊಯ್ಯಬಹುದಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Thu, 16 May 24

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ