AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ

ಡಾಲ್‌ಹೌಸಿ, ಕಸುಂಪ್ಟಿ, ಚೋಪಾಲ್, ಅರ್ಕಿ, ಚಂಬಾ ಮತ್ತು ಚುರಾ ಮುಂತಾದ ಕ್ಷೇತ್ರಗಳಲ್ಲಿ  ಹೆಚ್ಚು ಜನರು ಆಪ್​​ಗಿಂತ ನೋಟಾಗೆ ಹೆಚ್ಚು ಮತ ಹಾಕಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 08, 2022 | 9:49 PM

Share

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ (AAP) ಒಟ್ಟು ಚಲಾವಣೆಯಾದ ಮತಗಳಲ್ಲಿ ಕೇವಲ 1.10 ಪ್ರತಿಶತದಷ್ಟು ಮತಗಳನ್ನು ಗಳಿಸಿದೆ. ಇಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷಕ್ಕೆ ಹಲವಾರು ಕ್ಷೇತ್ರಗಳಲ್ಲಿ ನೋಟಾಕ್ಕಿಂತ ಕಡಿಮೆ ಮತ ಸಿಕ್ಕಿದೆ. ‘None Of The Above ಅಥವಾ ನೋಟಾ’ ಆಯ್ಕೆಯು ಮತದಾರರು ಯಾವುದೇ ಅಭ್ಯರ್ಥಿಗೆ ಮತ ಚಲಾಯಿಸಲು ಬಯಸುವುದಿಲ್ಲ ಎಂದು ಸೂಚಿಸಲು ಅನುಮತಿಸುತ್ತದೆ. ಇಲ್ಲಿ ಒಟ್ಟಾರೆ ನೋಟಾ ಮತಗಳ ಪ್ರಮಾಣ ಶೇ.0.60ರಷ್ಟಿತ್ತು. ಡಾಲ್‌ಹೌಸಿ, ಕಸುಂಪ್ಟಿ, ಚೋಪಾಲ್, ಅರ್ಕಿ, ಚಂಬಾ ಮತ್ತು ಚುರಾ ಮುಂತಾದ ಕ್ಷೇತ್ರಗಳಲ್ಲಿ  ಹೆಚ್ಚು ಜನರು ಆಪ್​​ಗಿಂತ ನೋಟಾಗೆ(NOTA) ಹೆಚ್ಚು ಮತ ಹಾಕಿದ್ದಾರೆ. ಎಎಪಿಯ ಕಳಪೆ ಪ್ರದರ್ಶನವು ಸುಮಾರು ನಾಲ್ಕು ದಶಕಗಳಿಂದ ರಾಜ್ಯದಲ್ಲಿ ಪರ್ಯಾಯವಾಗಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಾಬಲ್ಯವನ್ನು ಎದುರಿಸಲು ರಾಜ್ಯದಲ್ಲಿ ಬಲವಾದ ಮೂರನೇ ಶಕ್ತಿಯಾಗಿ ಹೊರಹೊಮ್ಮುವ ಭರವಸೆಯನ್ನು ಹಾಳುಮಾಡಿದೆ. ನವೆಂಬರ್ 12 ರ ಚುನಾವಣೆಗೆ ಒಂದು ತಿಂಗಳ ಮೊದಲು ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಿಮಾಚಲದಲ್ಲಿ ರ್ಯಾಲಿ, ರೋಡ್ ಶೋಗಳೊಂದಿಗೆ ಪ್ರಚಾರ ನಡೆಸಿದ್ದರು. ಆದರೆ ಗುಜರಾತಿನಲ್ಲಿ ಹೆಚ್ಚಿನ ಗಮನ ವಹಿಸಿರುವುದರಿಂದ ಅದೇ ಜೋಶ್​​ನಲ್ಲಿ ಹಿಮಾಚಲದಲ್ಲಿ ಪ್ರಚಾರ ನಡೆಸಿರಲಿಲ್ಲ.

ಮಾಸ್ ಲೀಡರ್‌ನ ಅನುಪಸ್ಥಿತಿಯು ಕಾರ್ಯಕರ್ತರನ್ನು ನಿರಾಸೆಗೊಳಿಸಿತು. ಸತ್ಯೇಂದ್ರ ಜೈನ್ ಅವರ ಬಂಧನ ಮತ್ತು ಮನೀಶ್ ಸಿಸೋಡಿಯಾ ಅವರ ನಿವಾಸದಲ್ಲಿ ತನಿಖಾ ಸಂಸ್ಥೆಯ ದಾಳಿಗಳು ಆಪ್ ಉತ್ಸಾಹವನ್ನು ಕುಗ್ಗಿಸಿತು. ಪಕ್ಷವು 68 ಸ್ಥಾನಗಳಲ್ಲಿ 67 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ನಾವು ಪೌಂಟಾ ಸಾಹಿಬ್, ಇಂದೋರಾ ಮತ್ತು ನಲಗಢದಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದೆವು. ಆದರೆ ಫಲಿತಾಂಶಗಳು ಅನುಕೂಲಕರವಾಗಿಲ್ಲ. ನಾವು ಈಗಷ್ಟೇ ಪ್ರಾರಂಭಿಸಿದ್ದೇವೆ ಮತ್ತು ಸಾಕಷ್ಟು ದೂರ ಸಾಗಬೇಕಾಗಿದೆ. ಇದು ನಮ್ಮ ಮೊದಲ ಚುನಾವಣೆ ಮತ್ತು ಕೊನೆಯ ಚುನಾವಣೆಯಲ್ಲ ಎಂದು ಎಎಪಿ ರಾಜ್ಯ ಅಧ್ಯಕ್ಷರು ಸುರ್ಜಿತ್ ಸಿಂಗ್ ಠಾಕೂರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ರಾಜ್ಯದಲ್ಲಿ ಸಂಘಟನೆಯನ್ನು ಬಲಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ನಾಲ್ಕು ಬಾರಿ ಶಾಸಕ ಮತ್ತು ಮಾಜಿ ಸಂಸದ ರಾಜನ್ ಸುಶಾಂತ್, ಕಸೌಲಿಯಿಂದ ಬಿಜೆಪಿಯ ಮಾಜಿ ನಾಯಕ ಹರ್ಮೆಲ್ ಧಿಮಾನ್, ಪೌಂಟಾ ಸಾಹಿಬ್‌ನಿಂದ ಮನೀಶ್ ಠಾಕೂರ್, ಸೋಲನ್‌ನಿಂದ ಮಾಜಿ ಕಾಂಗ್ರೆಸ್ ನಾಯಕ ಧರಂ ಪಾಲ್ ಚೌಹಾನ್ ಮತ್ತು ದೇಶದ ಕಿರಿಯ ಅಭ್ಯರ್ಥಿ ನಾಚನ್‌ನಿಂದ ಸರಪಂಚ್ ಜಬ್ನಾ ಚೌಹಾಣ್ ಸೇರಿದಂತೆ ಎಎಪಿ ಅಭ್ಯರ್ಥಿಗಳ ಬಗ್ಗೆ ಹೆಚ್ಚು ಮಾತನಾಡುವ ಯಾರೊಬ್ಬರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಪ್ರಚಾರ ವೇಳೆ ಆಪ್ ಹಲವಾರು ಭರವಸೆಗಳನ್ನು ನೀಡಿತ್ತು. ಸರ್ಕಾರಿ ವಲಯದ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಬಹಿರಂಗವಾಗಿ ಆಪ್ ಬೆಂಬಲಕ್ಕೆ ಬಂದಿತು. ಮತದಾರರಿಗೆ ಉಚಿತ ವಿದ್ಯುತ್, ಮಹಿಳೆಯರಿಗೆ ₹ 1,000 ‘ಸಮ್ಮಾನ ರಾಶಿ’, ಯುವಕರಿಗೆ ಉದ್ಯೋಗ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಮತ್ತು ಗ್ರಾಮೀಣ ಮೂಲಸೌಕರ್ಯಗಳ ಸುಧಾರಣೆ ಮೊದಲಾದ ಆರು ಭರವಸೆಗಳನ್ನು ಆಪ್ ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್