AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಹಿಮಾಚಲ ಪ್ರದೇಶ ಚುನಾವಣೆ: 46 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪತ್ರಿಕಾ ಪ್ರಕಟಣೆ ತಿಳಿಸಿದೆ.

Breaking News ಹಿಮಾಚಲ ಪ್ರದೇಶ ಚುನಾವಣೆ: 46 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 18, 2022 | 9:44 PM

Share

ದೆಹಲಿ: ನವೆಂಬರ್ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ (Himachal Pradesh Assembly elections) ಕಾಂಗ್ರೆಸ್ 46 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ (Congress) ಕೇಂದ್ರ ಚುನಾವಣಾ ಸಮಿತಿಯು ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಟ್ಟಿಯಲ್ಲಿರುವ ಪ್ರಮುಖ ಹೆಸರುಗಳಲ್ಲಿ ವಿಕ್ರಮಾದಿತ್ಯ ಸಿಂಗ್, ಮಾಜಿ ಮುಖ್ಯಮಂತ್ರಿ ಎಂ ವೀರಭದ್ರ ಸಿಂಗ್ ಅವರ ಪುತ್ರ, ವಿರೋಧ ಪಕ್ಷದ ನಾಯಕ (LoP) ಮುಖೇಶ್ ಅಗ್ನಿಹೋತ್ರಿ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಇದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಖೇಶ್ ಅಗ್ನಿಹೋತ್ರಿ ಹರೋಲಿಯಿಂದ ಸ್ಪರ್ಧಿಸಲಿದ್ದು, ಆಶಾ ಕುಮಾರಿ ಡಾಲ್ಹೌಸಿಯಿಂದ ಸ್ಪರ್ಧಿಸಲಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುಖವಿಂದರ್ ಸಿಂಗ್ ಸುಖು ಅವರ  ನಾದೌನ್ ಮತ್ತು ಕುಲದೀಪ್ ಸಿಂಗ್ ರಾಥೋಡ್ ಅವರು ಥಿಯೋಗ್‌ನಿಂದ ಕಣಕ್ಕಿಳಿಯಲಿದ್ದಾರೆ.

57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು  ಇಂದು ಬಿಡುಗಡೆ ಮಾಡಲಾಗುವುದು ಮತ್ತು ಉಳಿದ 11 ಅಭ್ಯರ್ಥಿಗಳ ಹೆಸರನ್ನು ನಂತರ ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಭಾನುವಾರ ಹೇಳಿದ್ದರು. ಅದೇ ದಿನ ಸಂಜೆ, ಕಾಂಗ್ರೆಸ್ ಎಲ್ಲಾ 68 ಅಭ್ಯರ್ಥಿಗಳ ಹೆಸರನ್ನು ಸೋಮವಾರ ಘೋಷಿಸಲಿದೆ ಎಂದು ಲಂಬಾ ಹೇಳಿದರು.ಅಂತಿಮವಾಗಿ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಮಂಗಳವಾರ) ಪ್ರಕಟಿಸಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ನಂತರ ಪ್ರಕಟಿಸಲಾಗುವುದು.

ಹಿಮಾಚಲ ಪ್ರದೇಶದ  68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.  ಪ್ರಸ್ತುತ ಇಲ್ಲಿನ ವಿಧಾನಸಭೆಯಲ್ಲಿ ಬಿಜೆಪಿ 43 ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್‌ನ 22, ಇಬ್ಬರು ಪಕ್ಷೇತರರು  ಮತ್ತು ಒಬ್ಬ ಸಿಪಿಎಂ ಶಾಸಕ ಇದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ನವೆಂಬರ್ 12 ರಂದು ನಡೆಯಲಿರುವ ರಾಜ್ಯ ಚುನಾವಣೆಗೆ ಮಂಡಿ ಜಿಲ್ಲೆಯ ಸೆರಾಜ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಂಗಳವಾರ ತಿಳಿಸಿದೆ.

ಅಕ್ಟೋಬರ್ 17 ರಂದು ರಾಜ್ಯ ಚುನಾವಣೆಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 27 ರಂದು ಪತ್ರಿಕೆಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 29 ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 55,74,793 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

Published On - 9:15 pm, Tue, 18 October 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ