AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Exit Poll 2022: ಸರ್ವೆಯಲ್ಲಿ ಬಹುತೇಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ

ಗುಜರಾತ್ ಎಕ್ಸಿಟ್‌ಪೋಲ್‌ನ ಜೊತಗೆ ಹಿಮಾಚಲ ಪ್ರದೇಶ ಮತದಾನೋತ್ತರ ಸಮೀಕ್ಷೆಯೂ ಹೊರಬಿದ್ದಿದೆ. ಹಾಗಾದ್ರೆ, ಹಿಮಾಚಲ ಪ್ರದೇಶದಲ್ಲಿ ಯಾರು ಗದ್ದುಗೆ ಏರಲಿದ್ದಾರೆ. ಎಕ್ಸಿಟ್ ಪೋಲ್ ರಿಪೋರ್ಟ್ ಏನು..? ಇಲ್ಲಿದೆ ನೋಡಿ

Himachal Pradesh Exit Poll 2022: ಸರ್ವೆಯಲ್ಲಿ ಬಹುತೇಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ
BJP
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2022 | 8:09 PM

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ (Himachal Pradesh Assembly Election) ಮತದಾನ ಮುಕ್ತಾಯಗೊಂಡಿದ್ದು, ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು (Himachal Pradesh Assembly Election Exit Poll Results 202) ಹೊರಬಿದ್ದಿವೆ. ಬಿಜೆಪಿಯೇ ಬಹುದೊಡ್ಡ ಪಕ್ಷವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಶೇ 75.6ರಷ್ಟು ಮತದಾನವಾಗಿತ್ತು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 35 ಆಗಿದೆ. ಸಮೀಕ್ಷೆಯ ಪ್ರಕಾರ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಹಾಗಾದ್ರೆ ಎಕ್ಸಿಟ್​ ಪೋಲ್​ಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Gujarat Exit Poll 2022 ಗುಜರಾತ್‌ನಲ್ಲಿ ಮತ್ತೆ ಕೇಸರಿ ಬಾವುಟ ಹಾರಾಡೋದು ಫಿಕ್ಸ್, ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಟಿವಿ9 ಭಾರತ್ ವರ್ಷ್ ಸಮೀಕ್ಷೆ

ಹಿಮಾಚಲ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಟಿವಿ9 ಭಾರತ್ ವರ್ಷ್ ನಡೆಸಿದ ಸಮೀಕ್ಷೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರೆತಿಲ್ಲ. ಇದು ಭಾರೀ ಕುತೂಹಲಕ್ಕೆ ಮೂಡಿಸಿದೆ. ಬಿಜೆಪಿ 32ರಿಂದ 34, ಕಾಂಗ್ರೆಸ್ 30ರಿಂದ 32, ಆಮ್‌ ಆದ್ಮಿ ಶೂನ್ಯ ಸಾಧನೆ ಮಾಡುತ್ತೆ ಎಂದು ಅಂದಾಜಿಸಿದ್ರೆ, ಪಕ್ಷೇತರರರು ಮೂರರಿಂದ 5 ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ.

ರಿಪಬ್ಲಿಕ್ ಮತ್ತು ಪಿ ಮಾರ್ಕ್ ನಡೆಸಿದ ಸರ್ವೆ

ಹಾಗೆಯೇ ರಿಪಬ್ಲಿಕ್ ಮತ್ತು ಪಿ ಮಾರ್ಕ್ ನಡೆಸಿದ ಸರ್ವೆ ಪ್ರಕಾರ ಬಿಜೆಪಿ 34ರಿಂದ 39 ಸ್ಥಾನ, ಕಾಂಗ್ರೆಸ್ 28ರಿಂದ 33 ಕ್ಷೇತ್ರದಲ್ಲಿ ಆಪ್‌ ಒಂದರಲ್ಲಿ, ಪಕ್ಷೇತರರಿಗೆ 1ರಿಂದ 4 ಸ್ಥಾನ ಲಭಿಸೋ ಸಾಧ್ಯತೆ ಇದೆ. ಇನ್ನೂ ಟೈಮ್ಸ್ ನೌ-ಇಟಿಜಿ ಸರ್ವೆ ಪ್ರಕಾರ ಬಿಜೆಪಿಗೆ 38, ಕಾಂಗ್ರೆಸ್‌ಗೆ 28 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ.

ನ್ಯೂಸ್ ಎಕ್ಸ್ ಮತ್ತು ಜನ್ ಕಿ ಬಾತ್ ಸರ್ವೆ

ಇನ್ನೂ ನ್ಯೂಸ್ ಎಕ್ಸ್ ಮತ್ತು ಜನ್ ಕಿ ಬಾತ್ ಸರ್ವೆಯಲ್ಲಿ ಬಿಜೆಪಿಗೆ 32ರಿಂದ 40 ಸ್ಥಾನ, ಕಾಂಗ್ರೆಸ್‌ 27ರಿಂದ 34 ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಗೆಯೇ ಝೀ ನ್ಯೂಸ್ ಪೋಲ್‌ನಲ್ಲಿ ಬಿಜೆಪಿಗೆ 35ರಿಂದ 40, ಕಾಂಗ್ರೆಸ್‌ಗೆ 20ರಿಂದ 25, ಆಪ್‌ ಮೂರು ಸ್ಥಾನದಲ್ಲಿ ವಿಜಯಪತಾಕೆ ಹಾರಿಸುವ ಸಾಧ್ಯತೆ ಇದೆ.

ಆಜ್‌ ತಕ್, ಇಂಡಿಯಾಟುಡೆ ಆಕ್ಸಿಸ್ ಮೈ ಇಂಡಿಯಾ ಸರ್ವೆ ತದ್ವಿರದ್ಧವಾಗಿದ್ದು ಕಾಂಗ್ರೆಸ್‌ಗೆ ಬಹುಮತ ಸಿಗುವ ಸಾಧ್ಯತೆ ಇದೆ ಅಂತಾ ಲೆಕ್ಕಾ ಹಾಕಿದೆ. ಬಿಜೆಪಿಗೆ 24ರಿಂದ 34, ಕಾಂಗ್ರೆಸ್‌ 30ರಿಂದ 40 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.

ಇಂಡಿಯಾ ಟಿವಿ ಸಮೀಕ್ಷೆ

ಇಂಡಿಯಾ ಟಿವಿ ಸಮೀಕ್ಷೆಯಲ್ಲಿ ಬಿಜೆಪಿಗೆ ಅಧಿಕಾರ ಸಾಧ್ಯತೆ ಇದ್ದು, ಬಿಜೆಪಿ 35 ರಿಂದ 40 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್​ಗೆ 26-31 ಸ್ಥಾನಗಳು ಸಿಗುವ ಸಾಧ್ಯತೆಗಳಿವೆ. ಇನ್ನು ಆಮ್​ ಆದ್ಮಿ ಪಕ್ಷ 0, ಇತರರು 3 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದೆ.

ಒಟ್ಟಿನಲ್ಲಿ ಬಹುತೇಕ ಸರ್ವೆಯಲ್ಲಿ ಬಿಜೆಪಿಯೇ ಈ ಬಾರಿ ಅಧಿಕಾರದ ಗದ್ದುಗೆ ಏರಲಿದೆ ಅನ್ನೋ ಲೆಕ್ಕ ಹೊರಬಿದ್ದಿದೆ. ಡಿಸೆಂಬರ್ 8ರಂದು ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಯಾರಿಗೆ ಗೆಲುವು ಅನ್ನೋದು ಬಯಲಾಗಲಿದೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್