AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 8ಕ್ಕೆ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ; ಕಾಂಗ್ರೆಸ್​ಗೆ ಆಪರೇಷನ್ ಕಮಲದ ಭೀತಿ

HP Assembly Election Results: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರಕ್ಕೆ ಹೆದರಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಛತ್ತೀಸ್‌ಗಢಕ್ಕೆ ಕರೆದೊಯ್ಯುವ ಪ್ಲಾನ್ ಮಾಡಿದೆ.

ಡಿ. 8ಕ್ಕೆ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ; ಕಾಂಗ್ರೆಸ್​ಗೆ ಆಪರೇಷನ್ ಕಮಲದ ಭೀತಿ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 26, 2022 | 1:11 PM

Share

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ (Himachal Pradesh Elections 2022) ಮತದಾನ ಅಂತ್ಯವಾಗಿದೆ. ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿದೆ. ಈ ಮಧ್ಯೆ ಕಾಂಗ್ರೆಸ್​ಗೆ (Congress) ತನ್ನ ಶಾಸಕರನ್ನು ಕಳೆದುಕೊಳ್ಳುವ ಅಭದ್ರತೆ ಕಾಡುತ್ತಿದೆ. ಈ ಬಾರಿ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ (BJP) ಹಾಗೂ ಕಾಂಗ್ರೆಸ್ ನಡುವೆ ನೇರಾನೇರ ಫೈಟ್ ನಡೆದಿದೆ. ಯಾವುದೇ ಪಕ್ಷ ಗೆದ್ದರೂ ಅಂಚಿನ ಗೆಲುವಾಗಿರಲಿದೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ. ಹೀಗಾಗಿ, ಆಪರೇಷನ್ ಕಮಲದ‌ ಮೂಲಕ ಶಾಸಕರ ಖರೀದಿ ನಡೆಯಬಹುದು ಎನ್ನುವ ಆತಂಕದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೇರೆಡೆ ಶಿಫ್ಟ್ ಮಾಡಲು ಈಗಾಗಲೇ ಹೈಕಮಾಂಡ್ ಸೂಚನೆ ನೀಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರಕ್ಕೆ ಹೆದರಿರುವ ಕಾಂಗ್ರೆಸ್ ತನ್ನ ಶಾಸಕರನ್ನು ಛತ್ತೀಸ್‌ಗಢಕ್ಕೆ ಕರೆದೊಯ್ಯುವ ಪ್ಲಾನ್ ಮಾಡಿದೆ. ಡಿಸೆಂಬರ್ 8ರಂದು ನಡೆಯುವ ಮತ ಎಣಿಕೆಯ ನಂತರ ಸ್ಪಷ್ಟ ಬಹುಮತ ಸಿಗದೆ ಇದ್ದರೆ ಎನ್ನುವ ಆತಂಕದಲ್ಲಿ ಹೈಕಮಾಂಡ್ ಕಾರ್ಯೋನ್ಮುಖವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರು ಡಿಸೆಂಬರ್ 7ರಂದು ಹಿಮಾಚಲ ಪ್ರದೇಶದಲ್ಲಿ ಬೀಡು ಬಿಡಲು ಸಿದ್ಧತೆ ನಡೆಸಿದ್ದಾರೆ. ಅಭ್ಯರ್ಥಿಗಳ ರಕ್ಷಿಸುವ ಹೊಣೆಯನ್ನು ರಾಜ್ಯ ಚುನಾವಣಾ ಮೇಲ್ವಿಚಾರಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೊತ್ತಿದ್ದಾರೆ.

ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಮತದಾನ; 2ನೇ ಬಾರಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಕಾಂಗ್ರೆಸ್‌ನ ಕೇಂದ್ರ ಮತ್ತು ರಾಜ್ಯ ನಾಯಕರು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಗೋವಾ ಮತ್ತು ಮಹಾರಾಷ್ಟ್ರದ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕರು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಅದೇ ಭಯ ಈಗ ಹಿಮಾಚಲದಲ್ಲೂ ಕಾಂಗ್ರೆಸ್ ಪಕ್ಷದ ನಾಯಕರನ್ನು ಕಾಡಲಾರಂಭಿಸಿದೆ.

ಈ ಬಾರಿ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಹಲವು ಬಂಡಾಯಗಾರರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾರೆ. ಅನೇಕ ಸ್ವತಂತ್ರ ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೆ ಸರ್ಕಾರ ರಚನೆಗೆ ಮೈತ್ರಿ ರಾಜಕಾರಣ ಶುರುವಾಗಲಿದೆ. ಇದರಿಂದ ಭಯಗೊಂಡಿರುವ ಕಾಂಗ್ರೆಸ್ ಈಗಲೇ ಮುಂಬರುವ ಯೋಜನೆಗೆ ಚಾಲನೆ ನೀಡಿದೆ. ಸ್ಪಷ್ಟ ಬಹುಮತ ಸಿಗದಿದ್ದಲ್ಲಿ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸಲು ಛತ್ತೀಸ್‌ಗಢ ಅತ್ಯಂತ ಸುರಕ್ಷಿತ ಸ್ಥಳವಾಗಿದೆಬೆಂದು ಹೈಕಮಾಂಡ್ ಅರಿತಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಫೈಟ್ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಹಿಮಾಚಲದ ಶಾಸಕರನ್ನು ರಾಜಸ್ಥಾನಕ್ಕೆ ಕರೆದುಕೊಂಡು ಹೋಗಲು ಹೈಕಮಾಂಡ್ ಒಪ್ಪಿಲ್ಲ.

ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶ ಚುನಾವಣೆ; ಮತಯಂತ್ರ ಸೇರಿತು 412 ಅಭ್ಯರ್ಥಿಗಳ ಭವಿಷ್ಯ

ಈ ಹಿಂದೆ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಾಜೀವ್ ಶುಕ್ಲಾ ಅವರು ಎಲ್ಲಾ ಅಭ್ಯರ್ಥಿಗಳೊಂದಿಗೆ ಆನ್‌ಲೈನ್ ಸಭೆಯಲ್ಲಿ ಕುದುರೆ ವ್ಯಾಪಾರದ ಬಗ್ಗೆ ಚರ್ಚಿಸಿದ್ದರು. ಬಿಜೆಪಿ ಹಿಮಾಚಲದಲ್ಲಿ ಸರ್ಕಾರ ರಚಿಸಲು ಎಲ್ಲಾ ತಂತ್ರಗಳನ್ನು ಅನುಸರಿಸಬಹುದು ಎಂದು‌ ಶುಕ್ಲಾ ತಮ್ಮ ಎಲ್ಲಾ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

(ವರದಿ: ಹರೀಶ್, ನವದೆಹಲಿ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ