AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HP Assembly Elections 2022: ಮತದಾನದಲ್ಲಿ ಹೊಸ ದಾಖಲೆ ಸೃಷ್ಟಿಸಿ; ಹಿಮಾಚಲ ಪ್ರದೇಶದ ಜನರಿಗೆ ಮೋದಿ ಮನವಿ

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

HP Assembly Elections 2022: ಮತದಾನದಲ್ಲಿ ಹೊಸ ದಾಖಲೆ ಸೃಷ್ಟಿಸಿ; ಹಿಮಾಚಲ ಪ್ರದೇಶದ ಜನರಿಗೆ ಮೋದಿ ಮನವಿ
ನರೇಂದ್ರ ಮೋದಿ
TV9 Web
| Edited By: |

Updated on:Nov 12, 2022 | 9:24 AM

Share

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ (Himachal Pradesh Elections 2022) ನಡೆಯುತ್ತಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಮತದಾರರಿಗೆ ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇಂದು ಮೊದಲ ಬಾರಿಗೆ ಮತದಾನ ಮಾಡಲಿರುವ ಯುವ ಮತದಾರರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

“ಇಂದು ಹಿಮಾಚಲ ಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ದೇವಭೂಮಿಯ ಎಲ್ಲಾ ಮತದಾರರು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ ಉತ್ಸಾಹದಿಂದ ಭಾಗವಹಿಸಲು ಮತ್ತು ಮತದಾನದ ಹೊಸ ದಾಖಲೆಯನ್ನು ಸೃಷ್ಟಿಸಲು ನಾನು ವಿನಂತಿಸುತ್ತೇನೆ” ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇಂದು ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಎಲ್ಲಾ ಯುವ ಜನತೆಗೆ ನನ್ನ ವಿಶೇಷ ಶುಭಾಶಯಗಳು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಇಂದು ವಿಧಾನಸಭಾ ಚುನಾವಣೆ; ಮತದಾನ ಆರಂಭ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಮಾಚಲ ಪ್ರದೇಶದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ “ಬಲಿಷ್ಟ ಸರ್ಕಾರ”ವನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶವನ್ನು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿಡುವ ಮೂಲಕ ದೇವಭೂಮಿಯ ಜನರ ಆಕಾಂಕ್ಷೆಗಳನ್ನು ಬಲಿಷ್ಠ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮಾತ್ರ ಈಡೇರಿಸಬಲ್ಲದು. ನಾನು ಹಿಮಾಚಲದ ಮತದಾರರಿಗೆ, ವಿಶೇಷವಾಗಿ ತಾಯಂದಿರು, ಸಹೋದರಿಯರು ಮತ್ತು ಯುವಜನರಿಗೆ ಬಲಶಾಲಿ ಸರ್ಕಾರವನ್ನು ಆಯ್ಕೆ ಮಾಡುವಂತೆ ಮನವಿ ಮಾಡುತ್ತೇನೆ. ರಾಜ್ಯದ ಸುವರ್ಣ ಭವಿಷ್ಯಕ್ಕಾಗಿ ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಅಮಿತ್ ಶಾ ಹೇಳಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 am, Sat, 12 November 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ