AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಮತದಾನ; 2ನೇ ಬಾರಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಮತದಾನ ಆರಂಭವಾಗುತ್ತಿದ್ದಂತೆ ಠಾಕೂರ್ ಅವರು ಮಂಡಿಯ ಸೆರಾಜ್‌ನ ಬಾಗ್‌ಶಿಯಾದ್‌ನಲ್ಲಿ ಮತ ಚಲಾಯಿಸಿದರು. ಹಿಮಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

HP Assembly Elections 2022: ಹಿಮಾಚಲ ಪ್ರದೇಶದಲ್ಲಿ ಮತದಾನ; 2ನೇ ಬಾರಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ
ಹಿಮಾಚಲ ಪ್ರದೇಶದಲ್ಲಿ ಮತ ಚಲಾಯಿಸಿದ ಮಹಿಳೆಯರು
TV9 Web
| Edited By: |

Updated on: Nov 12, 2022 | 2:11 PM

Share

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಂದೇ ಹಂತದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. 68 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು 55 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ (BJP) ಐತಿಹಾಸಿಕ ಜಯಭೇರಿ ಬಾರಿಸುತ್ತದೆಯೇ? ಎಂಬುದು ಇಂದು ನಿರ್ಧಾರವಾಗಲಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ (Jai Ram Thakur) ಮತ್ತೆ ಸ್ಪರ್ಧಿಸುತ್ತಿರುವ ಸೆರಾಜ್ ಪ್ರಮುಖ ಕ್ಷೇತ್ರವಾಗಿದೆ. ಕಳೆದ ಬಾರಿಯೂ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚೇತ್ರಂ ಠಾಕೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಮಹೀಂದರ್ ರಾಣಾ ಸಿಪಿಐಎಂ ಅಭ್ಯರ್ಥಿಯಾಗಿದ್ದಾರೆ.

  1. ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಅಧಿಕಾರದಲ್ಲಿ ಇರುವುದರಿಂದ ಈ “ಡಬಲ್ ಇಂಜಿನ್” ಸರ್ಕಾರದ ಬಗ್ಗೆ ನಿರೀಕ್ಷೆಗಳು ಸಾಕಷ್ಟಿವೆ. ಹಿಮಾಚಲ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಇದು ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ. ಅವರು ಗುಡ್ಡಗಾಡು ರಾಜ್ಯದಲ್ಲಿ ಸತತ 2ನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಆಡಳಿತಾರೂಢ ಬಿಜೆಪಿಯ ‘ಮಿಷನ್’ನ ಪ್ರಮುಖ ಮುಖವಾಗಿದ್ದಾರೆ.
  2. 2017 ರ ವಿಧಾನಸಭಾ ಚುನಾವಣೆಯಲ್ಲಿ ಉನ್ನತ ಹುದ್ದೆಗೆ ಏರಲು ಕಾರಣವಾದ ಸಂದರ್ಭಗಳಿಂದಾಗಿ ಜನರಿಂದ ಆಗಾಗ್ಗೆ “ಆಕಸ್ಮಿಕ ಸಿಎಂ” ಎಂದು ಕರೆಯಲ್ಪಟ್ಟಿರುವ ಜೈರಾಮ್ ಠಾಕೂರ್, ಈ ಬಾರಿ ಗೆದ್ದು ತೋರಿಸಬೇಕಾದ ಅನಿವಾರ್ಯತೆಯಿದೆ.
  3. ಮತದಾನ ಆರಂಭವಾಗುತ್ತಿದ್ದಂತೆ ಠಾಕೂರ್ ಅವರು ಮಂಡಿಯ ಸೆರಾಜ್‌ನ ಬಾಗ್‌ಶಿಯಾದ್‌ನಲ್ಲಿ ಮತ ಚಲಾಯಿಸಿದರು ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಜನರು ಈ ಸರ್ಕಾರವನ್ನು ಪುನರಾವರ್ತಿಸಲು ಬಯಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ನಾನು ಇಂದು ಬೆಳಿಗ್ಗೆ ಶುಭಾಶಯಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಸ್ವಲ್ಪ ಸಮಯದ ಹಿಂದೆ ನಾನು ಪ್ರಧಾನಿ ಮೋದಿಯವರ ಸಂದೇಶವನ್ನು ಸ್ವೀಕರಿಸಿದ್ದೇನೆ, ಅವರು ನನಗೆ ತಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ನೀಡಿದರು” ಎಂದು ಠಾಕೂರ್ ಹೇಳಿದರು.
  4. 21 ಬಂಡಾಯಗಾರರನ್ನು ಹೊಂದಿರುವ ಬಿಜೆಪಿಯ ರಾಷ್ಟ್ರೀಯ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೂ ಈ ಸ್ಪರ್ಧೆಯು ಪ್ರತಿಷ್ಠೆಯ ವಿಷಯವಾಗಿದೆ. ಅವರು ಒಮ್ಮೆ ಪ್ರೇಮ್ ಕುಮಾರ್ ಧುಮಾಲ್ ನೇತೃತ್ವದಲ್ಲಿ ಹಿಮಾಚಲ ಪ್ರದೇಶದಲ್ಲಿ ಸಚಿವರಾಗಿದ್ದರು. ಧುಮಾಲ್ ಈ ಬಾರಿಯ ಚುನಾವಣಾ ಅಖಾಡದಲ್ಲಿದ್ದಾರೆ. ವಯಸ್ಸಾಗಿದ್ದರೂ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಪಕ್ಷದೊಳಗೆ ಅಸಮಾಧಾನ ಉಂಟಾಗಿತ್ತು. ಹೀಗಾಗಿ, ಅವರೀಗ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.
  5. ಹಿಮಾಚಲ ಪ್ರದೇಶದಲ್ಲಿ ಒಟ್ಟು 5,592,828 ನೋಂದಾಯಿತ ಮತದಾರರಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ 75.57% ಮತದಾನವಾಗಿದೆ. ಮತದಾರರ ಪೈಕಿ 2,854,945 ಮತದಾರರು ಪುರುಷ ಮತ್ತು 2,737,845 ಮಹಿಳೆಯರಿದ್ದಾರೆ. ಒಟ್ಟು 121,409 ಮತದಾರರು 80 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.
  6. ಬಿಜೆಪಿಯು ತನ್ನ ಹಿಂದುತ್ವ ಸಿದ್ಧಾಂತದ ಆಕ್ರಮಣಕಾರಿ ಮುಖವೆಂದು ಪರಿಗಣಿಸಲ್ಪಟ್ಟಿರುವ ಕೇಂದ್ರ ಸಚಿವರು ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹಿಮಾಚಲದಲ್ಲಿ ಪ್ರಚಾರಕ್ಕೆ ಕರೆದೊಯ್ದಿತ್ತು. ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರ್ಯಾಲಿಗಳನ್ನು ನಡೆಸಿದ್ದರು. ಆದರೆ ಅವರ ಸಹೋದರ ರಾಹುಲ್ ಗಾಂಧಿ ಚುನಾವಣಾ ಪ್ರಚಾರದ ಬದಲು ‘ಭಾರತ್ ಜೋಡೋ ಯಾತ್ರೆ’ಯನ್ನು ಮುಂದುವರೆಸುವ ನಿರ್ಧಾರ ಮಾಡಿದ್ದರು. ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಹಿಮಾಚಲ ಪ್ರದೇಶದಲ್ಲಿ ಪ್ರಚಾರ ನಡೆಸಿದ್ದರು.
  7. ಮುಂದಿನ ತಿಂಗಳು ಮತದಾನ ನಡೆಯಲಿರುವ ಪ್ರಧಾನಿ ಮೋದಿಯವರ ಭದ್ರಕೋಟೆಯಾದ ಗುಜರಾತ್‌ನಲ್ಲಿ ಕಾಂಗ್ರೆಸ್ ಕಡಿಮೆ ಪ್ರಚಾರವನ್ನು ನಡೆಸುತ್ತಿದೆಯಾದರೂ, ಅದರ ಬದಲು ಹಿಮಾಚಲ ಪ್ರದೇಶದಲ್ಲಿ ವಿಜಯ ಪತಾಕೆ ಹಾರಿಸಬೇಕಾದ ಅಗತ್ಯ ಕಾಂಗ್ರೆಸ್​ಗಿದೆ. ಸುಮಾರು 2 ವರ್ಷಗಳಲ್ಲಿ 9 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲು ಅಥವಾ ತನ್ನ ಪರಿಣಾಮ ಬೀರಲು ವಿಫಲವಾಗಿದೆ. ಇದು ಕಾಂಗ್ರೆಸ್​ಗೆ ದೊಡ್ಡ ಹಿನ್ನಡೆಯಾಗಿದೆ. ಈ ವರ್ಷದ ಆರಂಭದಲ್ಲಿ ಹಿಮಾಚಲದ ನೆರೆಯ ರಾಜ್ಯ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ಅಧಿಕಾರವನ್ನು ಕಳೆದುಕೊಂಡಿತು. ಎಎಪಿ ಹಿಮಾಚಲದಲ್ಲಿ ಸ್ಪರ್ಧಿಸುತ್ತಿದೆ, ಆದರೆ, ಅದರ ಮುಖ್ಯ ಗುರಿ ಗುಜರಾತ್​ ಆಗಿದೆ.
  8. ಹಿಮಾಚಲ ಪ್ರದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿರುವ ಕಾರಣ 2004ರ ಹಿಂದಿನ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಕಾಂಗ್ರೆಸ್‌ನ ಭರವಸೆಯು ಬಿಜೆಪಿಗೆ ಪ್ರಮುಖ ಸಮಸ್ಯೆಯಾಗಿದೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು 8 ಲಕ್ಷ ಉದ್ಯೋಗಗಳನ್ನು ಜಾರಿಗೊಳಿಸುವುದಾಗಿ ಬಿಜೆಪಿ ಭರವಸೆ ನೀಡಿದೆ.
  9. ಸೆರಾಜ್‌ನಿಂದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಲ್ಲದೆ, ಕಸುಂಪ್ಟಿಯಿಂದ ಸಚಿವ ಸುರೇಶ್ ಭಾರದ್ವಾಜ್, ಹರೋಲಿಯಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ, ಶಿಮ್ಲಾ ಗ್ರಾಮಾಂತರದಿಂದ ವಿಕ್ರಮಾದಿತ್ಯ ಸಿಂಗ್ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
  10. ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗವು ದೂರದ ಪ್ರದೇಶಗಳಲ್ಲಿ ಮೂರು ಸೇರಿದಂತೆ 7,884 ಮತಗಟ್ಟೆಗಳನ್ನು ಸ್ಥಾಪಿಸಿದೆ. 52 ಮತದಾರರಿಗೆ 15,256 ಅಡಿ ಎತ್ತರದಲ್ಲಿರುವ ಲಾಹೌಲ್-ಸ್ಪಿಟಿ ಜಿಲ್ಲೆಯ ಕಾಜಾದಲ್ಲಿರುವ ತಾಶಿಗಂಗ್‌ನಲ್ಲಿ ಇದರ ಅತಿ ಎತ್ತರದ ಮತಗಟ್ಟೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?