AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ಮೋದಿ ಹಾಳು ಮಾಡುತ್ತಿದ್ದಾರೆ: ಚಿದಂಬರಂ

ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ನೀವು ಕಮಲ ಮಾತ್ರ ನೆನಪಿಟ್ಟುಕೊಳ್ಳಬೇಕು

ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ಮೋದಿ ಹಾಳು ಮಾಡುತ್ತಿದ್ದಾರೆ: ಚಿದಂಬರಂ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 06, 2022 | 5:37 PM

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ (P Chidambaram)ಆರ್‌ಎಸ್‌ಎಸ್ ಜಾರಿಗೆ ತರಲು ಬಯಸುತ್ತಿರುವ ರಾಷ್ಟ್ರಪತಿ  ಸರ್ಕಾರವು “ಬಹುಸಂಖ್ಯಾತವಾದ” ವನ್ನು ಭದ್ರಪಡಿಸುತ್ತದೆ ಎಂದು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ ಚಿದಂಬರಂ, ಅಲ್ಲಿ ಅವರು “ಕಮಲ” (ಬಿಜೆಪಿಯ ಚುನಾವಣಾ ಚಿಹ್ನೆ) ಅನ್ನು ಬೆಂಬಲಿಸಲು ಜನರಲ್ಲಿ ಕೇಳಿದರು. ಆ ಮತಗಳು ಅವರಿಗೆ “ಆಶೀರ್ವಾದ”. ಜನರು ಅಭ್ಯರ್ಥಿಯನ್ನು ನೆನಪಿಟ್ಟುಕೊಳ್ಳುವ ಬದಲು “ಕಮಲ್ ಕಾ ಫೂಲ್”(ಕಮಲ ಹೂ) ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದರು. ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಮತದಾರರು ನೆನಪಿಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಮಾನ್ಯ ಪ್ರಧಾನಮಂತ್ರಿ ಹೇಳಿದರು, ಮಾನ್ಯ ಪ್ರಧಾನಿಗಳು ಕಮಲಕ್ಕೆ ಮತ ನೀಡಿ, ಮೋದಿಗೆ ಮತ ಎಂದು ಕೂಡ ಹೇಳಿದ್ದಾರೆ. ಸಂಸದೀಯ ಚರ್ಚೆಗಳು ಮತ್ತು ಪತ್ರಿಕಾಗೋಷ್ಠಿಗಳನ್ನು ದೂರವಿಟ್ಟಿರುವ ಗೌರವಾನ್ವಿತ ಪ್ರಧಾನಿ ಈಗ ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ಮೂಲವನ್ನು ದುರ್ಬಲಗೊಳಿಸುತ್ತಿದ್ದಾರೆ” ಎಂದು ಮಾಜಿ ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.

“ಆರೆಸ್ಸೆಸ್ ಮತ್ತು ಅದರ ಭಕ್ತರು ರಾಷ್ಟ್ರಪತಿ ರೂಪದ ಸರ್ಕಾರವನ್ನು ಪ್ರಾರಂಭಿಸುವ ಬಯಕೆಯನ್ನು ದೀರ್ಘಕಾಲದಿಂದ ಪೋಷಿಸಿದ್ದಾರೆ ಎಂದು ನಮಗೆ ತಿಳಿದಿದೆ” ಎಂದು ಚಿದಂಬರಂ ಹೇಳಿದರು.+

ರಾಷ್ಟ್ರಪತಿ ರೂಪದ ಸರ್ಕಾರವು ದೇಶದಲ್ಲಿ ” ಬಹುಸಂಖ್ಯಾತವಾದ ” ವನ್ನು ಸ್ಥಾಪಿಸುತ್ತದೆ ಮತ್ತು ಬಹುತ್ವವನ್ನು ಕೊಲ್ಲುತ್ತದೆ ಎಂದು ಅವರು ಹೇಳಿದರು.

ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ನೀವು ಕಮಲ ಮಾತ್ರ ನೆನಪಿಟ್ಟುಕೊಳ್ಳಬೇಕು. ನಾನು ಕಮಲದೊಂದಿಗೆ ನಿಮ್ಮ ಬಳಿಗೆ ಬಂದಿದ್ದೇನೆ, ನೀವು ಮತ ಹಾಕಲು ಹೋದಾಗ ಮತ್ತು ಕಮಲವನ್ನು ನೋಡಿದಾಗ, ಬಿಜೆಪಿ ಮತ್ತು ಮೋದಿ ನಿಮ್ಮ ಬಳಿಗೆ ಬಂದಿದ್ದಾರೆ ಎಂದು ನೀವು ತಿಳಿದುಕೊಳ್ಳಬೇಕು. ಕಮಲಕ್ಕೆ ನೀವು ನೀಡುವ ಪ್ರತಿ ಮತವೂ ಮೋದಿಯವರಿಗೆ ನಿಮ್ಮ ಆಶೀರ್ವಾದವಾಗಿರುತ್ತದೆ  ಎಂದಿದ್ದಾರೆ.

Published On - 5:30 pm, Sun, 6 November 22

ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ