AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ಮೋದಿ ಹಾಳು ಮಾಡುತ್ತಿದ್ದಾರೆ: ಚಿದಂಬರಂ

ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ನೀವು ಕಮಲ ಮಾತ್ರ ನೆನಪಿಟ್ಟುಕೊಳ್ಳಬೇಕು

ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ಮೋದಿ ಹಾಳು ಮಾಡುತ್ತಿದ್ದಾರೆ: ಚಿದಂಬರಂ
TV9 Web
| Edited By: |

Updated on:Nov 06, 2022 | 5:37 PM

Share

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ತಳಹದಿಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ (P Chidambaram)ಆರ್‌ಎಸ್‌ಎಸ್ ಜಾರಿಗೆ ತರಲು ಬಯಸುತ್ತಿರುವ ರಾಷ್ಟ್ರಪತಿ  ಸರ್ಕಾರವು “ಬಹುಸಂಖ್ಯಾತವಾದ” ವನ್ನು ಭದ್ರಪಡಿಸುತ್ತದೆ ಎಂದು ಹೇಳಿದ್ದಾರೆ. ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ ಚಿದಂಬರಂ, ಅಲ್ಲಿ ಅವರು “ಕಮಲ” (ಬಿಜೆಪಿಯ ಚುನಾವಣಾ ಚಿಹ್ನೆ) ಅನ್ನು ಬೆಂಬಲಿಸಲು ಜನರಲ್ಲಿ ಕೇಳಿದರು. ಆ ಮತಗಳು ಅವರಿಗೆ “ಆಶೀರ್ವಾದ”. ಜನರು ಅಭ್ಯರ್ಥಿಯನ್ನು ನೆನಪಿಟ್ಟುಕೊಳ್ಳುವ ಬದಲು “ಕಮಲ್ ಕಾ ಫೂಲ್”(ಕಮಲ ಹೂ) ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದರು. ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಮತದಾರರು ನೆನಪಿಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಮಾನ್ಯ ಪ್ರಧಾನಮಂತ್ರಿ ಹೇಳಿದರು, ಮಾನ್ಯ ಪ್ರಧಾನಿಗಳು ಕಮಲಕ್ಕೆ ಮತ ನೀಡಿ, ಮೋದಿಗೆ ಮತ ಎಂದು ಕೂಡ ಹೇಳಿದ್ದಾರೆ. ಸಂಸದೀಯ ಚರ್ಚೆಗಳು ಮತ್ತು ಪತ್ರಿಕಾಗೋಷ್ಠಿಗಳನ್ನು ದೂರವಿಟ್ಟಿರುವ ಗೌರವಾನ್ವಿತ ಪ್ರಧಾನಿ ಈಗ ಕ್ಷೇತ್ರ ಆಧಾರಿತ ಸಂಸದೀಯ ಪ್ರಜಾಪ್ರಭುತ್ವದ ಮೂಲವನ್ನು ದುರ್ಬಲಗೊಳಿಸುತ್ತಿದ್ದಾರೆ” ಎಂದು ಮಾಜಿ ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.

“ಆರೆಸ್ಸೆಸ್ ಮತ್ತು ಅದರ ಭಕ್ತರು ರಾಷ್ಟ್ರಪತಿ ರೂಪದ ಸರ್ಕಾರವನ್ನು ಪ್ರಾರಂಭಿಸುವ ಬಯಕೆಯನ್ನು ದೀರ್ಘಕಾಲದಿಂದ ಪೋಷಿಸಿದ್ದಾರೆ ಎಂದು ನಮಗೆ ತಿಳಿದಿದೆ” ಎಂದು ಚಿದಂಬರಂ ಹೇಳಿದರು.+

ರಾಷ್ಟ್ರಪತಿ ರೂಪದ ಸರ್ಕಾರವು ದೇಶದಲ್ಲಿ ” ಬಹುಸಂಖ್ಯಾತವಾದ ” ವನ್ನು ಸ್ಥಾಪಿಸುತ್ತದೆ ಮತ್ತು ಬಹುತ್ವವನ್ನು ಕೊಲ್ಲುತ್ತದೆ ಎಂದು ಅವರು ಹೇಳಿದರು.

ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸೋಲನ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಅಭ್ಯರ್ಥಿ ಯಾರು ಎಂಬುದನ್ನು ಜನರು ನೆನಪಿನಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ನೀವು ಕಮಲ ಮಾತ್ರ ನೆನಪಿಟ್ಟುಕೊಳ್ಳಬೇಕು. ನಾನು ಕಮಲದೊಂದಿಗೆ ನಿಮ್ಮ ಬಳಿಗೆ ಬಂದಿದ್ದೇನೆ, ನೀವು ಮತ ಹಾಕಲು ಹೋದಾಗ ಮತ್ತು ಕಮಲವನ್ನು ನೋಡಿದಾಗ, ಬಿಜೆಪಿ ಮತ್ತು ಮೋದಿ ನಿಮ್ಮ ಬಳಿಗೆ ಬಂದಿದ್ದಾರೆ ಎಂದು ನೀವು ತಿಳಿದುಕೊಳ್ಳಬೇಕು. ಕಮಲಕ್ಕೆ ನೀವು ನೀಡುವ ಪ್ರತಿ ಮತವೂ ಮೋದಿಯವರಿಗೆ ನಿಮ್ಮ ಆಶೀರ್ವಾದವಾಗಿರುತ್ತದೆ  ಎಂದಿದ್ದಾರೆ.

Published On - 5:30 pm, Sun, 6 November 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!