AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ

ಕಾಂಗ್ರೆಸ್ ಗುಜರಾತ್ ಜನರ ಆದೇಶವನ್ನು "ವಿನಮ್ರವಾಗಿ ಸ್ವೀಕರಿಸುತ್ತದೆ" ಎಂದು ರಾಹುಲ್ ಹೇಳಿದ್ದಾರೆ. "ನಾವು ಪುನರ್ರಚನೆ ಮಾಡುತ್ತೇವೆ, ಶ್ರಮಿಸುತ್ತೇವೆ. ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಭರವಸೆ ಈಡೇರಿಸಲಾಗುವುದು: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ನಂತರ ರಾಹುಲ್ ಗಾಂಧಿ ಭರವಸೆ
ರಾಹುಲ್ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 08, 2022 | 7:44 PM

Share

ತಮ್ಮ ಪಕ್ಷಕ್ಕೆ ನಿರ್ಣಾಯಕ ಜನಾದೇಶ ನೀಡಿದ ಹಿಮಾಚಲ ಪ್ರದೇಶದ(Himachal Pradesh) ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಗುರುವಾರ ಧನ್ಯವಾದ ಅರ್ಪಿಸಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ಎಲ್ಲಾ ಚುನಾವಣೆಯ ಭರವಸೆಗಳನ್ನು ಈಡೇರಿಸುತ್ತದೆ ಎಂದು ಅವರು ಹೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇದುವರೆಗೆ 32 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪ್ರಸ್ತುತ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ ಇತ್ತೀಚಿನ ಅಂಕಿಅಂಶಗಳು ತಿಳಿಸಿವೆ. ಅರ್ಕಿ, ಬೈಜನಾಥ್, ಬರ್ಸರ್, ಭಟ್ಟಿಯತ್, ಚಂಬಾ, ಚಿಂತ್‌ಪೂರ್ಣಿ, ಧರ್ಮಪುರ್, ಧರ್ಮಶಾಲಾ, ಡೂನ್, ಫತೇಪುರ್, ಗ್ಯಾಗ್ರೆಟ್, ಘುಮರ್ವಿನ್, ಹರೋಲಿ, ಇಂದೋರಾ, ಜೈಸಿಂಗ್‌ಪುರ, ಜವಾಲಾಮುಖಿ, ಜವಾಲಿ, ಜುಬ್ಬಲ್-ಕೋಟ್‌ಖೈ, ಕಸೌಲಿ, ಕೊತ್ತಿಖಾಯ್, ಕಸುಲಿ, ಕಿನ್ನಾ ಕುಲು, ಕುಟ್ಲೆಹರ್, ಲಾಹೌಲ್ ಮತ್ತು ಸ್ಪಿತಿ, ಮನಾಲಿ, ನಗ್ರೋಟಾ, ನಹಾನ್, ಪಾಲಂಪುರ್, ರಾಂಪುರ್, ರೋಹ್ರು, ಶಾಹಪುರ್, ಶಿಲ್ಲೈ, ಶಿಮ್ಲಾ, ಶಿಮ್ಲಾ ಗ್ರಾಮಾಂತರ, ಸೋಲನ್, ಶ್ರೀ ರೇಣುಕಾಜಿ, ಸುಜಾನ್‌ಪುರ್ ಮತ್ತು ಥಿಯೋಗ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ನಾದೌನ್‌ನಲ್ಲಿ ಮುನ್ನಡೆ ಸಾಧಿಸುತ್ತಿದೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಒಟ್ಟು 40 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ.

ಕಾಂಗ್ರೆಸ್ ಗುಜರಾತ್ ಜನರ ಆದೇಶವನ್ನು “ವಿನಮ್ರವಾಗಿ ಸ್ವೀಕರಿಸುತ್ತದೆ” ಎಂದು ರಾಹುಲ್ ಹೇಳಿದ್ದಾರೆ. “ನಾವು ಪುನರ್ರಚನೆ ಮಾಡುತ್ತೇವೆ, ಶ್ರಮಿಸುತ್ತೇವೆ. ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಪಕ್ಷದ ಗೆಲುವಿಗೆ ಕಾರಣ ರಾಹುಲ್ ಗಾಂಧಿ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.”ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ ಕೂಡ ನಮಗೆ ಸಹಾಯ ಮಾಡಿದೆ” ಎಂದು  ಖರ್ಗೆ ಹೇಳಿದ್ದಾರೆ.ಹಿಮಾಚಲದಲ್ಲಿ  ರಾಹುಲ್ ಗಾಂಧಿ ಪ್ರಚಾರ ಮಾಡಲಿಲ್ಲ. ಆದರೆ  ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಮಾಚಲದಾದ್ಯಂತ ಹುರುಪಿನಿಂದ ಪ್ರಚಾರ ಮಾಡಿದ್ದಾರೆ. ಪ್ರಿಯಾಂಕಾ  ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸಿದ ಖರ್ಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಶೀರ್ವಾದವೂ ನಮ್ಮೊಂದಿಗಿದೆ ಎಂದು ಅವರು ಹೇಳಿದರು.

“ಜನರಿಗೆ, ನಮ್ಮ ಕಾರ್ಯಕರ್ತರು ಮತ್ತು ನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅವರ ಪ್ರಯತ್ನದಿಂದಾಗಿ ಈ ಫಲಿತಾಂಶ ಬಂದಿದೆ” ಎಂದು ಖರ್ಗೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!