AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬೆಂಗಳೂರಿನಲ್ಲಿ ಶೇ. 49 ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳ

ಮತ ಚಲಾಯಿಸಲು ಅರ್ಹತೆ ಪಡೆದ ಯುವಕರ ಸಂಖ್ಯೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.49 ರಷ್ಟು ಏರಿಕೆ ಆಗಿದೆ.

Karnataka Assembly Election 2023: ಬೆಂಗಳೂರಿನಲ್ಲಿ ಶೇ. 49 ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 29, 2023 | 7:39 AM

Share

ಬೆಂಗಳೂರು: ಚುನಾವಣಾ ಆಯೋಗ (Election Commission) ಯುವ ಮತದಾರರನ್ನು (Young Voters), ಮತದಾನ ಪ್ರಕ್ರಿಯೆಯತ್ತ ಸೆಳೆಯಲು ಸಾಕಷ್ಟು ಪ್ರಯತ್ನಪಡುತ್ತಿದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಯುವ ಮತದಾರರು, ಮತದಾನದಲ್ಲಿ ಪಾಲ್ಗೊಳ್ಳುವಂತೆ ಚುನಾವಣಾ ಆಯೋಗ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇದರ ಪ್ರತಿಫಲವಾಗಿ ಮತ ಚಲಾಯಿಸಲು ಅರ್ಹತೆ ಪಡೆದ ಯುವಕರ ಸಂಖ್ಯೆ ಬೆಂಗಳೂರು ನಗರ ಜಿಲ್ಲೆಯಲ್ಲಿ (Bengaluru Urban District) ಶೇ.49 ರಷ್ಟು ಏರಿಕೆ ಆಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ (Bengaluru Zilla Panchayat) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಮಾತನಾಡಿ, ಬೆಂಗಳೂರಿನಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಈಗ 1.1 ಲಕ್ಷ ದಾಟಿದೆ. ಬೆಂಗಳೂರು ನಗರ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. (ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ) ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ

ವಿಶೇಷವಾಗಿ ಈ ಬಾರಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೆಚ್ಚಿನಸಂಖ್ಯೆಯಲ್ಲಿ ಪ್ರಜ್ಞಾವಂತ ಮತದಾರರು ಮತ್ತು ತೃಯಲಿಂಗಿಗಳು ಮುಂದೆ ಬಂದಿದ್ದಾರೆ. ಜಿಲ್ಲೆಯಲ್ಲಿ 16,000 ಇದ್ದ ತೃಯಲಿಂಗಿ ಸಮುದಾಯದ ಮತದಾರರ ಸಂಖ್ಯೆ 30,000 ಕ್ಕೆ ಏರಿದೆ. ಇದು ಶೇ. 53 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.

ಕೈಗಾರಿಕೆಗಳು, ವಸತಿ ಸಮುಚ್ಚಯಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳ ಆವರಣದಲ್ಲಿ ಮತದಾನ-ಜಾಗೃತಿ ಚಟುವಟಿಕೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 am, Wed, 29 March 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ