AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚುನಾವಣೆ ಗೆಲುವು ಸೋಲಿನ ಮೇಲೆ ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ನಡೆದಿದೆ. ಬರೊಬ್ಬರಿ 73.19 ಪ್ರತಿಶತ ರಾಜ್ಯದಲ್ಲಿ ಮತದಾನ ಮಾಡಿದ್ದಾರೆ. ಈಗಾಗಲೇ ಕ್ಷೇತ್ರಗಳಲ್ಲಿ ಸೋಲು ಗೆಲುವಿನ ಮಾತು ಕೇಳಿ ಬರುತ್ತಿದೆ. ಅದರಂತೆ ಇದೀಗ ಚುನಾವಣೆ ಗೆಲುವು ಸೋಲಿನ ಬೆಟ್ಟಿಂಗ್‌ ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿರುವ ಕುರಿತು ಹೆಚ್.ಡಿ ಕೋಟೆ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

ಮೈಸೂರು: ಚುನಾವಣೆ ಗೆಲುವು ಸೋಲಿನ ಮೇಲೆ ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್
ಮೈಸೂರು ಚುನಾವಣಾ ಬೆಟ್ಟಿಂಗ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 12, 2023 | 7:54 AM

Share

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಮೇ.10 ರಂದು ನಡೆದಿದೆ. ಬರೊಬ್ಬರಿ 73.19 ಪ್ರತಿಶತ ರಾಜ್ಯದಲ್ಲಿ ಮತದಾನ ಮಾಡಿದ್ದಾರೆ. ಈಗಾಗಲೇ ಕ್ಷೇತ್ರಗಳಲ್ಲಿ ಸೋಲು ಗೆಲುವಿನ ಮಾತು ಕೇಳಿ ಬರುತ್ತಿದೆ. ಅದರಂತೆ ಇದೀಗ ಚುನಾವಣೆ ಗೆಲುವು ಸೋಲಿನ ಬೆಟ್ಟಿಂಗ್‌ ಛಾಪಾಕಾಗದದಲ್ಲಿ 5ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿರುವ ಕುರಿತು ಹೆಚ್.ಡಿ ಕೋಟೆ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಜಯರಾಮ ನಾಯಕ, ಪ್ರಕಾಶ್ ಹಾಗೂ ಶಿವರಾಜ್ ನಡುವೆ ಅಗ್ರಿಮೆಂಟ್ ಮಾಡಿಕೊಳ್ಳಲಾಗಿದ್ದು, ಪ್ರಕಾಶ್ ಹಾಗೂ ಶಿವರಾಜ್ ಜೆಡಿಎಸ್ ಅಭ್ಯರ್ಥಿ ಪರ ಮತ್ತು ಜಯರಾಮ ನಾಯ್ಕ‌ ಕಾಂಗ್ರೆಸ್ ಅಭ್ಯರ್ಥಿ ಪರ ತಲಾ 5 ಲಕ್ಷ ಬೆಟ್ಟಿಂಗ್ ಕಟ್ಟಿ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಹೌದು ಇಬ್ಬರ 10 ಲಕ್ಷ ಹಣವನ್ನ ಪೂಜಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ‌ ನೇಮಿಚಂದ್ ಬಳಿ ನೀಡಲಾಗಿರುವ ಬಗ್ಗೆ ಉಲ್ಲೇಖವಾಗಿದ್ದು, ಒಂದು ವೇಳೆ ಬಿಜೆಪಿ ಗೆದ್ದರೆ ಇಬ್ಬರು ಹಣ ವಾಪಸ್ಸು ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ; ಕಾಂಗ್ರೆಸ್ ಮುಖಂಡನಿಂದ 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್

ಮೈಸೂರು: ನಗರದಲ್ಲಿ ಬೆಟ್ಟಿಂಗ್ ಭರಾಟೆ ಮುಂದುವರೆದಿದೆ. ಕಾಂಗ್ರೆಸ್ ಮುಖಂಡ ಜಮೀನು ಬೆಟ್ಟಿಂಗ್ ಸವಾಲು ಹಾಕಿದ್ದಾನೆ. ಹೌದು ಪಿರಿಯಾಪಟ್ಟಣ ತಾಲ್ಲೂಕು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ ಎಂಬಾತ ಪಿರಿಯಾಪಟ್ಟಣ ಕೈ ಅಭ್ಯರ್ಥಿ ಕೆ ವೆಂಕಟೇಶ್ ಗೆಲ್ಲುತ್ತಾರೆ ಎಂದು ಬರೊಬ್ಬರಿ 1 ಎಕರೆ 37 ಗುಂಟೆ ಜಮೀನು ಕಟ್ಟುತ್ತೇನೆ ಯಾರು ಬೇಕಾದರೂ ಬರಬಹುದು. ಜೊತೆಗೆ ನನ್ನ ಹೆಂಡತಿ ಮಕ್ಕಳ ಸಹಿ ಹಾಕಿಸಿಕೊಟ್ಟು ಅಗ್ರಿಮೆಂಟ್ ಕೂಡ ಮಾಡಿಕೊಡುತ್ತೇನೆ ಎಂದು ಕೈ ಮುಖಂಡ ವಿಡಿಯೋ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:Karnataka Assembly Election: ಕಳೆದ ಚುನಾವಣೆಗಳಲ್ಲಿ 50 ಸಾವಿರ ಮತಗಳ ಅಂತರದಿಂದ ಗೆದ್ದ ಹಾಗೂ ಸೋತ ಅಭ್ಯರ್ಥಿಗಳು

ಚುನಾವಣಾ ಬೆಟ್ಟಿಂಗ್​ನಲ್ಲಿ ನಗದು, ಕೃಷಿ ಭೂಮಿ, ಕುರಿ, ಮೇಕೆ, ಟ್ರ್ಯಾಕ್ಟರ್‌, ಬೈಕ್‌ಗಳು

ಹೌದು ರಾಜಕೀಯ ಬೆಟ್ಟಿಂಗ್ ದಂಧೆ ಈ ಬಾರಿ ಚುರುಕುಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಹೇಳಲು ಗ್ರಾಮಸ್ಥರು ವ್ಯಾಪಕ ಬೆಟ್ಟಿಂಗ್‌ನಲ್ಲಿ ತೊಡಗಿದ್ದಾರೆ. ಚುನಾವಣೆಯ ಫಲಿತಾಂಶದ ಮೇಲೆ ಜನರು ನಗದು, ಅಮೂಲ್ಯ ಕೃಷಿ ಭೂಮಿ, ಕುರಿ, ಮೇಕೆ, ಹಸು, ಎತ್ತು ಸೇರಿದಂತೆ ಜಾನುವಾರುಗಳು, ಟ್ರ್ಯಾಕ್ಟರ್‌ಗಳು ಮತ್ತು ಬೈಕ್‌ಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ. ಬೆಟ್ಟಿಂಗ್ ದಂಧೆಯಲ್ಲಿ ಶ್ರೀರಂಗಪಟ್ಟಣದ ಅರಕೆರೆ ಹೋಬಳಿ ಪ್ರಮುಖವಾಗಿದೆ. ಕಳೆದ 30 ರಿಂದ 40 ವರ್ಷಗಳಿಂದ, ಅರಕೆರೆ ಗ್ರಾಮವು ಚುನಾವಣಾ ಬೆಟ್ಟಿಂಗ್‌ನಲ್ಲಿ ಮುಂಚೂಣಿಯಲ್ಲಿದೆ ಮತಎಣಿಕೆಗೆ ಮುಂಚಿತವಾಗಿಯೇ ಗೆಲ್ಲುವ ಕುದುರೆಗಳನ್ನು ಗ್ರಾಮಸ್ಥರು ಊಹಿಸುತ್ತಾರೆ. ಇನ್ನು ಈ ಗ್ರಾಮದಲ್ಲಿ 10 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು,. ಅರಕೆರೆಯಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆಯುತ್ತಿದೆ. ಈ ಹಿಂದಿನ ಚುನಾವಣೆಯಲ್ಲಿ ನಗದು, ಬೈಕ್, ಬಂಗಾರದ ಬೆಟ್ಟಿಂಗ್ ಸಾಮಾನ್ಯವಾಗಿದ್ದರೆ, ಈ ಬಾರಿ ಗ್ರಾಮಸ್ಥರು ಆಡು, ಕುರಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 am, Fri, 12 May 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು