AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSTDC: ಮತದಾನ ದಿನದಂದು ‘ಮಯೂರ’ ಹೋಟೆಲ್‌ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಮತದಾನದ ದಿನದಂದು ಮತ ಚಲಾಯಿಸಲು ಜನರನ್ನು ಉತ್ತೇಜಿಸುವ ಸಲುವಾಗಿ, ಮೇ.10 ರಂದು ಮತದಾನ ಮಾಡುವವರಿಗೆ ‘ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು(KSTDC) ನಡೆಸುತ್ತಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವವರಿಗೆ ಶೇಕಡಾ 50 ರಷ್ಟು ರಿಯಾಯಿತಿ ಘೋಷಿಸಿದೆ.

KSTDC: ಮತದಾನ ದಿನದಂದು ‘ಮಯೂರ' ಹೋಟೆಲ್‌ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 07, 2023 | 12:00 PM

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ(Karnataka Assembly Election) ಕಾವು ಜೋರಾಗಿದ್ದು, ಎಲ್ಲ ಪಕ್ಷಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಜೊತೆ ಸರ್ಕಾರ, ರಾಜ್ಯದಲ್ಲಿ ಮತದಾನದ ಮಹತ್ವವನ್ನ ವಿವಿಧ ಪ್ರಯೋಗಗಳನ್ನ ಮಾಡುವ ಮೂಲಕ ತಿಳಿಸುತ್ತಿದೆ. ಅದರಂತೆ ಇದೀಗ ಮೇ.10 ರಂದು ಮತದಾನ ಮಾಡುವವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು(KSTDC) ನಡೆಸುತ್ತಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿಯನ್ನ ಘೋಷಿಸಿವೆ. ಹೌದು ಈ ಕೊಡುಗೆಯನ್ನ ಮೇ 10 ರಂದು ರಾಜ್ಯಾದ್ಯಂತ ಪಡೆಯಬಹುದು. ಮತದಾನದ ದಿನದಂದು ಹೊರಹೋಗಲು ಮತ್ತು ಮತದಾನ ಮಾಡಲು ಜನರನ್ನು ಉತ್ತೇಜಿಸಲು ಇಲಾಖೆ ಇದನ್ನ ಪ್ರಕಟಿಸಿದೆ.

ಈ ಕುರಿತು ಕೆಎಸ್‌ಟಿಡಿಸಿ ‘ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಉತ್ತೇಜಿಸುವ ಸಲುವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಿಗಮದ ಒಡೆತನದ ‘ಮಯೂರ’ ಹೋಟೆಲ್‌ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿಯನ್ನು ನೀಡಲು ಘೋಷಿಸಿದೆ. ರಾಜ್ಯದಾದ್ಯಂತ ಮತದಾನ ಮಾಡುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ. ವಿಶೇಷ ರಿಯಾಯಿತಿಯನ್ನು ಪಡೆಯಲು ಬಯಸುವ ಸಾರ್ವಜನಿಕರು ಕಡ್ಡಾಯವಾಗಿ ಮತ ಚಲಾಯಿಸಿ ಮತ್ತು ಈ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಇನ್ನು ರಾಜ್ಯ ಸರ್ಕಾರ ನಡೆಸುವ ಮಯೂರ ಹೋಟೆಲ್‌ಗಳು ಕರ್ನಾಟಕದಾದ್ಯಂತ ಮತ್ತು ರಾಜ್ಯದ ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿವೆ ಎಂದಿದೆ.

ಇದನ್ನೂ ಓದಿ:ಜಾತಿ ಹೆಸರು ಬಳಸಿ ಚುನಾವಣೆ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ

ಏತನ್ಮಧ್ಯೆ, ಕರ್ನಾಟಕದ ಎಲ್ಲ 224 ಕ್ಷೇತ್ರಗಳಲ್ಲಿ ಇದೇ ಬುಧವಾರ(ಮೇ.10) ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಜ್ಜಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜನಾದೇಶವನ್ನು ಗೆಲ್ಲುವ ವಿಶ್ವಾಸವನ್ನು ತೋರಿಸಿದ್ದು, ಜೆಡಿಎಸ್ ಪಕ್ಷವು ಮತ್ತೊಮ್ಮೆ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿಕೊಂಡಿದೆ. ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರಂದು ಪ್ರಕಟವಾಗಲಿದ್ದು, ಮತದಾರ ಪ್ರಭುಗಳು ಈ ಬಾರಿ ಯಾರ ಕಡೆ ಒಲಿಯಲಿದ್ದಾನೆ ಎಂದು ಕಾದುನೋಡಬೇಕಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ