AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದು, ಗನ್ ಹೌಸ್ ವೃತ್ತದಿಂದ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತದವರೆಗೆ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋನಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ
ಏ.30 ರಂದು ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ
ಕಿರಣ್ ಹನುಮಂತ್​ ಮಾದಾರ್
| Edited By: |

Updated on:Apr 28, 2023 | 1:01 PM

Share

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Election) ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್(S. A. Ramadas) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ಭಾನುವಾರ ಸಂಜೆ ಬೇಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದು, ಬಳಿಕ ಕಾರಿನ‌ ಮೂಲಕ ಗನ್ ಹೌಸ್ ವೃತ್ತದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದರು.

ರೋಡ್ ಶೋ ನಲ್ಲಿ ಭಾಗಿಯಾಗಲಿರುವ ಮೋದಿ

ಪ್ರತಾಪ್ ಸಿಂಹ ಮತ್ತು ರಾಮದಾಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಪ್ರಧಾನಿ ಮೋದಿ ರೋಡ್ ಶೋನಲ್ಲಿ ಭಾಗಿಯಾಗಲಿದ್ದು, ಈ ವೇಳೆ ನಾದಸ್ವರ ವಾದನದೊಂದಿಗೆ ಮೋದಿಗೆ ಸ್ವಾಗತ ಕೋರಲಾಗುತ್ತದೆ. ಅಲ್ಲದೇ ಮೈಸೂರಿನ‌ ವಿಶೇಷತೆಗಳಾಗಿರುವ ವಸ್ತುಗಳನ್ನು ಮೋದಿಗೆ ಉಡುಗೊರೆಯಾಗಿ ಸಲ್ಲಿಕೆ ಮಾಡಲಾಗುತ್ತದೆ. ನಂತರ ಗನ್ ಹೌಸ್ ವೃತ್ತದಿಂದ ರೋಡ್ ಶೋ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತ ರೋಡ್ ಶೋನಲ್ಲಿ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ಸಾಗಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ನೂರಕ್ಕೂ ಹೆಚ್ಚು ನಾದಸ್ವರ ತಂಡದಿಂದ ಪ್ರಧಾ‌ನಿಗಳ ಸ್ವಾಗತ

ಪ್ರಧಾನಿ ಮೋದಿ ರೋಡ್​ ಶೋ ವೇಳೆ ಗನ್ ಹೌಸ್​ನಿಂದ ಕೆ ಆರ್ ಸರ್ಕಲ್​ವರೆಗೆ ಜನರು ಸಾಂಪ್ರದಾಯಿಕ ವಸ್ತ್ರ ತೊಟ್ಟು, ಆಯಾ ಸ್ಥಳಗಳಲ್ಲಿ ನಿಂತು ಮೈಸೂರಿನ ವಿಳ್ಯದೆಲೆ, ಶ್ರೀಗಂಧ, ಮೈಸೂರ್ ಸಿಲ್ಕ್ ಪದಾರ್ಥಗಳನ್ನು ನೀಡಿ ಪ್ರಧಾನಿಗಳನ್ನು ಸ್ವಾಗತ ಮಾಡಲಾಗುವುದು. ಜೊತೆಗೆ ರೋಡ್​ ಶೋ ಸಾಗುವ ರಸ್ತೆಯಲ್ಲಿ ಮೋದಿ ನಡೆದು ಬಂದ ಹಾದಿ, ವಿಶ್ವಕ್ಕೆ ಕೊಟ್ಟ ಮಾರ್ಗದರ್ಶನದ ಪರಿಕಲ್ಪನೆ ತೋರಿಸುವಂತಹಕಟೌಟ್​ಗಳ ಅಳವಡಿಕೆ‌ ಮಾಡಿ, ಅಲ್ಲಲ್ಲಿ ಸ್ವಾಗತ ಕಮಾನು ನಿರ್ಮಾಣ ಮಾಡಲಾಗುವುದು ಎಂದರು.

ಮೈಸೂರಿನ 5 ಕ್ಷೇತ್ರಗಳ ಜನ ಭಾಗಿ

ಇನ್ನು ಮೋದಿ ರೋಡ್​ ಶೋ ವೇಳೆ ಮೈಸೂರಿನ 5 ಕ್ಷೇತ್ರಗಳ ಜನ ಭಾಗವಹಿಸಲಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಹಿರಿಯ ನಾಗರಿಕರಿಗೆ ದೇವರಾಜ ಮಾರುಕಟ್ಟೆ, ಹಳೆ ಎಪಿಎಂಸಿ ಸರ್ಕಲ್, ಗನ್ ಹೌಸ್ ಸೇರಿದಂತೆ 5 ಕಡೆ ಕೂರಲು ಬೇಕಾದ ವ್ಯವಸ್ಥೆ ಮಾಡಲಾಗುವುದು. ಇನ್ನು ಕೇವಲ ರೋಡ್ ಶೋ ಮಾತ್ರ ಇರಲಿದೆ. ಮೇ 6 ನೇ ತಾರೀಖು ನಂಜನಗೂಡಿನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Fri, 28 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್