AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದು, ಗನ್ ಹೌಸ್ ವೃತ್ತದಿಂದ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತದವರೆಗೆ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋನಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಏ.30ರಂದು ಮೋದಿಗೆ ಮೈಸೂರಿನ ವೀಳ್ಯದೆಲೆಯೊಂದಿಗೆ ಸ್ವಾಗತದ ಜೊತೆ ವಿಶೇಷ ಉಡುಗೊರೆ ಸಿದ್ಧ
ಏ.30 ರಂದು ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ
ಕಿರಣ್ ಹನುಮಂತ್​ ಮಾದಾರ್
| Edited By: |

Updated on:Apr 28, 2023 | 1:01 PM

Share

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ(Karnataka Assembly Election) ಹಿನ್ನೆಲೆ ಭಾನುವಾರ (ಏ.30) ಸಂಜೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್(S. A. Ramadas) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ಭಾನುವಾರ ಸಂಜೆ ಬೇಲೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನಕ್ಕೆ ಪ್ರಧಾನಿ ಮೋದಿ ಬಂದಿಳಿಯಲಿದ್ದು, ಬಳಿಕ ಕಾರಿನ‌ ಮೂಲಕ ಗನ್ ಹೌಸ್ ವೃತ್ತದತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದರು.

ರೋಡ್ ಶೋ ನಲ್ಲಿ ಭಾಗಿಯಾಗಲಿರುವ ಮೋದಿ

ಪ್ರತಾಪ್ ಸಿಂಹ ಮತ್ತು ರಾಮದಾಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಪ್ರಧಾನಿ ಮೋದಿ ರೋಡ್ ಶೋನಲ್ಲಿ ಭಾಗಿಯಾಗಲಿದ್ದು, ಈ ವೇಳೆ ನಾದಸ್ವರ ವಾದನದೊಂದಿಗೆ ಮೋದಿಗೆ ಸ್ವಾಗತ ಕೋರಲಾಗುತ್ತದೆ. ಅಲ್ಲದೇ ಮೈಸೂರಿನ‌ ವಿಶೇಷತೆಗಳಾಗಿರುವ ವಸ್ತುಗಳನ್ನು ಮೋದಿಗೆ ಉಡುಗೊರೆಯಾಗಿ ಸಲ್ಲಿಕೆ ಮಾಡಲಾಗುತ್ತದೆ. ನಂತರ ಗನ್ ಹೌಸ್ ವೃತ್ತದಿಂದ ರೋಡ್ ಶೋ ಆರಂಭವಾಗಿ ಸಂಸ್ಕೃತ ಪಾಠಶಾಲೆ ವೃತ್ತ, ಕೆ ಆರ್ ವೃತ್ತ, ಆಯುರ್ವೇದಿಕ್ ಆಸ್ಪತ್ರೆ ವೃತ್ತ, ಆರ್ ಎಂ ಸಿ ವೃತ್ತ, ಹೈವೇ ವೃತ್ತದ ಮಾರ್ಗವಾಗಿ ಮಿಲೇನಿಯಂ ವೃತ್ತದತ್ತ ರೋಡ್ ಶೋನಲ್ಲಿ ಸುಮಾರು 4 ಕಿ ಮೀ ಪ್ರಧಾನಿ ನರೇಂದ್ರ ಮೋದಿ ಸಾಗಲಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ: ರಾಜಕೀಯ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು

ನೂರಕ್ಕೂ ಹೆಚ್ಚು ನಾದಸ್ವರ ತಂಡದಿಂದ ಪ್ರಧಾ‌ನಿಗಳ ಸ್ವಾಗತ

ಪ್ರಧಾನಿ ಮೋದಿ ರೋಡ್​ ಶೋ ವೇಳೆ ಗನ್ ಹೌಸ್​ನಿಂದ ಕೆ ಆರ್ ಸರ್ಕಲ್​ವರೆಗೆ ಜನರು ಸಾಂಪ್ರದಾಯಿಕ ವಸ್ತ್ರ ತೊಟ್ಟು, ಆಯಾ ಸ್ಥಳಗಳಲ್ಲಿ ನಿಂತು ಮೈಸೂರಿನ ವಿಳ್ಯದೆಲೆ, ಶ್ರೀಗಂಧ, ಮೈಸೂರ್ ಸಿಲ್ಕ್ ಪದಾರ್ಥಗಳನ್ನು ನೀಡಿ ಪ್ರಧಾನಿಗಳನ್ನು ಸ್ವಾಗತ ಮಾಡಲಾಗುವುದು. ಜೊತೆಗೆ ರೋಡ್​ ಶೋ ಸಾಗುವ ರಸ್ತೆಯಲ್ಲಿ ಮೋದಿ ನಡೆದು ಬಂದ ಹಾದಿ, ವಿಶ್ವಕ್ಕೆ ಕೊಟ್ಟ ಮಾರ್ಗದರ್ಶನದ ಪರಿಕಲ್ಪನೆ ತೋರಿಸುವಂತಹಕಟೌಟ್​ಗಳ ಅಳವಡಿಕೆ‌ ಮಾಡಿ, ಅಲ್ಲಲ್ಲಿ ಸ್ವಾಗತ ಕಮಾನು ನಿರ್ಮಾಣ ಮಾಡಲಾಗುವುದು ಎಂದರು.

ಮೈಸೂರಿನ 5 ಕ್ಷೇತ್ರಗಳ ಜನ ಭಾಗಿ

ಇನ್ನು ಮೋದಿ ರೋಡ್​ ಶೋ ವೇಳೆ ಮೈಸೂರಿನ 5 ಕ್ಷೇತ್ರಗಳ ಜನ ಭಾಗವಹಿಸಲಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಹಿರಿಯ ನಾಗರಿಕರಿಗೆ ದೇವರಾಜ ಮಾರುಕಟ್ಟೆ, ಹಳೆ ಎಪಿಎಂಸಿ ಸರ್ಕಲ್, ಗನ್ ಹೌಸ್ ಸೇರಿದಂತೆ 5 ಕಡೆ ಕೂರಲು ಬೇಕಾದ ವ್ಯವಸ್ಥೆ ಮಾಡಲಾಗುವುದು. ಇನ್ನು ಕೇವಲ ರೋಡ್ ಶೋ ಮಾತ್ರ ಇರಲಿದೆ. ಮೇ 6 ನೇ ತಾರೀಖು ನಂಜನಗೂಡಿನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:09 am, Fri, 28 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ