AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ
ಬಿಜೆಪಿ ರಾಜ್ಯಧ್ಯಕ್ಷ ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 24, 2023 | 2:05 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98 ಕೇಂದ್ರದ ನಾಯಕರು ಮತ್ತು 150ಕ್ಕೂ ಹೆಚ್ಚು ರಾಜ್ಯದ ನಾಯಕರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ನಡೆಯಲಿರುವ ಈ ಅಭಿಯಾನದಲ್ಲಿ ನಮ್ಮದು ಕಾರ್ಯಕರ್ತರ ಪಾರ್ಟಿಯಾದ್ದರಿಂದ ಕಾರ್ಯಕರ್ತರಿಂದ ಮನೆ ಮನೆ ಭೇಟಿ, ರೋಡ್ ಶೋ, ಸಾರ್ವಜನಿಕರ ಜೊತೆ ಹಾಗೂ ಫಲಾನುಭವಿಗಳ ಜೊತೆ ಸಭೆ ಇರಲಿದೆ. ಈ ವೇಳೆ ರಾಷ್ಟ್ರದ ಪುರುಷರಿಗೆ ಮಾಲಾರ್ಪಣೆ, ಬೀದಿಗಳಲ್ಲಿ ಸಾರ್ವಜನಿಕ ಸಭೆ ಇರಲಿದ್ದು, ಅಭಿಯಾನದಲ್ಲಿ ಅಮಿತ್ ಶಾ, ನಡ್ಡಾ, ಅರುಣ್ ಸಿಂಗ್, ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಅಣ್ಣಾಮಲೈ, ಸ್ಮೃತಿ ಇರಾನಿ, ಸಿ.ಟಿ. ರವಿ, ಯಡಿಯೂರಪ್ಪ, ಅಶೋಕ್, ಸೋಮಣ್ಣ, ಈಶ್ವರಪ್ಪ, ಶೋಭಾ ಕರಂದ್ಲಾಜೆ ಸೇರಿ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ

ಇನ್ನು ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಈಶ್ವರ ಠಾಕೂರ್ ಅಂತಹ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರದಲ್ಲಿ ಈಗಾಗಲೇ ಮಾತುಕತೆ ನಡೆಯುತ್ತಿದೆ. ಬಿಜೆಪಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಂಡಾಯ ಅಭ್ಯರ್ಥಿಗಳ ಜೊತೆಗೆ ಮಾತುಕತೆ ಆಗುತ್ತಿದೆ. ಸಂಜೆ ಒಳಗೆ ನಿಮಗೆ ಗೊತ್ತಾಗಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!