AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ
ಬಿಜೆಪಿ ರಾಜ್ಯಧ್ಯಕ್ಷ ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 24, 2023 | 2:05 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98 ಕೇಂದ್ರದ ನಾಯಕರು ಮತ್ತು 150ಕ್ಕೂ ಹೆಚ್ಚು ರಾಜ್ಯದ ನಾಯಕರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ನಡೆಯಲಿರುವ ಈ ಅಭಿಯಾನದಲ್ಲಿ ನಮ್ಮದು ಕಾರ್ಯಕರ್ತರ ಪಾರ್ಟಿಯಾದ್ದರಿಂದ ಕಾರ್ಯಕರ್ತರಿಂದ ಮನೆ ಮನೆ ಭೇಟಿ, ರೋಡ್ ಶೋ, ಸಾರ್ವಜನಿಕರ ಜೊತೆ ಹಾಗೂ ಫಲಾನುಭವಿಗಳ ಜೊತೆ ಸಭೆ ಇರಲಿದೆ. ಈ ವೇಳೆ ರಾಷ್ಟ್ರದ ಪುರುಷರಿಗೆ ಮಾಲಾರ್ಪಣೆ, ಬೀದಿಗಳಲ್ಲಿ ಸಾರ್ವಜನಿಕ ಸಭೆ ಇರಲಿದ್ದು, ಅಭಿಯಾನದಲ್ಲಿ ಅಮಿತ್ ಶಾ, ನಡ್ಡಾ, ಅರುಣ್ ಸಿಂಗ್, ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಅಣ್ಣಾಮಲೈ, ಸ್ಮೃತಿ ಇರಾನಿ, ಸಿ.ಟಿ. ರವಿ, ಯಡಿಯೂರಪ್ಪ, ಅಶೋಕ್, ಸೋಮಣ್ಣ, ಈಶ್ವರಪ್ಪ, ಶೋಭಾ ಕರಂದ್ಲಾಜೆ ಸೇರಿ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ

ಇನ್ನು ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಈಶ್ವರ ಠಾಕೂರ್ ಅಂತಹ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರದಲ್ಲಿ ಈಗಾಗಲೇ ಮಾತುಕತೆ ನಡೆಯುತ್ತಿದೆ. ಬಿಜೆಪಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಂಡಾಯ ಅಭ್ಯರ್ಥಿಗಳ ಜೊತೆಗೆ ಮಾತುಕತೆ ಆಗುತ್ತಿದೆ. ಸಂಜೆ ಒಳಗೆ ನಿಮಗೆ ಗೊತ್ತಾಗಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!