AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ; ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ
ಬಿಜೆಪಿ ರಾಜ್ಯಧ್ಯಕ್ಷ ನಳಿನ್​ ಕುಮಾರ್​ ಕಟೀಲ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 24, 2023 | 2:05 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98 ಕೇಂದ್ರದ ನಾಯಕರು ಮತ್ತು 150ಕ್ಕೂ ಹೆಚ್ಚು ರಾಜ್ಯದ ನಾಯಕರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ನಡೆಯಲಿರುವ ಈ ಅಭಿಯಾನದಲ್ಲಿ ನಮ್ಮದು ಕಾರ್ಯಕರ್ತರ ಪಾರ್ಟಿಯಾದ್ದರಿಂದ ಕಾರ್ಯಕರ್ತರಿಂದ ಮನೆ ಮನೆ ಭೇಟಿ, ರೋಡ್ ಶೋ, ಸಾರ್ವಜನಿಕರ ಜೊತೆ ಹಾಗೂ ಫಲಾನುಭವಿಗಳ ಜೊತೆ ಸಭೆ ಇರಲಿದೆ. ಈ ವೇಳೆ ರಾಷ್ಟ್ರದ ಪುರುಷರಿಗೆ ಮಾಲಾರ್ಪಣೆ, ಬೀದಿಗಳಲ್ಲಿ ಸಾರ್ವಜನಿಕ ಸಭೆ ಇರಲಿದ್ದು, ಅಭಿಯಾನದಲ್ಲಿ ಅಮಿತ್ ಶಾ, ನಡ್ಡಾ, ಅರುಣ್ ಸಿಂಗ್, ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಅಣ್ಣಾಮಲೈ, ಸ್ಮೃತಿ ಇರಾನಿ, ಸಿ.ಟಿ. ರವಿ, ಯಡಿಯೂರಪ್ಪ, ಅಶೋಕ್, ಸೋಮಣ್ಣ, ಈಶ್ವರಪ್ಪ, ಶೋಭಾ ಕರಂದ್ಲಾಜೆ ಸೇರಿ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ

ಇನ್ನು ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಈಶ್ವರ ಠಾಕೂರ್ ಅಂತಹ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ ವಿಚಾರದಲ್ಲಿ ಈಗಾಗಲೇ ಮಾತುಕತೆ ನಡೆಯುತ್ತಿದೆ. ಬಿಜೆಪಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಂಡಾಯ ಅಭ್ಯರ್ಥಿಗಳ ಜೊತೆಗೆ ಮಾತುಕತೆ ಆಗುತ್ತಿದೆ. ಸಂಜೆ ಒಳಗೆ ನಿಮಗೆ ಗೊತ್ತಾಗಲಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ