AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪರ ಚಂದನವನ ನಟರ ಪ್ರಚಾರ: ಅಭಿಷೇಕ್​ ಅಂಬರೀಶ್​​, ಕಿಚ್ಚ ಸುದೀಪ್​ ಮತಯಾಚನೆ

ಅತ್ತ ನಟ ಕಿಚ್ಚ ಸುದೀಪ್​ ಬಿಜೆಪಿ ಪರ ಪ್ರಚಾರದ ಕಣಕ್ಕೆ ಇಳಿದರೇ, ಇತ್ತ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್​ ಪುತ್ರ ಜ್ಯೂನಿಯರ್ ರೆಬಲ್​ಸ್ಟಾರ್ ಅಭಿಷೇಕ್​​​ ಅಂಬರೀಶ್​​​​ ಮತಬೇಟೆಗೆ ಮುಂದಾಗಿದ್ದಾರೆ. ​

ಬಿಜೆಪಿ ಪರ ಚಂದನವನ ನಟರ ಪ್ರಚಾರ: ಅಭಿಷೇಕ್​ ಅಂಬರೀಶ್​​, ಕಿಚ್ಚ ಸುದೀಪ್​ ಮತಯಾಚನೆ
ನಟ ಸುದೀಪ್ (ಎಡಚಿತ್ರ) ನಟ ಅಭಿಷೇಕ್​ ಅಂಬರೀಶ್​​ (ಬಲಚಿತ್ರ)
ವಿವೇಕ ಬಿರಾದಾರ
|

Updated on:Apr 25, 2023 | 2:03 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಬಿಜೆಪಿ (BJP) ಪರ ಸ್ಯಾಂಡಲ್ ​ವುಡ್ (Sandalwood)​ ಚಲನಚಿತ್ರ ನಟರು ಪ್ರಚಾರಕ್ಕೆ ಇಳಿಯುತ್ತಿದ್ದಾರೆ. ಅತ್ತ ನಟ ಕಿಚ್ಚ ಸುದೀಪ್​ (Kichcha Sudeepa) ಬಿಜೆಪಿ ಪರ ಪ್ರಚಾರದ ಕಣಕ್ಕೆ ಇಳಿದರೇ, ಇತ್ತ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್​ (Sumalatha Ambareesh) ಪುತ್ರ ಜ್ಯೂನಿಯರ್ ರೆಬಲ್​ಸ್ಟಾರ್ ಅಭಿಷೇಕ್​​​ ಅಂಬರೀಶ್ (Abhishek Ambareesh)​​ ಮತಬೇಟೆಗೆ ಮುಂದಾಗಿದ್ದಾರೆ. ಹೌದು ಮೇ 1ನೇ ತಾರೀಕಿನಿಂದ ಅಭಿಷೇಕ್ ಅಂಬರೀಶ್ ಪ್ರಚಾರದ ಕಣಕ್ಕೆ ಇಳಿಯಲಿದ್ದಾರೆ. ನಾಳೆಯಿಂದಲೇ ಪ್ರಚಾರಕ್ಕೆ ದುಮುಖ ಬೇಕಿತ್ತು ಆದರೆ ಕಾರಣಾಂತರಗಳಿಂದ ಮುಂದೂಡಲಾಗಿದೆ. ಜ್ಯೂನಿಯರ್ ರೆಬಲ್​ಸ್ಟಾರ್​ ಅಭಿಷೇಕ್​​​ ಅಂಬರೀಶ್​​​ ಬೈಕ್ ರ್ಯಾಲಿ ಮೂಲಕ ಕೂತು ಮತಬೇಟೆ ಮಾಡಲಿದ್ದಾರೆ.

ಯೂತ್ ರ್ಯಾಲಿ ಇದಾಗಿರಲಿದ್ದು ಒಂದು ಸಾವಿರ ಬೈಕ್​ಗಳನ್ನು ಒಗ್ಗೂಡಿಸಿಕೊಂಡು ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ. ಮೇ ಒಂದರಿಂದ 8 ದಿನಗಳ ಕಾಲ ಹಳ್ಳಿ ಹಳ್ಳಿಗೂ ತೆರಳಿ ಮತಯಾಚಿಸಲಿದ್ದಾರೆ.

ಸದೀಪ್ ಪ್ರಚಾರದ ರೂಟ್ ಮ್ಯಾಪ್ ಫಿಕ್ಸ್

ನಟ ಕಿಚ್ಚ ಸುದೀಪ್​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಂತರ ಯಾವಾಗಿಂದ ಪ್ರಚಾರಕ್ಕೆ ದುಮುಖತ್ತಾರೆ ಎಂದು ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ತೆರೆ ಬಿದ್ದಿದೆ. ನಾಳೆ (ಏ.26) ರಂದು ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಕೆಲವು ಕ್ಷೇತ್ರಗಳಲ್ಲಿ ಮತಯಾಚನೆ ಮಾಡಲಿದ್ದಾರೆ.

ಮೊಣಕಾಲ್ಮೂರು, ಜಗಳೂರು, ಮಾಯಕೊಂಡ ಮತ್ತು ದಾವಣಗೆರೆಯಲ್ಲಿ ಪ್ರಚಾರ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಏಪ್ರಿಲ್ 27 ಹಾಗೂ 28 ರಂದು ಹುಬ್ಬಳ್ಳಿ, ಗದಗ ಮತ್ತು ಶಿವಮೊಗ್ಗದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Tue, 25 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ