Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ

ಈ ಬಾರಿ ವರುಣಾ ವಿಧಾನಸಭೆ ಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು, ಸಿದ್ದರಾಮಯ್ಯ ಅವರಿಗೆ ಅಳಿವು ಉಳಿವಿನ ಪ್ರತಿಷ್ಠೆಯಾಗಿದೆ. ಇನ್ನು ಸಿದ್ದರಾಮಯ್ಯನವರ ಪರ ಸಿನಿಮಾ ನಟ-ನಟಿಯರು ಪ್ರಚಾರಕ್ಕಿಳಿಯಲಿದ್ದಾರೆ.

ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ
Follow us
ರಮೇಶ್ ಬಿ. ಜವಳಗೇರಾ
|

Updated on: May 01, 2023 | 3:00 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆಯ (Election 2023) ಕಾವು ಜೋರಾಗಿದ್ದು, ಕನ್ನಡ ಚಿತ್ರರಂಗದ (Kannada Cinema Industry) ಘಟಾನುಘಟಿ ನಾಯಕರು ಈ ಬಾರಿ ಎಲೆಕ್ಷನ್ ಅಖಾಡಕ್ಕಿಳಿದು ನೆಚ್ಚಿನ ನಾಯಕರ ಪರ ಅಬ್ಬರದ ಪ್ರಚಾರಕ್ಕಿಳಿದಿದ್ದಾರೆ. ಬಿಜೆಪಿ ನಾಯಕರ ಪರ ಸ್ಟಾರ್ ಪ್ರಚಾರಕರಾಗಿ ನಟ ಕಿಚ್ಚ ಸುದೀಪ್ (Actor Sudeep)​ ಎಲ್ಲೆಡೆ ಅಬ್ಬರಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್​ ಪರ ಪ್ರಚಾರಕ್ಕೆ ಶಿವರಾಜ್​ ಕುಮಾರ್, ರಮ್ಯಾ ​ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯವಾಗಿ ಸಿದ್ದರಾಮಯ್ಯನವರ ಪರವಾಗಿ ವರುಣಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ರಮ್ಯಾ, ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಭರ್ಜರಿ ಪ್ರಚಾರ ಮಾಡಲಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳ ಪರ ಶಿವಣ್ಣ ಪ್ರಚಾರ

ಹೌದು..ಅತ್ತ ಬಿಜೆಪಿ ಪರ ಕಿಚ್ಚ ಸುದೀಪ್​ ಪ್ರಚಾರಕ್ಕಿಳಿದಿದ್ದರೆ, ಮತ್ತ ಹ್ಯಾಟ್ರಿಕ್ ಶಿವರಾಜ್​ ಕುಮಾರ್ ಸಹ ಕಾಂಗ್ರೆಸ್​ನ ಕೆಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ತಮ್ಮ ಪತ್ನಿಯ ಸಹೋದರ ಮಧುಬಂಗಾರಪ್ಪ ಪರ ಸೊರಬದಲ್ಲಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಹಾಗೇ ಹೆಂಡತಿ ಕಡೆಯಿಂದ ಸಂಬಂಧಿಯಾಗುವ ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಜಗದೀಶ್ ಶೆಟ್ಟರ್​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿರುವ ವರುಣಾದಲ್ಲಿ ಮೇ 04ರಂದಯ ಪ್ರಚಾರ ಮಾಡಲಿದ್ದಾರೆ. ಇನ್ನು ಬೀದರ್​ನಲ್ಲಿ ಅಶೋಕ್ ಖೇಣಿ ಪರ ಪ್ರಚಾರಕ್ಕಿಳಿಯಲಿದ್ದಾರೆ.

ವರುಣಾದಲ್ಲಿ ತಾರಾ ಮೆರುಗು

ಕಾಂಗ್ರೆಸ್ (Congress) ಸ್ಟಾರ್ ಪ್ರಚಾರಕಿಯಾಗಿರುವ ಮಾಜಿ ಸಂಸದೆ, ನಟಿ ರಮ್ಯಾ (Ramya) ಈ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಕಾಂಗ್ರೆಸ್​​ನ ಸ್ಟಾರ್​ ಪ್ರಚಾರಕಿಯಾಗಿರುವ ರಮ್ಯಾ ಮೇ 4ರಂದು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರ ಪ್ರಚಾರ ಮಾಡಲಿದ್ದಾರೆ. ಹಾಗೇ ನಟ ದುನಿಯಾ ವಿಜಯ್ ಸಹ ಸಿದ್ದರಾಮಯ್ಯ ಪರ ಕ್ಯಾಂಪೇನ್ ಮಾಡಲಿದ್ದಾರೆ. ಮೇ 4ರಂದು ಸಿದ್ದರಾಮಯ್ಯ ಜೊತೆಗೆ ಶಿವಣ್ಣ, ರಮ್ಯಾ, ರೋಡ್ ಶೋ ನಲ್ಲಿ ಭಾಗಿಯಾಗುತ್ತಿರುವುದು ವಿಶೇಷವಾಗಿದೆ. ಇನ್ನು ದುನಿಯಾ ವಿಜಿ ಮೇ 5ರಂದು ವರುಣಾದಲ್ಲಿ ಪ್ರಚಾರ ಮಾಡಲಿದ್ದಾರೆ.

ಹಲವೆಡೆ ರಮ್ಯಾ ಪ್ರಚಾರ

ಮೇ 6ರಂದು ಬಬಲೇಶ್ವರ (Babaleshwar) ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ (M.B.Patil) ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ (Bengaluru) ಸರ್ವಜ್ಞ ನಗರದಲ್ಲಿ (Sarvagnanagar) ಕೆ.ಜೆ.ಜಾರ್ಜ್ (K.J.George) ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯ (Mandya) ಜಿಲ್ಲೆಯಲ್ಲೂ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್