AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ

ಈ ಬಾರಿ ವರುಣಾ ವಿಧಾನಸಭೆ ಚುನಾವಣೆ ಭಾರೀ ಕುತೂಹಲ ಮೂಡಿಸಿದ್ದು, ಸಿದ್ದರಾಮಯ್ಯ ಅವರಿಗೆ ಅಳಿವು ಉಳಿವಿನ ಪ್ರತಿಷ್ಠೆಯಾಗಿದೆ. ಇನ್ನು ಸಿದ್ದರಾಮಯ್ಯನವರ ಪರ ಸಿನಿಮಾ ನಟ-ನಟಿಯರು ಪ್ರಚಾರಕ್ಕಿಳಿಯಲಿದ್ದಾರೆ.

ಸಿದ್ದರಾಮಯ್ಯಗೆ ತಾರಾಬಲ: ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ
ರಮೇಶ್ ಬಿ. ಜವಳಗೇರಾ
|

Updated on: May 01, 2023 | 3:00 PM

Share

ಮುಖ್ಯಾಂಶಗಳು

  • ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾರಾ ಮೆರುಗು
  • ವರುಣಾ ಕ್ಷೇತ್ರದಲ್ಲಿ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ
  • ಮೇ 4ರಂದು ಸಿದ್ದರಾಮಯ್ಯ ಪರ ವರುಣಾದಲ್ಲಿ ಶಿವಣ್ಣ, ರಮ್ಯಾ ಕ್ಯಾಂಪೇನ್

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆಯ (Election 2023) ಕಾವು ಜೋರಾಗಿದ್ದು, ಕನ್ನಡ ಚಿತ್ರರಂಗದ (Kannada Cinema Industry) ಘಟಾನುಘಟಿ ನಾಯಕರು ಈ ಬಾರಿ ಎಲೆಕ್ಷನ್ ಅಖಾಡಕ್ಕಿಳಿದು ನೆಚ್ಚಿನ ನಾಯಕರ ಪರ ಅಬ್ಬರದ ಪ್ರಚಾರಕ್ಕಿಳಿದಿದ್ದಾರೆ. ಬಿಜೆಪಿ ನಾಯಕರ ಪರ ಸ್ಟಾರ್ ಪ್ರಚಾರಕರಾಗಿ ನಟ ಕಿಚ್ಚ ಸುದೀಪ್ (Actor Sudeep)​ ಎಲ್ಲೆಡೆ ಅಬ್ಬರಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್​ ಪರ ಪ್ರಚಾರಕ್ಕೆ ಶಿವರಾಜ್​ ಕುಮಾರ್, ರಮ್ಯಾ ​ ಎಂಟ್ರಿ ಕೊಟ್ಟಿದ್ದಾರೆ. ಮುಖ್ಯವಾಗಿ ಸಿದ್ದರಾಮಯ್ಯನವರ ಪರವಾಗಿ ವರುಣಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿ ರಮ್ಯಾ, ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಭರ್ಜರಿ ಪ್ರಚಾರ ಮಾಡಲಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳ ಪರ ಶಿವಣ್ಣ ಪ್ರಚಾರ

ಹೌದು..ಅತ್ತ ಬಿಜೆಪಿ ಪರ ಕಿಚ್ಚ ಸುದೀಪ್​ ಪ್ರಚಾರಕ್ಕಿಳಿದಿದ್ದರೆ, ಮತ್ತ ಹ್ಯಾಟ್ರಿಕ್ ಶಿವರಾಜ್​ ಕುಮಾರ್ ಸಹ ಕಾಂಗ್ರೆಸ್​ನ ಕೆಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ತಮ್ಮ ಪತ್ನಿಯ ಸಹೋದರ ಮಧುಬಂಗಾರಪ್ಪ ಪರ ಸೊರಬದಲ್ಲಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಹಾಗೇ ಹೆಂಡತಿ ಕಡೆಯಿಂದ ಸಂಬಂಧಿಯಾಗುವ ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಜಗದೀಶ್ ಶೆಟ್ಟರ್​ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿರುವ ವರುಣಾದಲ್ಲಿ ಮೇ 04ರಂದಯ ಪ್ರಚಾರ ಮಾಡಲಿದ್ದಾರೆ. ಇನ್ನು ಬೀದರ್​ನಲ್ಲಿ ಅಶೋಕ್ ಖೇಣಿ ಪರ ಪ್ರಚಾರಕ್ಕಿಳಿಯಲಿದ್ದಾರೆ.

ವರುಣಾದಲ್ಲಿ ತಾರಾ ಮೆರುಗು

ಕಾಂಗ್ರೆಸ್ (Congress) ಸ್ಟಾರ್ ಪ್ರಚಾರಕಿಯಾಗಿರುವ ಮಾಜಿ ಸಂಸದೆ, ನಟಿ ರಮ್ಯಾ (Ramya) ಈ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಕಾಂಗ್ರೆಸ್​​ನ ಸ್ಟಾರ್​ ಪ್ರಚಾರಕಿಯಾಗಿರುವ ರಮ್ಯಾ ಮೇ 4ರಂದು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರ ಪ್ರಚಾರ ಮಾಡಲಿದ್ದಾರೆ. ಹಾಗೇ ನಟ ದುನಿಯಾ ವಿಜಯ್ ಸಹ ಸಿದ್ದರಾಮಯ್ಯ ಪರ ಕ್ಯಾಂಪೇನ್ ಮಾಡಲಿದ್ದಾರೆ. ಮೇ 4ರಂದು ಸಿದ್ದರಾಮಯ್ಯ ಜೊತೆಗೆ ಶಿವಣ್ಣ, ರಮ್ಯಾ, ರೋಡ್ ಶೋ ನಲ್ಲಿ ಭಾಗಿಯಾಗುತ್ತಿರುವುದು ವಿಶೇಷವಾಗಿದೆ. ಇನ್ನು ದುನಿಯಾ ವಿಜಿ ಮೇ 5ರಂದು ವರುಣಾದಲ್ಲಿ ಪ್ರಚಾರ ಮಾಡಲಿದ್ದಾರೆ.

ಹಲವೆಡೆ ರಮ್ಯಾ ಪ್ರಚಾರ

ಮೇ 6ರಂದು ಬಬಲೇಶ್ವರ (Babaleshwar) ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ರಮ್ಯಾ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ (M.B.Patil) ಪರ ಮತಯಾಚಿಸಲಿದ್ದಾರೆ. ನಂತರ ಬೆಂಗಳೂರಿನ (Bengaluru) ಸರ್ವಜ್ಞ ನಗರದಲ್ಲಿ (Sarvagnanagar) ಕೆ.ಜೆ.ಜಾರ್ಜ್ (K.J.George) ಪರ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ ಮಂಡ್ಯ (Mandya) ಜಿಲ್ಲೆಯಲ್ಲೂ ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ.

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ