AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ

ನಟ ಕಿಚ್ಚ ಸುದೀಪ್​ ಇಂದು (ಏ.28) ಧಾರವಾಡ ಮತ್ತು ಗದಗನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಪ್ರಚಾರ ಎಲ್ಲೆಲ್ಲಿ? ಇಲ್ಲಿದೆ ವೇಳಾಪಟ್ಟಿ
ನಟ ಸುದೀಪ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 28, 2023 | 7:03 AM

Share

ಧಾರವಾಡ: ಕರ್ನಾಟಕ ವಿಧಾಸಭಾ ಚುನಾವಣೆ (Karnataka Assembly Election 2023) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಬ್ಬರದ ಪ್ರಚಾರ, ಆಶ್ವಾಸನೆಗಳು ಮತ್ತು ಟೀಕೆ-ಟಿಪ್ಪಣಿಗಳಿಗೆ ಎಲ್ಲೆ ಇಲ್ಲದೆ ಹೊರಬರುತ್ತಿವೆ. ಬಿಜೆಪಿಯ ಸ್ಟಾರ್​ ಪ್ರಚಾರಕರು ರಾಜ್ಯಾದ್ಯಂತ ಸುತ್ತಿ ಮತಬೇಟೆ ನಡೆಸಿದ್ದಾರೆ. ಈ ಪ್ರಚಾರಕ್ಕೆ ಚಂದನವನದ ಸ್ಟಾರ್​​​ ನಟರೂ ಕೂಡ ಕೈ ಜೋಡಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ಪರವಾಗಿ ನಿಂತಿರುವ ನಟ ಕಿಚ್ಚ ಸುದೀಪ್ (Sudeep)​ ಬಿಜೆಪಿ (BJP) ಅಭ್ಯರ್ಥ್ಯಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. ನಿನ್ನೆ (ಏ.27) ರಂದು ಹಾವೇರಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದರು. ಇಂದು (ಏ.28) ಪಕ್ಕದ ಜಿಲ್ಲೆಗಳಾದ ಧಾರವಾಡ (Dharwad) ಮತ್ತು ಗದಗನಲ್ಲಿ (Gadag) ಮತಬೇಟೆ ನಡೆಸಲಿದ್ದಾರೆ.

​ಮೊದಲು ಧಾರವಾಡ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್​ ರಾಜ್ಯದ ಗಮನ ಸೆಳೆದಿರುವ ಮತ್ತು ಸಾಕಷ್ಟು ಚರ್ಚೆಯಾಗುತ್ತಿರುವ ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ನಂತರ ಕಲಘಟಗಿ, ಮಧ್ಯಾಹ್ನ ಧಾರವಾಡ ಮತ್ತು ಗದಗನಲ್ಲಿ ಮತಯಾಚಿಸಲಿದ್ದಾರೆ.

ನಟ ಕಿಚ್ಚ ಸುದೀಪ್ ಪ್ರಚಾರದ ವೇಳಾಪಟ್ಟಿ​​

1. ಹುಬ್ಬಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಪರ ಬೆಳಗ್ಗೆ 9.30ಕ್ಕೆ ಮತಯಾಚಿಸಲಿದ್ದಾರೆ 2. ಕಲಘಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಚಾರ ಆರಂಭಿಸುವ ನಟ ಸುದೀಪ್​​ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತಯಾಚಿಸಲಿದ್ದಾರೆ. 3. ಮಧ್ಯಾಹ್ನ 12.20ಕ್ಕೆ ಧಾರವಾಡ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರ ಜೊತೆ ನಟ ಸುದೀಪ್ ರೋಡ್ ಶೋ ನಡೆಸಲಿದ್ದಾರೆ 4. ಮಧ್ಯಾಹ್ನ 3 ಗಂಟೆಗೆ ಗದಗದಲ್ಲಿ ರೋಡ್ ಶೋ ನಟ ಸುದೀಪ್‌ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:03 am, Fri, 28 April 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ