AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ’ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ನಟ ಉಪೇಂದ್ರ

ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಸುದ್ದಿಗೋಷ್ಠಿ ನಡೆಸಿದ್ದಾರೆ. 110 ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

'ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ' ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ನಟ ಉಪೇಂದ್ರ
ಉಪೇಂದ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 01, 2023 | 12:24 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದ ಮತದಾನ ನಡೆಯಲಿದ್ದು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ(Actor Upendra) ಸುದ್ದಿಗೋಷ್ಠಿ ನಡೆಸಿದ್ದಾರೆ. 110 ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ(Uttama Prajakeeya Party) ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ’ ಎಂಬ ಘೋಷಣೆ ಮೂಲಕ ‘ಬುದ್ಧಿವಂತ’ ಉಪೇಂದ್ರ ಹೊಸ ಪೊಲಿಟಿಕಲ್ ತಂತ್ರ ಹೆಣೆದಿದ್ದಾರೆ. ಹಾಗೂ ಸುದ್ದಿಗೋಷ್ಠಿಯಲ್ಲಿ ಪ್ರಜಾಕೀಯ app ಬಗ್ಗೆಯೂ ಉಪ್ಪಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಉಪೇಂದ್ರ, ಜನರ ಡಿಮ್ಯಾಂಡ್ ನಮಗೆ ಗೊತ್ತಿದೆ. ಪಾರದರ್ಶಕ ರಿಪೋರ್ಟ್ ಕೊಡ್ತೀವಿ. ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ. ಪ್ರಜಾಕೀಯ ಬರೀ ವೋಟ್ ಹಾಕಿ ಅಂತಿಲ್ಲ. ನಮ್ಮ ಜೊತೆ ನಿರಂತರವಾಗಿ ಕನೆಕ್ಟ್ ಆಗಬೇಕು ಎಂದು 110 ಜನ ಅಭ್ಯರ್ಥಿಗಳನ್ನ ಉಪೇಂದ್ರ ಪರಿಚಯಿಸಿದ್ದಾರೆ.

ಇದನ್ನೂ ಓದಿ: Karnataka Election: ಚುನಾವಣೆ ಜಾಗೃತಿಗೆ, ಪ್ರಜಾಕೀಯ ಪ್ರಚಾರಕ್ಕೆ ‘ಕಾಂತಾರ’ ದೈವದ ದೃಶ್ಯ ಬಳಕೆ; ವಿಡಿಯೋ ವೈರಲ್​

ಇದು ವಿಚಾರಗಳ ಪ್ರಚಾರ. ಹಳ್ಳಿ ಹಳ್ಳಿಗೂ ಪ್ರಜಾಕೀಯ ತಲುಪಿದೆ. 110 ಕ್ಷೇತ್ರದಲ್ಲೂ ಪ್ರಜಾಕೀಯ ಬರುತ್ತೆ ಎಂಬ ನಂಬಿಕೆ ಇದೆ ಎಂದು ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ನಮ್ಮ ಪ್ರಣಾಳಿಕೆಯಂತಹ ಪ್ರಣಾಳಿಕೆ ಪ್ರಪಂಚದಲ್ಲಿ ಯಾರು ಕೊಟ್ಟಿಲ್ಲ. ಕುಕ್ಕರ್ ಕೊಡ್ತಾರೆ ಬಟ್, ಅವ್ರಿಗೆ ಸ್ಟವ್ ಬೇಕಾಗಿರುತ್ತೆ. ಅವರಿಗೆ ಬೇಜಾರಾಗಲ್ವಾ. ಸ್ಟಾರ್​ಗಳು ನಮಗೆ ನಮ್ಮ ಅಭ್ಯರ್ಥಿಗಳು. ಮತದಾರರು ಸ್ಟಾರ್​ಗಳು. ಟ್ಯಾಲೆಂಟ್‌ ಗಿಂತ ಕಲ್ಪನೆ ಬಹಳ ಮುಖ್ಯ ಅಂತೆ ಅಲ್ಬರ್ಟ್ ಐನ್‍ಸ್ಟೈನ್ ಹೇಳಿದ್ದಾರೆ. ಬದಲಾವಣೆ ಬೇಕು. ಕರೆಕ್ಟ್ ಅನ್ನಿಸುದ್ರೆ ಮಾಡಿ ಎಂದು ಉಪೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ವಿಧಾನಸಭಾ ಚುನಾಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!