AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ’ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ನಟ ಉಪೇಂದ್ರ

ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಸುದ್ದಿಗೋಷ್ಠಿ ನಡೆಸಿದ್ದಾರೆ. 110 ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

'ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ' ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಪರಿಚಯಿಸಿದ ನಟ ಉಪೇಂದ್ರ
ಉಪೇಂದ್ರ
ಆಯೇಷಾ ಬಾನು
|

Updated on: May 01, 2023 | 12:24 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದ ಮತದಾನ ನಡೆಯಲಿದ್ದು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರಿನ ಪ್ರೆಸ್​ಕ್ಲಬ್​ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ(Actor Upendra) ಸುದ್ದಿಗೋಷ್ಠಿ ನಡೆಸಿದ್ದಾರೆ. 110 ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಉತ್ತಮ ಪ್ರಜಾಕೀಯ ಪಕ್ಷದ(Uttama Prajakeeya Party) ಅಭ್ಯರ್ಥಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಪಕ್ಷವು ನಿಮ್ಮದೇ ಅಧಿಕಾರವೂ ನಿಮ್ಮದೇ’ ಎಂಬ ಘೋಷಣೆ ಮೂಲಕ ‘ಬುದ್ಧಿವಂತ’ ಉಪೇಂದ್ರ ಹೊಸ ಪೊಲಿಟಿಕಲ್ ತಂತ್ರ ಹೆಣೆದಿದ್ದಾರೆ. ಹಾಗೂ ಸುದ್ದಿಗೋಷ್ಠಿಯಲ್ಲಿ ಪ್ರಜಾಕೀಯ app ಬಗ್ಗೆಯೂ ಉಪ್ಪಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಉಪೇಂದ್ರ, ಜನರ ಡಿಮ್ಯಾಂಡ್ ನಮಗೆ ಗೊತ್ತಿದೆ. ಪಾರದರ್ಶಕ ರಿಪೋರ್ಟ್ ಕೊಡ್ತೀವಿ. ಎಲೆಕ್ಷನ್, ಸೆಲೆಕ್ಷನ್, ಕರೆಕ್ಷನ್ ನಮ್ಮ ಸೂತ್ರ. ಪ್ರಜಾಕೀಯ ಬರೀ ವೋಟ್ ಹಾಕಿ ಅಂತಿಲ್ಲ. ನಮ್ಮ ಜೊತೆ ನಿರಂತರವಾಗಿ ಕನೆಕ್ಟ್ ಆಗಬೇಕು ಎಂದು 110 ಜನ ಅಭ್ಯರ್ಥಿಗಳನ್ನ ಉಪೇಂದ್ರ ಪರಿಚಯಿಸಿದ್ದಾರೆ.

ಇದನ್ನೂ ಓದಿ: Karnataka Election: ಚುನಾವಣೆ ಜಾಗೃತಿಗೆ, ಪ್ರಜಾಕೀಯ ಪ್ರಚಾರಕ್ಕೆ ‘ಕಾಂತಾರ’ ದೈವದ ದೃಶ್ಯ ಬಳಕೆ; ವಿಡಿಯೋ ವೈರಲ್​

ಇದು ವಿಚಾರಗಳ ಪ್ರಚಾರ. ಹಳ್ಳಿ ಹಳ್ಳಿಗೂ ಪ್ರಜಾಕೀಯ ತಲುಪಿದೆ. 110 ಕ್ಷೇತ್ರದಲ್ಲೂ ಪ್ರಜಾಕೀಯ ಬರುತ್ತೆ ಎಂಬ ನಂಬಿಕೆ ಇದೆ ಎಂದು ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ನಮ್ಮ ಪ್ರಣಾಳಿಕೆಯಂತಹ ಪ್ರಣಾಳಿಕೆ ಪ್ರಪಂಚದಲ್ಲಿ ಯಾರು ಕೊಟ್ಟಿಲ್ಲ. ಕುಕ್ಕರ್ ಕೊಡ್ತಾರೆ ಬಟ್, ಅವ್ರಿಗೆ ಸ್ಟವ್ ಬೇಕಾಗಿರುತ್ತೆ. ಅವರಿಗೆ ಬೇಜಾರಾಗಲ್ವಾ. ಸ್ಟಾರ್​ಗಳು ನಮಗೆ ನಮ್ಮ ಅಭ್ಯರ್ಥಿಗಳು. ಮತದಾರರು ಸ್ಟಾರ್​ಗಳು. ಟ್ಯಾಲೆಂಟ್‌ ಗಿಂತ ಕಲ್ಪನೆ ಬಹಳ ಮುಖ್ಯ ಅಂತೆ ಅಲ್ಬರ್ಟ್ ಐನ್‍ಸ್ಟೈನ್ ಹೇಳಿದ್ದಾರೆ. ಬದಲಾವಣೆ ಬೇಕು. ಕರೆಕ್ಟ್ ಅನ್ನಿಸುದ್ರೆ ಮಾಡಿ ಎಂದು ಉಪೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ವಿಧಾನಸಭಾ ಚುನಾಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ