AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ ಎಣಿಕೆಗೆ ಎರಡು ದಿನ ಬೇಕೆ? ಏಕೆಂದು ಬಲ್ಲವರು ತಿಳಿಸುತ್ತೀರಾ? ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಶ್ನೆ ಎತ್ತಿದ ಉಪೇಂದ್ರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ನಟ ಉಪೇಂದ್ರ ಪ್ರಶ್ನೊಂದು ಎತ್ತಿದ್ದು, ಭಾರೀ ಚರ್ಚೆ ಹುಟ್ಟುಹಾಕಿದೆ.

ಮತ ಎಣಿಕೆಗೆ ಎರಡು ದಿನ ಬೇಕೆ? ಏಕೆಂದು ಬಲ್ಲವರು ತಿಳಿಸುತ್ತೀರಾ? ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಶ್ನೆ ಎತ್ತಿದ ಉಪೇಂದ್ರ
Upendra
Follow us
ರಮೇಶ್ ಬಿ. ಜವಳಗೇರಾ
|

Updated on:Mar 29, 2023 | 2:08 PM

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕೊನೆಗೂ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗದ (election commission of india) ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಇಂದು(ಮಾರ್ಚ್ 29) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ನಟ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ(Upendra) ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದು, ಸಂಚಲನ ಮೂಡಿಸಿದೆ. ಅಲ್ಲದೇ ಈ ಪ್ರಶ್ನೆ ಮೂಲಕ ಉಪ್ಪಿ ಸಾರ್ವಜನಿಕರ ತಲೆಗೆ ಹುಳಬಿಟ್ಟಿದ್ದಾರೆ.

ಇದನ್ನೂ ಓದಿ: Karnataka Election 2023 Schedule: ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, ಮೇ 10ರಂದು ಮತದಾನ, ಮೇ 13ಕ್ಕೆ ಫಲಿತಾಂಶ

ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸುತ್ತೀರಾ? ಎಂದು ಟ್ವೀಟ್ ಮಾಡಿದ್ದಾರೆ. ಉಪೇಂದ್ರ ಅವರು ಹೀಗೆ ಯಾಕೆ ಕೇಳಿದ್ದಾರೆ? ಅವರ ತಲೆಯಲ್ಲಿ ಹೇಗೆ ಬಂತು? ಇದರ ಹಿಂದಿನ ಮರ್ಮವೇನು? ಉಪೇಂದ್ರ ಅವರಿಗೆ ಚುನಾವಣೆ ವ್ಯವಸ್ಥೆ ಮೇಲೆಯೇ ಅನುಮಾನ ಬಂತಾ? ಹೀಗೆ ನಾನಾ ಆಯಾಮಗಳಲ್ಲಿ ಸಾರ್ವಜನಕರಿಲ್ಲಿ ಪ್ರಶ್ನೆಗಳ ಜೊತಗೆ ಚರ್ಚೆಗಳು ಸಹ ಶುರುವಾಗಿವೆ.

ಸದ್ಯ ಉಪೇಂದ್ರ ಅವರು ಟ್ವಿಟರ್​ನಲ್ಲಿ ವ್ಯಕ್ತಪಡಿಸಿರುವ ಗೊಂದಲದ ಬಗ್ಗೆ ಅನೇಕರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ? ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ? ಮತ ಎಣಿಕೆ ಶುರುವಾಗುವುದು 13ನೇ ತಾರೀಖಿನಂದು. 11,12ನೇ ತಾರೀಖಿನಂದು ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ, ಹೇಗೆ ಪ್ರಕ್ರಿಯೆ?

ಮತ್ತೋರ್ವ ಕಮೆಂಟ್ ಮಾಡಿದ್ದು, ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ದಿನವೇ release ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ? ಎಂದು ಪ್ರಶ್ನಿಸಿದ್ದರೆ, ಇನ್ನೋರ್ವ ಗೋಲ್ ಮಾಲ್ ಮಾಡುವುದಕ್ಕೆ ಟೈಮ್ ಬೇಕ ಅಲ್ವಾ ಅದಕ್ಕೆ ಎಂದಿದ್ದಾರೆ. ಇನ್ನು ವ್ಯವಸ್ಥೆ ಮೇಲೆನೇ ನಿಮಗೆ ಅನುಮಾನವೇ ಸರ್ ಎಂದು ಪ್ರಶ್ನಿಸಿದ್ದಾರೆ. ಉಪೇಂದ್ರ ಅವರೇ, ಎಲೆಕ್ಷನ್ ಕಣ್ರೀ ಇದು, ಯಾವ್ದೋ ಆನ್ಲೈನ್ exam ಅಲ್ಲ, ಆಗಿದ ತಕ್ಷಣ ರಿಸಲ್ಟ್ ಕೊಡೋಕೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

Published On - 2:08 pm, Wed, 29 March 23

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕಿಸ್ತಾನಿ ಹಿಂದೂಗಳು
ನಮ್ಮಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕಿಸ್ತಾನಿ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್