AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC

ಕರ್ನಾಟಕ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ, ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಭರ್ಜರಿ ತಯಾರಿ: ಕೆಪಿಸಿಸಿ ಪ್ರಚಾರ ಸಮಿತಿಯ ವಿವಿಧ ವಿಭಾಗಗಳಿಗೆ ನಾಯಕರನ್ನು ನೇಮಿಸಿದ AICC
ಕಾಂಗ್ರೆಸ್​
TV9 Web
| Edited By: |

Updated on:Jan 15, 2023 | 6:50 AM

Share

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023)  ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯನ್ನು ಗಂಭೀರಾವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ (C0ngress) ಪ್ರಚಾರ ಸಮಿತಿಯ ವಿವಿಧ ಜವಾಬ್ದಾರಿ ಹಂಚಿಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಹಾಗೂ ವಿಭಾಗವಾರು ಕೋ ಚೇರ್ ಮನ್​ಗಳನ್ನು ನೇಮಿಸಿದೆ.

ಕೆಪಿಸಿಸಿ ಸಂಘಟನಾ ಉಪಾಧ್ಯಕ್ಷರಾಗಿ ಬಿ.ಎಲ್.ಶಂಕರ್​ ಅವರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಕರ್ನಾಟಕದ ಕಲಬುರಗಿ, ಮೈಸೂರು, ಕರಾವಳಿ, ಬೆಳಗಾವಿ, ಮಧ್ಯ ಕರ್ನಾಟಕ, ಬೆಂಗಳೂರು ವಿಭಾಗಗಳಿಗೆ ಕೋ ಚೇರ್ ಮನ್​ಗಳನ್ನು ನೇಮಿಸಿದೆ. ಅಲ್ಲದೇ 10 ಜನರ ಸಾಮಾಜಿಕ ಜಾಲತಾಣ ತಂಡ, 9 ಜನರ ಮಾಧ್ಯಮ ವಿಭಾಗ, 29 ಜಿಲ್ಲಾ ಚೇರ್​ಮನ್ ಹಾಗೂ 32 ಜನರ ಮುಖ್ಯ ಸಂಯೋಜಕರು, 41 ಸಂಯೋಜಕರನ್ನು ಸಹ ನೇಮಕ ಮಾಡಿದೆ.

ವಿಭಾಗವಾರು ಕೋ ಚೇರ್ ಮನ್

ಅಖಿಲ ಕರ್ನಾಟಕ ಸಂಘಟನಾ ಕೋ ಚೇರ್ ಮನ್ ಬಿ.ಎಲ್ ಶಂಕರ್ ಕಲಬುರಗಿ- ಡಾ.ಶರಣಪ್ರಕಾಶ್ ಪಾಟೀಲ್ ಬೆಳಗಾವಿ ವಿಭಾಗ- ಸಂತೋಷ್ ಲಾಡ್ ಬೆಂಗಳೂರು ವಿಭಾಗ- ರಿಜ್ವಾನ್ ಅರ್ಷದ್ ಮೈಸೂರು ವಿಭಾಗ- ಡಾ.ಯತೀಂದ್ರ ಸಿದ್ದರಾಮಯ್ಯ ಮಧ್ಯ ಕರ್ನಾಟಕ ವಿಭಾಗ- ಚಂದ್ರಪ್ಪ ಕರಾಳಿ ಕರ್ನಾಟಕ- ಮಂಜುನಾಥ್ ಭಂಡಾರಿ

ಮುಖ್ಯ ಸಂಯೋಜರು 

ಶಾಸಕರಾದ ನಾಗೇಂದ್ರ, ಆನಂದ್ ನ್ಯಾಮಗೌಡ, ಅಂಜಲಿ ಲಿಂಬಾಳ್ಕರ್, ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ರೂಪ ಶಶಿಧರ್, ಗಣೇಶ್ ಹುಕ್ಕೇರಿ, ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಗೋವಿಂದರಾಜು, ನಜೀರ್ ಅಹಮ್ಮದ್, ರಾಜೇಂದ್ರ, ಮಾಜಿ ಪರಿಷತ್ ಸದಸ್ಯ ವಿಆರ್ ಸುದರ್ಶನ್, ಮಾಜಿ ಸಚಿವರಾದ ಎ.ಬಿ ಪಾಟೀಲ್, ಕಿಮ್ಮನೆ ರತ್ನಾಕರ್, ರಾಣಿ ಸತೀಶ್ ಸೇರಿದಂತೆ ಒಟ್ಟು 32 ಜನರನ್ನು ಮುಖ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

Published On - 10:46 pm, Sat, 14 January 23

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್