AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಯಾರ್ಯಾರಿಗೆ ಸಿಕ್ತು ಟಿಕೆಟ್? ಇಲ್ಲಿದೆ​​

Congress Candidates Second List: ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್​ ಸಿಕ್ಕಿದೆ ಎನ್ನುವುದು ಈ ಕೆಳಗಿನಂತಿದೆ.

Karnataka Assembly Elections 2023: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಯಾರ್ಯಾರಿಗೆ ಸಿಕ್ತು ಟಿಕೆಟ್? ಇಲ್ಲಿದೆ​​
ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.
ರಮೇಶ್ ಬಿ. ಜವಳಗೇರಾ
|

Updated on:Apr 06, 2023 | 3:32 PM

Share

ಬೆಂಗಳೂರು:  ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್​ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾಗಿದೆ. ಇಂದು(ಏಪ್ರಿಲ್ 06) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.  ವಿಶೇಷ ಅಂದ್ರೆ ಎಡರನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಮಡ್​ ಮಣೆ ಹಾಕಿದೆ.  ಆದ್ರೆ, ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಪ್ರಮುಖವಾಗಿ ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ್ದ ಮಾಜಿ ಶಾಸಕ ವೈ.ಎಸ್​.ವಿ.ದತ್ತಾ ಅವರಿಗೆ ಕೊಕ್ ನೀಡಲಾಗಿದೆ. ದತ್ತಾ ಅವರ ಬದಲಿಗೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್​ ನೀಡಲಾಗಿದೆ. ಇದು ಅಚ್ಚರಿಗೆ ಕಾರಣವಾಗಿದೆ.

ಕಳೆದ ಮಾರ್ಚ್​ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 58 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದ ಕೆಲವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್​ ಘೋಷಣೆ ಮಾಡಲಾಗಿದೆ. ಮುಖ್ಯವಾಗಿ ಇತ್ತೀಚೆಗಷ್ಟೇ ಕೂಡ್ಲಿಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್​.ವೈ ಗೋಪಾಲಕೃಷ್ಣ ಅವರಿಗೆ ಮೊಣಕಾಲ್ಮೂರು ಕ್ಷೇತ್ರದ ಟಿಕೆಟ್​ ನೀಡಲಾಗಿದೆ. ಇನ್ನು ಸಿದ್ದರಾಮಯ್ಯನವರ ಆಪ್ತ ಹೆಚ್​ ಆಂಜನೇಯ್ಯ ಅವರಿಗೆ ಹೊಳಲ್ಕೇರೆ ಟಿಕೆಟ್​​ ಸಿಕ್ಕಿದೆ.

42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು

  • ನಾಗಠಾಣ ಕ್ಷೇತ್ರ(ಎಸ್​ಸಿ) – ವಿಠ್ಠಲ್​ ಕಟಕದೊಂಡ
  • ವಿಜಯಪುರ ಕ್ಷೇತ್ರ – ಅಬ್ದುಲ್​​​ ಹಮೀದ್​ ಖಾಜಾಸಾಹೇಬ್​​
  •  ಬಾಗಲಕೋಟೆ ವಿಧಾನಸಭಾ ಕ್ಷೇತ್ರ – ಹೆಚ್​.ವೈ.ಮೇಟಿ
  • ಬಾದಾಮಿ ಕ್ಷೇತ್ರ- ಭೀಮ್​ಸೇನ್ ಚಿಮ್ಮನಕಟ್ಟಿ
  • ಬೀಳಗಿ ಕ್ಷೇತ್ರ -ಜೆ.ಟಿ.ಪಾಟೀಲ್
  •  ಮುಧೋಳ ಕ್ಷೇತ್ರ(ಎಸ್​ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪುರ
  •  ಸವದತ್ತಿ ಕ್ಷೇತ್ರ- ವಿಶ್ವಾಸ್​ ವಸಂತ್ ವೈದ್ಯ
  • ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್​ ಬಿ.ಪಾಟೀಲ್​
  •  ಗೋಕಾಕ್ ಕ್ಷೇತ್ರ – ಡಾ.ಮಹಾಂತೇಶ್​ ಕಡಾಡಿ
  •  ನಿಪ್ಪಾಣಿ ಕ್ಷೇತ್ರ-ಕಾಕಾ ಸಾಹೇಬ್ ಪಾಟೀಲ್
  • ಅಫಜಲಪುರ -ಎಂ.ವೈ. ಪಾಟೀಲ್
  • ಯಾದಗಿರಿ -ಚನ್ನಾರೆಡ್ಡಿ ಪಾಟೀಲ್ ತುನ್ನೂರ್
  • ಗುರುಮಿಠಕಲ್ ಕ್ಷೇತ್ರ -ಬಾಬುರಾವ್ ಚಿಂಚನಸೂರ್
  • ಗುಲಬರ್ಗಾ ದಕ್ಷಿಣ ಕ್ಷೇತ್ರ -ಅಲ್ಲಮಪ್ರಭು ಪಾಟೀಲ್
  • ಬಸವಕಲ್ಯಾಣ ಕ್ಷೇತ್ರ -ವಿಜಯ ಧರ್ಮಸಿಂಗ್
  • ಗಂಗಾವತಿ ಕ್ಷೇತ್ರ -ಇಕ್ಬಾಲ್ ಅನ್ಸಾರಿ
  • ನರಗುಂದ ಕ್ಷೇತ್ರ -ಬಿ.ಆರ್​.ಯಾವಗಲ್
  • ಧಾರವಾಡ ಕ್ಷೇತ್ರ -ವಿನಯ್ ಕುಲಕರ್ಣಿ
  • ಕಲಘಟಗಿ ಕ್ಷೇತ್ರ -ಸಂತೋಷ್ ಲಾಡ್
  • ಶಿರಸಿ ಕ್ಷೇತ್ರ -ಭೀಮಣ್ಣ ನಾಯಕ್
  • ಕೊಳ್ಳೇಗಾಲ ಕ್ಷೇತ್ರ -ಎ.ಆರ್‌.ಕೃಷ್ಣಮೂರ್ತಿ
  • ಚಾಮುಂಡೇಶ್ವರಿ ಕ್ಷೇತ್ರ -ಸಿದ್ದೇಗೌಡ
  • ಮಡಿಕೇರಿ ಕ್ಷೇತ್ರ -ಡಾ.ಮಂಥರ್ ಗೌಡ
  •  ಬೇಲೂರು-ಬಿ. ಶಿವರಾಂ
  • ಕೃಷ್ಣರಾಜ ಪೇಟೆ ಕ್ಷೇತ್ರ -ಬಿ.ಎಸ್. ದೇವರಾಜ್
  • ಮಂಡ್ಯ ಕ್ಷೇತ್ರ -ಪಿ. ರವಿಕುಮಾರ್
  • ಮೇಲುಕೋಟೆ ಕ್ಷೇತ್ರ -ದರ್ಶನ್ ಪುಟ್ಟಣ್ಣಯ್ಯ
  • ಪದ್ಮನಾಭನಗರ ಕ್ಷೇತ್ರ -ವಿ.ರಘುನಾಥ್ ನಾಯ್ಡು
  • ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ -ಕೇಶವಮೂರ್ತಿ
  • ಯಶವಂತಪುರ ಕ್ಷೇತ್ರ -ಎಸ್​.ಬಾಲರಾಜಗೌಡ
  • ಯಲಹಂಕ ಕ್ಷೇತ್ರ -ಕೇಶವ ರಾಜಣ್ಣ.ಬಿ
  • ಗುಬ್ಬಿ ಕ್ಷೇತ್ರ -ಎಸ್​.ಆರ್​.ಶ್ರೀನಿವಾಸ್
  • ತುಮಕೂರು ನಗರ ಕ್ಷೇತ್ರ -ಇಕ್ಬಾಲ್​ ಅಹ್ಮದ್
  • ಕಡೂರು ಕ್ಷೇತ್ರ -ಆನಂದ್ ಕೆ.ಎಸ್
  • ಉಡುಪಿ ಕ್ಷೇತ್ರ -ಪ್ರಸಾದ್ ರಾಜ್​ ಕಂಚನ್
  • ತೀರ್ಥಹಳ್ಳಿ ಕ್ಷೇತ್ರ -ಕಿಮ್ಮನೆ ರತ್ನಾಕರ್
  • ಚನ್ನಗಿರಿ ಕ್ಷೇತ್ರ-ಬಸವರಾಜು.ವಿ

Published On - 11:05 am, Thu, 6 April 23

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ