AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲಿಕೇಶಿ ನಗರದಲ್ಲಿ ಕೊನೆಗೂ ಆ ಪಕ್ಷದಿಂದ ಅಖಾಡಕ್ಕಿಳಿದ ಅಖಂಡ ಶ್ರೀನಿವಾಸ ಮೂರ್ತಿ!

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಬಿಎಸ್​ಪಿ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿಯಾಗಿ ಈ ಬಾರಿ ಚುನಾವಣೆ ಎದುರಿಸಲಿದ್ದಾರೆ.

ಪುಲಿಕೇಶಿ ನಗರದಲ್ಲಿ ಕೊನೆಗೂ ಆ ಪಕ್ಷದಿಂದ ಅಖಾಡಕ್ಕಿಳಿದ ಅಖಂಡ ಶ್ರೀನಿವಾಸ ಮೂರ್ತಿ!
ಅಖಂಡ ಶ್ರೀನಿವಾಸ ಮೂರ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 24, 2023 | 2:34 PM

Share

ಮುಖ್ಯಾಂಶಗಳು

  • ಬಿಎಸ್​ಪಿ ಪಕ್ಷ ಸೇರಿದ ಅಖಂಡ ಶ್ರೀನಿವಾಸ ಮೂರ್ತಿ
  • ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಲು ಅಖಂಡ ಶ್ರೀನಿವಾಸ ಮೂರ್ತಿ ಸಜ್ಜು
  • ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ರಣಕಣ ರಂಗೇರಿದೆ. ಅಭ್ಯರ್ಥಿಗಳ ಕೈಯಲ್ಲಿ ಕೆಲವೇ ದಿನಗಳು ಬಾಕಿ ಇದ್ದು ಎಲ್ಲರೂ ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮತ್ತೊಂದೆಡೆ ಟಿಕೆಟ್ ಕೈ ತಪ್ಪಿದ ಅಸಮಾಧಾನಿತ ಅಭ್ಯರ್ಥಿಗಳು ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಬೇರೆ ಬೇರೆ ಪಕ್ಷಗಳಿಗೆ ಹಾರುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಬಿಎಸ್​ಪಿ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿಯಾಗಿ ಈ ಬಾರಿ ಚುನಾವಣೆ ಎದುರಿಸಲಿದ್ದಾರೆ. ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಲು ಅಖಂಡ ಶ್ರೀನಿವಾಸ ಮೂರ್ತಿ ಸಜ್ಜಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆ ಪುಲಿಕೇಶಿ ನಗರ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಬದಲಾಗಿ ಎ.ಸಿ. ಶ್ರೀನಿವಾಸ್ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: Karnataka Assembly Polls; ಸಿಈಸಿ ಸಭೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಹೆಸರು ಶಿಫಾರಸ್ಸು ಮಾಡಲಾಗಿತ್ತು, ಹೈಕಮಾಂಡ್ ಯಾಕೆ ಕೈಬಿಟ್ಟಿತೋ ಗೊತ್ತಿಲ್ಲ: ಜಿ ಪರಮೇಶ್ವರ

ಅಖಂಡ ಶ್ರೀನಿವಾಸಮೂರ್ತಿಗೆ ಕಾಂಗ್ರೆಸ್ ಟಿಕೆಟ್ ನೀಡದಿರಲು ಕಾರಣವೇನು?

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರ ಹೆಸರು ಹೇಳಿ ಬಂದಿತ್ತು. ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಪ್ರವಾದಿ ಪೈಗಂಬರ್ ಅವರ ಕುರಿತು ನಿಂದನೆ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟೊಂದ್ನನು ಹರಿಬಿಟ್ಟಿದ್ದು ಈ ಪ್ರಕರಣ ವಿರೋಪಕ್ಕೆ ತೆರಳಿತ್ತು. ಪ್ರವಾದಿ ನಿಂದನೆ ಆರೋಪದಡಿಯಲ್ಲಿ ಕೆಲವು ಕಿಡಿಗೇಡಿಗಳು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟಿದ್ದರು. ಹಲವು ವಾಹನಗಳನ್ನು ಸುಟ್ಟು ಹಾಕಿದ್ದರು. ಅಲ್ಲದೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಈ ವೇಳೆ ನಡೆದ ಪೊಲೀಸ್ ಗೊಲಿಬಾರ್‌ಗೆ ಮೂವರು ಬಲಿಯಾಗಿದ್ದರು.

ಈ ಘಟನೆಯ ಹಿಂದೆ ಮಾಜಿ ಮೇಯರ್ ಹಾಗೂ ಪುಲಕೇಶಿನಗರದ ಟಿಕೆಟ್ ಆಕಾಂಕ್ಷಿ ಸಂಪತ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಕಾಂಗ್ರೆಸ್‌ನಲ್ಲಿ ಒಂದು ಬಣ ಅಖಂಡ ಶ್ರೀನಿವಾಸ್ ಮೂರ್ತಿಗೆ ಬೆಂಬಲವಾಗಿ ನಿಂತರೆ ಮತ್ತೊಂದು ಬಣ ವಿರೋಧವಾಗಿತ್ತು. ಅಖಂಡ ಮನೆಗೆ ಬೆಂಕಿ ಇಟ್ಟ ಆರೋಪಿ ಸಂಪತ್ ರಾಜ್‌ ಕೆಪಿಸಿಸಿಯ ಕಾರ್ಯಕ್ರಮಗಳಲ್ಲಿ ಕೆಲ ಕಾಲ ಕಾಣಿಸಿಕೊಳ್ಳದೆ ಇದ್ದರೂ, ಬಳಿಕ ಅವರಿಗೆ ವೇದಿಕೆಯಲ್ಲಿ ಅವಕಾಶ ಕೊಡಲಾಗಿತ್ತು. ಇದರಿಂದ ನೊಂದುಕೊಂಡಿದ್ದ ಅಖಂಡ ಎಐಸಿಸಿಗೂ ದೂರು ನೀಡಿದ್ದರು. ಈ ನಡುವೆ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಕೊಡಬಾರದು ಎಂಬ ಚರ್ಚೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಅಖಂಡ ಪರವಾಗಿ ಸಿದ್ದರಾಮಯ್ಯ ಹಾಗೂ ಜಮೀರ್ ನಿಂತಿದ್ದರು. ಹಾಗಿದ್ದರೂ ನಾಲ್ಕನೇ ಪಟ್ಟಿಯಲ್ಲೂ ಅಖಂಡ ಹೆಸರು ಕಂಡುಬಂದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:06 pm, Mon, 24 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ