AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲಿಕೇಶಿ ನಗರದಲ್ಲಿ ಕೊನೆಗೂ ಆ ಪಕ್ಷದಿಂದ ಅಖಾಡಕ್ಕಿಳಿದ ಅಖಂಡ ಶ್ರೀನಿವಾಸ ಮೂರ್ತಿ!

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಬಿಎಸ್​ಪಿ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿಯಾಗಿ ಈ ಬಾರಿ ಚುನಾವಣೆ ಎದುರಿಸಲಿದ್ದಾರೆ.

ಪುಲಿಕೇಶಿ ನಗರದಲ್ಲಿ ಕೊನೆಗೂ ಆ ಪಕ್ಷದಿಂದ ಅಖಾಡಕ್ಕಿಳಿದ ಅಖಂಡ ಶ್ರೀನಿವಾಸ ಮೂರ್ತಿ!
ಅಖಂಡ ಶ್ರೀನಿವಾಸ ಮೂರ್ತಿ
ಆಯೇಷಾ ಬಾನು
|

Updated on:Apr 24, 2023 | 2:34 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ರಣಕಣ ರಂಗೇರಿದೆ. ಅಭ್ಯರ್ಥಿಗಳ ಕೈಯಲ್ಲಿ ಕೆಲವೇ ದಿನಗಳು ಬಾಕಿ ಇದ್ದು ಎಲ್ಲರೂ ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮತ್ತೊಂದೆಡೆ ಟಿಕೆಟ್ ಕೈ ತಪ್ಪಿದ ಅಸಮಾಧಾನಿತ ಅಭ್ಯರ್ಥಿಗಳು ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಬೇರೆ ಬೇರೆ ಪಕ್ಷಗಳಿಗೆ ಹಾರುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಬಿಎಸ್​ಪಿ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿಯಾಗಿ ಈ ಬಾರಿ ಚುನಾವಣೆ ಎದುರಿಸಲಿದ್ದಾರೆ. ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಲು ಅಖಂಡ ಶ್ರೀನಿವಾಸ ಮೂರ್ತಿ ಸಜ್ಜಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆ ಪುಲಿಕೇಶಿ ನಗರ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಬದಲಾಗಿ ಎ.ಸಿ. ಶ್ರೀನಿವಾಸ್ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: Karnataka Assembly Polls; ಸಿಈಸಿ ಸಭೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಹೆಸರು ಶಿಫಾರಸ್ಸು ಮಾಡಲಾಗಿತ್ತು, ಹೈಕಮಾಂಡ್ ಯಾಕೆ ಕೈಬಿಟ್ಟಿತೋ ಗೊತ್ತಿಲ್ಲ: ಜಿ ಪರಮೇಶ್ವರ

ಅಖಂಡ ಶ್ರೀನಿವಾಸಮೂರ್ತಿಗೆ ಕಾಂಗ್ರೆಸ್ ಟಿಕೆಟ್ ನೀಡದಿರಲು ಕಾರಣವೇನು?

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರ ಹೆಸರು ಹೇಳಿ ಬಂದಿತ್ತು. ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್ ಎಂಬಾತ ಪ್ರವಾದಿ ಪೈಗಂಬರ್ ಅವರ ಕುರಿತು ನಿಂದನೆ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟೊಂದ್ನನು ಹರಿಬಿಟ್ಟಿದ್ದು ಈ ಪ್ರಕರಣ ವಿರೋಪಕ್ಕೆ ತೆರಳಿತ್ತು. ಪ್ರವಾದಿ ನಿಂದನೆ ಆರೋಪದಡಿಯಲ್ಲಿ ಕೆಲವು ಕಿಡಿಗೇಡಿಗಳು ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟಿದ್ದರು. ಹಲವು ವಾಹನಗಳನ್ನು ಸುಟ್ಟು ಹಾಕಿದ್ದರು. ಅಲ್ಲದೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಈ ವೇಳೆ ನಡೆದ ಪೊಲೀಸ್ ಗೊಲಿಬಾರ್‌ಗೆ ಮೂವರು ಬಲಿಯಾಗಿದ್ದರು.

ಈ ಘಟನೆಯ ಹಿಂದೆ ಮಾಜಿ ಮೇಯರ್ ಹಾಗೂ ಪುಲಕೇಶಿನಗರದ ಟಿಕೆಟ್ ಆಕಾಂಕ್ಷಿ ಸಂಪತ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಕಾಂಗ್ರೆಸ್‌ನಲ್ಲಿ ಒಂದು ಬಣ ಅಖಂಡ ಶ್ರೀನಿವಾಸ್ ಮೂರ್ತಿಗೆ ಬೆಂಬಲವಾಗಿ ನಿಂತರೆ ಮತ್ತೊಂದು ಬಣ ವಿರೋಧವಾಗಿತ್ತು. ಅಖಂಡ ಮನೆಗೆ ಬೆಂಕಿ ಇಟ್ಟ ಆರೋಪಿ ಸಂಪತ್ ರಾಜ್‌ ಕೆಪಿಸಿಸಿಯ ಕಾರ್ಯಕ್ರಮಗಳಲ್ಲಿ ಕೆಲ ಕಾಲ ಕಾಣಿಸಿಕೊಳ್ಳದೆ ಇದ್ದರೂ, ಬಳಿಕ ಅವರಿಗೆ ವೇದಿಕೆಯಲ್ಲಿ ಅವಕಾಶ ಕೊಡಲಾಗಿತ್ತು. ಇದರಿಂದ ನೊಂದುಕೊಂಡಿದ್ದ ಅಖಂಡ ಎಐಸಿಸಿಗೂ ದೂರು ನೀಡಿದ್ದರು. ಈ ನಡುವೆ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಕೊಡಬಾರದು ಎಂಬ ಚರ್ಚೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಅಖಂಡ ಪರವಾಗಿ ಸಿದ್ದರಾಮಯ್ಯ ಹಾಗೂ ಜಮೀರ್ ನಿಂತಿದ್ದರು. ಹಾಗಿದ್ದರೂ ನಾಲ್ಕನೇ ಪಟ್ಟಿಯಲ್ಲೂ ಅಖಂಡ ಹೆಸರು ಕಂಡುಬಂದಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:06 pm, Mon, 24 April 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?