AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು

ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಕರ್ನಾಟಕದಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು
ಮದ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 03, 2023 | 2:38 PM

Share

ಮುಖ್ಯಾಂಶಗಳು

  • ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳು ಬಂದ್
  • ನೆರೆ ರಾಜ್ಯಗಳಿಂದ ಸರಬರಾಜು ಆಗದಂತೆ ಹದ್ದಿನ ಕಣ್ಣು
  • ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಎಲ್ಲೆಡೆ ಚುನಾವಣೆ ಹಬ್ಬದ ಸಂಭ್ರಮ ಜೋರಾಗಿದೆ. ಆದ್ರೆ ಚುನಾವಣೆಯ ಬಿಸಿ ಮದ್ಯ ಪ್ರಿಯರಿಗೆ ತಟ್ಟಲಿದೆ(Liquor Ban). ಏಕೆಂದರೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ದೃಷ್ಟಿಯಿಂದಲೂ ಮದ್ಯ ಮಾರಾಟದ ಮೇಲೆ ನಿಷೇಧ ಹೇರೋದು ಅತ್ಯಗತ್ಯವಾಗಿದೆ. ಹೀಗಾಗಿ ಮತದಾನ ದಿನದ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಸಿಗೋದಿಲ್ಲ.

ಇದನ್ನೂ ಓದಿ: Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ ಬಂಧನ

ಮೇ‌ 8 ರಿಂದ 10 ರವರೆಗೂ ಫುಲ್ ಡ್ರೈ ಡೇ. ಮೇ‌ 10 ಎಲೆಕ್ಷನ್ ‌ಮುಗಿಯುವ ತನಕ ಮದ್ಯ ಸರಬರಾಜು ಬಂದ್ ಮಾಡಲಾಗುತ್ತೆ. ನೆರೆಯ ರಾಜ್ಯಗಳಲ್ಲೂ‌ ಮದ್ಯ ಬಂದ್ ಆಗಲಿದೆ. ಕೇರಳ, ಆಂಧ್ರ ಪ್ರದೇಶ, ಗೋವ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಅಬಕಾರಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮದ್ಯ ಸಿಗದಂತೆ ಕಣ್ಣಿಡಲಾಗುತ್ತೆ.  ಎಲೆಕ್ಷನ್ ಮುಗಿದ ಬೆನ್ನಲ್ಲೇ ಕೌಂಟಿಂಗ್ ಗೂ‌ ಡ್ರೈ ಡೇ ಸೂಚಿಸಲಾಗಿದೆ. ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕ್ಕೆ ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಎಲ್ಲಾ ಬಾರ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಿಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಫೈ ಸ್ಟಾರ್ ಹೋಟೆಲ್ ನಲ್ಲೂ‌ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ‌ ಉಲ್ಲಂಘಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು