AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಕಳದಲ್ಲಿ ನಿಲ್ಲದ ಗುರು-ಶಿಷ್ಯರ ಸಂಘರ್ಷ: ಭ್ರಷ್ಟಾಚಾರ ಆರೋಪ, ಬಹಿರಂಗ ಚರ್ಚೆಗೆ ಆಹ್ವಾನಿಸಿದ ಪ್ರಮೋದ್​​ ಮುತಾಲಿಕ್​

ನಾನು ಕೇವಲ ಆರೋಪ ಮಾಡಿಲ್ಲ ದಾಖಲೆ ಬಹಿರಂಗಗೊಳಿಸಿದ್ದೇನೆ. ಅಭಿವೃದ್ಧಿ ಜೊತೆ ಕಮಿಷನ್ ಮತ್ತು ಕಲೆಕ್ಷನ್ ಕೂಡ ಮಾಡಿದ್ದೀರಿ. ಕಾರ್ಕಳಕ್ಕೆ ಬಂದು ಬಹಿರಂಗ ಚರ್ಚೆ ಮಾಡಲು ನಾನು ಸಿದ್ಧ ಎಂದು ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

ಕಾರ್ಕಳದಲ್ಲಿ ನಿಲ್ಲದ ಗುರು-ಶಿಷ್ಯರ ಸಂಘರ್ಷ: ಭ್ರಷ್ಟಾಚಾರ ಆರೋಪ, ಬಹಿರಂಗ ಚರ್ಚೆಗೆ ಆಹ್ವಾನಿಸಿದ ಪ್ರಮೋದ್​​ ಮುತಾಲಿಕ್​
ಪ್ರಮೋದ್ ಮುತಾಲಿಕ್​ (ಎಡಚಿತ್ರ) ಸುನಿಲ್​ ಕುಮಾರ್​ (ಬಲಚಿತ್ರ)
ವಿವೇಕ ಬಿರಾದಾರ
|

Updated on:May 16, 2023 | 12:54 PM

Share

ಉಡುಪಿ: ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಮತ್ತು ಶಿಷ್ಯ, ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar) ಮಧ್ಯದ ಕಾಳಗ ಅಂತ್ಯವಾಗಿಲ್ಲ. ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಶಿಷ್ಯನ ವಿರುದ್ಧ ಗುರು ಪ್ರಮೋದ್ ಮುತಾಲಿಕ್ ತೊಡೆ ತಟ್ಟಿದ್ದರು. ಈ ವೇಳೆ ಗುರುವಿನ ವಿರುದ್ಧ ತುಟಿ ಪಿಟಿಕ್ ಎನ್ನದ ಸುನಿಲ್​ ಕುಮಾರ್​​, ನಿನ್ನೆ (ಮೇ.15) ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು ಎಂದು ಆರೋಪ ಮಾಡಿದ್ದರು. ಇದಕ್ಕೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದಾರೆ. ತನ್ನ ವಿರುದ್ಧದ ಆರೋಪಕ್ಕೆ ಮಾರಿಗುಡಿಯಲ್ಲಿ ಪ್ರಮಾಣ ಮಾಡಿ ಬಂದ ಪ್ರಮೋದ್ ಮುತಾಲಿಕ್, ನಾನು ಕೇವಲ ಆರೋಪ ಮಾಡಿಲ್ಲ ದಾಖಲೆ ಬಹಿರಂಗಗೊಳಿಸಿದ್ದೇನೆ. ಅಭಿವೃದ್ಧಿ ಜೊತೆ ಕಮಿಷನ್ ಮತ್ತು ಕಲೆಕ್ಷನ್ ಕೂಡ ಮಾಡಿದ್ದೀರಿ ಎಂದು ಸುನಿಲ್​ ಕುಮಾರ್​ ವಿರುದ್ಧ ಆರೋಪಿಸಿದರು.

ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ ಅವರು ನನ್ನನ್ನು ಡೀಲ್ ಮಾಸ್ಟರ್ ಎಂದು ಕರೆದಿದ್ದೀರಿ. ಹಣ ಗಳಿಸುವ ಉದ್ದೇಶ ಇದ್ದಿದ್ದರೇ ಧಾರವಾಡದಿಂದ ಕಾರ್ಕಳಕ್ಕೆ ಬರಬೇಕಾಗಿರಲಿಲ್ಲ. 48 ವರ್ಷ ಹೋರಾಟ ಮಾಡಬೇಕಾಗಿ ಇರಲಿಲ್ಲ. ನಾನು ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಯಾವುದೇ ಉತ್ತರ ನೀಡಿಲ್ಲ. ಕಾರ್ಕಳಕ್ಕೆ ಬಂದು ಬಹಿರಂಗ ಚರ್ಚೆ ಮಾಡಲು ನಾನು ಸಿದ್ಧ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುತಾಲಿಕ್ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ

ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು. ಕನ್ನಡಿ ಮುಂದೆ ನಿಂತು ಸುನಿಲ್ ಕುಮಾರ್ ಅವಲೋಕನ ಮಾಡಿಕೊಳ್ಳಬೇಕು. ಮಾಜಿ ಸಚಿವ ಈಶ್ವರಪ್ಪ ಇಂಧನ ಇಲಾಖೆ ಭ್ರಷ್ಟಾಚಾರದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದರು. ಕಾರ್ಕಳದ ಅಧಿಕಾರಿಗಳು ಕೂಡ ಆರೋಪ ಮಾಡಿದ್ದರು. ಕಾರ್ಕಳದ ಮಾರಿಗುಡಿಗೆ ಹೋಗಿ ತೆಂಗಿನಕಾಯಿ ಇಟ್ಟು ಪ್ರಮಾಣ ಮಾಡಿ ಬಂದಿದ್ದೇನೆ. ಮಾರಿಗುಡಿಗೆ ಹೋಗಿ ತೆಂಗಿನಕಾಯಿ ಇಟ್ಟು ಪ್ರಮಾಣ ಮಾಡುವ ನೈತಿಕತೆ ನಿಮಗೆ ಇದೆಯಾ? ಭ್ರಷ್ಟತೆ, ವಂಚನೆ, ಮೋಸದಿಂದ ಗೆದ್ದಿದ್ದೀರಿ ನಿಮಗೆ ಅಭಿನಂದನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತದಾನದಲ್ಲಿ ಸೋತಿರಬಹುದು ಹೋರಾಟ, ಹಿಂದುತ್ವ, ಸತ್ಯದಲ್ಲಿ ನಾನು ಸೋತಿಲ್ಲ. ನೀವು ನನಗೆ ಬುದ್ಧಿ ಕಲಿಸುವ ಅವಶ್ಯಕತೆ ಇಲ್ಲ ಆರ್‌ಎಸ್‌ಎಸ್‌ ಕಲಿಸಿದೆ. ತಾಕತ್ತಿದ್ದರೆ ನನ್ನ ಸವಾಲು ಸ್ವೀಕಾರ ಮಾಡಿ. ಮಾರಿಗುಡಿಗೆ ಹೋಗಿ ಪ್ರಮಾಣ ಮಾಡಿ. ಬಹಿರಂಗ ಚರ್ಚೆಗೆ ವೇದಿಕೆ ಸಿದ್ಧ ಮಾಡಿ ಎಂದು ಸವಾಲು ಹಾಕಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Tue, 16 May 23

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು