AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah: ಚುನಾವಣಾ ಪೂರ್ವ ಸಮೀಕ್ಷೆ ಕಾಂಗ್ರೆಸ್ ಪರ ಇದ್ದರೂ ಗೆಲ್ಲುವುದು ಬಿಜೆಪಿಯೇ; ಅಮಿತ್ ಶಾ

ಚುನಾವಣಾ ಪೂರ್ವ ಸಮೀಕ್ಷೆಗಳು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇರುತ್ತವೆ. ಆದರೆ, ಚುನಾವಣಾ ಫಲಿತಾಂಶ ಪ್ರಕಟವಾದಾಗ ಗೆಲುವು ಬಿಜೆಪಿಯದ್ದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Amit Shah: ಚುನಾವಣಾ ಪೂರ್ವ ಸಮೀಕ್ಷೆ ಕಾಂಗ್ರೆಸ್ ಪರ ಇದ್ದರೂ ಗೆಲ್ಲುವುದು ಬಿಜೆಪಿಯೇ; ಅಮಿತ್ ಶಾ
ಅಮಿತ್ ಶಾ
ಗಣಪತಿ ಶರ್ಮಾ
|

Updated on: Apr 25, 2023 | 8:40 PM

Share

ಬೆಂಗಳೂರು: ಚುನಾವಣಾ ಪೂರ್ವ ಸಮೀಕ್ಷೆಗಳು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇರುತ್ತವೆ. ಆದರೆ, ಚುನಾವಣಾ ಫಲಿತಾಂಶ ಪ್ರಕಟವಾದಾಗ ಗೆಲುವು ಬಿಜೆಪಿಯದ್ದೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವರದಿಗಳ ಬೆನ್ನಲ್ಲೇ ಶಾ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದೇ ಹೇಳುತ್ತವೆ. ಪ್ರಬಲ ಪೈಪೋಟಿ ಇವೆ ಎಂದೂ ಹೇಳುತ್ತವೆ. ಆದರೆ, ಫಲಿತಾಂಶ ಪ್ರಕಟವಾದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್​ಗೆ ಸೇರ್ಪಡೆಯಾಗಿ ಆ ಪಕ್ಷದಿಂದ ಚುನಾವಣೆ ಸ್ಪರ್ಧಿಸುತ್ತಿರುವ ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಚುನಾವಣೆಯಲ್ಲಿ ಸೋಲಲಿದ್ದಾರೆ ಎಂದೂ ಶಾ ಹೇಳಿದ್ದಾರೆ.

ರಾಜ್ಯದಲ್ಲಿ ತಮ್ಮ ಪಕ್ಷ ಸರ್ಕಾರ ರಚಿಸುವ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಡಬಲ್ ಇಂಜಿನ್ ಸರ್ಕಾರ ರಚಿಸಲಿದೆ ಎಂದು ಶಾ ಹೇಳಿದ್ದಾರೆ. ಯಾದಗಿರಿ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಅವರು ಚುನಾವಣಾ ಪ್ರಚಾರ ನಡೆಸಿದ್ದಾರೆ.

ಇದನ್ನೂ ಓದಿ: TV9 Kannada CVoter survey: ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ

ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ‘ಟಿವಿ9 ಕನ್ನಡ’ ಮತ್ತು ‘ಸಿವೋಟರ್’ ಸಹಭಾಗಿತ್ವದಲ್ಲಿ ನಡೆಸಲಾದ ಸಮೀಕ್ಷಾ ವರದಿ ತಿಳಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಶೇ 40 ರಷ್ಟು ಮತಹಂಚಿಕೆ ಪಡೆಯುವ ನಿರೀಕ್ಷೆಯಿದೆ. ಆಡಳಿತಾರೂಢ ಬಿಜೆಪಿ ಶೇ 33.9 ಮತ್ತು ಜೆಡಿಎಸ್ ಶೇ 18.8 ರಷ್ಟು ಮತ ಹಂಚಿಕೆ ಪಡೆಯಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?