AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ

ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ
ನಿಖಿಲ್ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 04, 2023 | 3:13 PM

Share

ರಾಮನಗರ: ಜೆಡಿಎಸ್ (JDS) ​ಪಕ್ಷದಲ್ಲಿ ಟಿಕೆಟ್​ ವಿಚಾರವಾಗಿ ಒಳಜಗಳ ಶುರುವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ವಿಚಾರವಾಗಿ ಕುಟುಂಬದಲ್ಲೇ ಬಿರುಕು ಬಿಟ್ಟಿದೆ. ಈ ವಿಚಾರವಾಗಿ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸುವುದಾದರೇ ರಾಮನಗರದಿಂದ ನನಗೆ (ಶಾಸಕಿ ಅನಿತಾ ಕುಮಾರಸ್ವಾಮಿ) ನೀಡಿ ಎಂದು ಅನಿತಾ ಕುಮಾರಸ್ವಾಮಿಯವರು (Anita Kumarswamy) ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ವಿಚಾರವಾಗಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು (Nikhil Kumarswmay) ಮಾತನಾಡಿ ಶಾಸಕಿ ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿಯವರು ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಬೇಕಿರುವುದು ಅನಿವಾರ್ಯ. ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಮೋದಿ ಜನಪ್ರಿಯತೆ ಲಾಭ ಪಡೆಯಲು ಬಿಜೆಪಿ ತಂತ್ರ: ಕರ್ನಾಟಕದಲ್ಲಿ 20 ರ‍್ಯಾಲಿ ಮಾಡಲಿರುವ ಪ್ರಧಾನಿ

ದೇವೇಗೌಡರ ಕುಟುಂಬದಲ್ಲಿ ಕದನ ವಿಚಾರವಾಗಿ ಮಾತನಾಡಿದ ಅವರು ನಮಗೆ ಅತ್ಯಂತ ನೋವಾಗುವ ವಿಚಾರ. ಎಲ್ಲಿಂದ ಊಹಾಪೋಹಗಳು ಬರುತ್ತವೆ ಎಂದು ಗೊತ್ತಿಲ್ಲ. ಅನಿತಾ ಕುಮಾರಸ್ವಾಮಿಯವರು ಟಿಕೆಟ್ ಕೇಳುತ್ತಿದ್ದಾರೆ ಎಂದು ಗೊಂದಲ ಸೃಷ್ಠಿ ಆಗಿದೆ. ಅವರು ಸಂಘಟನೆ ಮಾಡುತ್ತಿದ್ದಾರೆ. ಅನಿತಾ ಕುಮಾರಸ್ವಾಮಿಯವರಿಗೆ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ. ಇದರ ಬಗ್ಗೆ ಚರ್ಚೆ ಆಗಿಲ್ಲ ಎಂದು ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ, ನಿಖಿಲ್​ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿಯವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕಡೆ ಕಣಕ್ಕಿಳಿದಿದ್ದರು. ಎರಡೂ ಕಡೆ ಗೆಲುವು ಸಾಧಿಸಿದ್ದರು. ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕೆ ಇಳಿಸಿದರು. ಅನಿತಾ ಕುಮಾರಸ್ವಾಮಿ ಜಯಬೇರಿ ಬಾರಿಸಿದರು. ಈಗ ಅನಿತಾ ಕುಮಾರಸ್ವಾಮಿಯವರು ಪುತ್ರ ನಿಖಿಲ್​ ಕುಮಾರಸ್ವಾಮಿಯವರಿಗೆ ಕೇತ್ರ ಬಿಟ್ಟು ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Published On - 1:29 pm, Tue, 4 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ