AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ

ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ
ನಿಖಿಲ್ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on:Apr 04, 2023 | 3:13 PM

Share

ರಾಮನಗರ: ಜೆಡಿಎಸ್ (JDS) ​ಪಕ್ಷದಲ್ಲಿ ಟಿಕೆಟ್​ ವಿಚಾರವಾಗಿ ಒಳಜಗಳ ಶುರುವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ವಿಚಾರವಾಗಿ ಕುಟುಂಬದಲ್ಲೇ ಬಿರುಕು ಬಿಟ್ಟಿದೆ. ಈ ವಿಚಾರವಾಗಿ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸುವುದಾದರೇ ರಾಮನಗರದಿಂದ ನನಗೆ (ಶಾಸಕಿ ಅನಿತಾ ಕುಮಾರಸ್ವಾಮಿ) ನೀಡಿ ಎಂದು ಅನಿತಾ ಕುಮಾರಸ್ವಾಮಿಯವರು (Anita Kumarswamy) ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ವಿಚಾರವಾಗಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು (Nikhil Kumarswmay) ಮಾತನಾಡಿ ಶಾಸಕಿ ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿಯವರು ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಬೇಕಿರುವುದು ಅನಿವಾರ್ಯ. ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಮೋದಿ ಜನಪ್ರಿಯತೆ ಲಾಭ ಪಡೆಯಲು ಬಿಜೆಪಿ ತಂತ್ರ: ಕರ್ನಾಟಕದಲ್ಲಿ 20 ರ‍್ಯಾಲಿ ಮಾಡಲಿರುವ ಪ್ರಧಾನಿ

ದೇವೇಗೌಡರ ಕುಟುಂಬದಲ್ಲಿ ಕದನ ವಿಚಾರವಾಗಿ ಮಾತನಾಡಿದ ಅವರು ನಮಗೆ ಅತ್ಯಂತ ನೋವಾಗುವ ವಿಚಾರ. ಎಲ್ಲಿಂದ ಊಹಾಪೋಹಗಳು ಬರುತ್ತವೆ ಎಂದು ಗೊತ್ತಿಲ್ಲ. ಅನಿತಾ ಕುಮಾರಸ್ವಾಮಿಯವರು ಟಿಕೆಟ್ ಕೇಳುತ್ತಿದ್ದಾರೆ ಎಂದು ಗೊಂದಲ ಸೃಷ್ಠಿ ಆಗಿದೆ. ಅವರು ಸಂಘಟನೆ ಮಾಡುತ್ತಿದ್ದಾರೆ. ಅನಿತಾ ಕುಮಾರಸ್ವಾಮಿಯವರಿಗೆ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ. ಇದರ ಬಗ್ಗೆ ಚರ್ಚೆ ಆಗಿಲ್ಲ ಎಂದು ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ, ನಿಖಿಲ್​ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿಯವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕಡೆ ಕಣಕ್ಕಿಳಿದಿದ್ದರು. ಎರಡೂ ಕಡೆ ಗೆಲುವು ಸಾಧಿಸಿದ್ದರು. ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕೆ ಇಳಿಸಿದರು. ಅನಿತಾ ಕುಮಾರಸ್ವಾಮಿ ಜಯಬೇರಿ ಬಾರಿಸಿದರು. ಈಗ ಅನಿತಾ ಕುಮಾರಸ್ವಾಮಿಯವರು ಪುತ್ರ ನಿಖಿಲ್​ ಕುಮಾರಸ್ವಾಮಿಯವರಿಗೆ ಕೇತ್ರ ಬಿಟ್ಟು ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Published On - 1:29 pm, Tue, 4 April 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ