AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ

ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ

Karnataka Assembly Election 2023: ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ: ನಿಖಿಲ್ ಸ್ಪಷ್ಟನೆ
ನಿಖಿಲ್ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on:Apr 04, 2023 | 3:13 PM

Share

ರಾಮನಗರ: ಜೆಡಿಎಸ್ (JDS) ​ಪಕ್ಷದಲ್ಲಿ ಟಿಕೆಟ್​ ವಿಚಾರವಾಗಿ ಒಳಜಗಳ ಶುರುವಾಗಿದೆ. ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ವಿಚಾರವಾಗಿ ಕುಟುಂಬದಲ್ಲೇ ಬಿರುಕು ಬಿಟ್ಟಿದೆ. ಈ ವಿಚಾರವಾಗಿ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸುವುದಾದರೇ ರಾಮನಗರದಿಂದ ನನಗೆ (ಶಾಸಕಿ ಅನಿತಾ ಕುಮಾರಸ್ವಾಮಿ) ನೀಡಿ ಎಂದು ಅನಿತಾ ಕುಮಾರಸ್ವಾಮಿಯವರು (Anita Kumarswamy) ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಈ ವಿಚಾರವಾಗಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು (Nikhil Kumarswmay) ಮಾತನಾಡಿ ಶಾಸಕಿ ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳ್ತಿದ್ದಾರೆ ಎಂಬುದು ಊಹಾಪೋಹ. ಚುನಾವಣಾ ರಾಜಕೀಯದಿಂದ ಅನಿತಾ ಕುಮಾರಸ್ವಾಮಿಯವರು ಹಿಂದೆ ಸರಿದಿದ್ದಾರೆ. ಅನಿತಾ ಕುಮಾರಸ್ವಾಮಿ ಸ್ವರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷ ಹೇಳಿದರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಬೇಕಿರುವುದು ಅನಿವಾರ್ಯ. ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ಮೋದಿ ಜನಪ್ರಿಯತೆ ಲಾಭ ಪಡೆಯಲು ಬಿಜೆಪಿ ತಂತ್ರ: ಕರ್ನಾಟಕದಲ್ಲಿ 20 ರ‍್ಯಾಲಿ ಮಾಡಲಿರುವ ಪ್ರಧಾನಿ

ದೇವೇಗೌಡರ ಕುಟುಂಬದಲ್ಲಿ ಕದನ ವಿಚಾರವಾಗಿ ಮಾತನಾಡಿದ ಅವರು ನಮಗೆ ಅತ್ಯಂತ ನೋವಾಗುವ ವಿಚಾರ. ಎಲ್ಲಿಂದ ಊಹಾಪೋಹಗಳು ಬರುತ್ತವೆ ಎಂದು ಗೊತ್ತಿಲ್ಲ. ಅನಿತಾ ಕುಮಾರಸ್ವಾಮಿಯವರು ಟಿಕೆಟ್ ಕೇಳುತ್ತಿದ್ದಾರೆ ಎಂದು ಗೊಂದಲ ಸೃಷ್ಠಿ ಆಗಿದೆ. ಅವರು ಸಂಘಟನೆ ಮಾಡುತ್ತಿದ್ದಾರೆ. ಅನಿತಾ ಕುಮಾರಸ್ವಾಮಿಯವರಿಗೆ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ. ಇದರ ಬಗ್ಗೆ ಚರ್ಚೆ ಆಗಿಲ್ಲ ಎಂದು ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ, ನಿಖಿಲ್​ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿಯವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕಡೆ ಕಣಕ್ಕಿಳಿದಿದ್ದರು. ಎರಡೂ ಕಡೆ ಗೆಲುವು ಸಾಧಿಸಿದ್ದರು. ರಾಮನಗರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕೆ ಇಳಿಸಿದರು. ಅನಿತಾ ಕುಮಾರಸ್ವಾಮಿ ಜಯಬೇರಿ ಬಾರಿಸಿದರು. ಈಗ ಅನಿತಾ ಕುಮಾರಸ್ವಾಮಿಯವರು ಪುತ್ರ ನಿಖಿಲ್​ ಕುಮಾರಸ್ವಾಮಿಯವರಿಗೆ ಕೇತ್ರ ಬಿಟ್ಟು ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

Published On - 1:29 pm, Tue, 4 April 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು