AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Voter ID Scam: ಚಿಲುಮೆ ಸಂಸ್ಥೆಯಂತೆ ಮತ್ತೊಂದು ಅಕ್ರಮ ಬಯಲು; 25 ಸಾವಿರ ಕೊಟ್ರೆ ಸಾಕು ಮತದಾರರ ದತ್ತಾಂಶ ಸಿಗುತ್ತೆ

ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕಂಪನಿಯೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದ್ಯ ಕಂಪನಿಯ ಹೆಸರನ್ನು ಬಹಿರಂಗ ಪಡೆಸದೆ ಗೌಪತ್ಯೆ ಕಾಪಾಡಲಾಗಿದೆ.

Voter ID Scam: ಚಿಲುಮೆ ಸಂಸ್ಥೆಯಂತೆ ಮತ್ತೊಂದು ಅಕ್ರಮ ಬಯಲು; 25 ಸಾವಿರ ಕೊಟ್ರೆ ಸಾಕು ಮತದಾರರ ದತ್ತಾಂಶ ಸಿಗುತ್ತೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 27, 2023 | 12:12 PM

Share

ಮುಖ್ಯಾಂಶಗಳು

  • ಚಿಲುಮೆ ಸಂಸ್ಥೆಯಂತೆ ಮತ್ತೊಂದು ಸಂಸ್ಥೆಯ ಅಕ್ರಮ ಬಯಲು
  • 25 ಸಾವಿರ ಕೊಟ್ರೆ ಸಾಕು ಮತದಾರರ ದತ್ತಾಂಶ ಮಾರಾಟ
  • 6 ಲಕ್ಷ ದಷ್ಟು ಮತದಾರರ ಮಾಹಿತಿ ಈ ಸಂಸ್ಥೆಯ ಬಳಿ ಇದೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ದಿನದಿಂದ ದಿನಕ್ಕೆ ರಾಜಕೀಯ ಕಣ ರಂಗೇರುತ್ತಿದೆ, ಇದರ ಜೊತೆಗೆ ಅಕ್ರಮಗಳು ಕೂಡ ಹೆಚ್ಚಾಗಿದ್ದು ಚಿಲುಮೆ ಸಂಸ್ಥೆಯ ರೀತಿಯಲ್ಲೇ ಅಕ್ರಮ ಎಸಗುತ್ತಿದ್ದ ಮತ್ತೊಂದು ಕಂಪನಿಯ ಬಣ್ಣ ಬಯಲಾಗಿದೆ. ಮತದಾರರ ಮಾಹಿತಿ ಸಂಗ್ರಹ ಮತ್ತು ಗುರುತಿನ ಚೀಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿಅಕ್ರಮ ನಡೆದಿರುವ ಆರೋಪ ಚಿಲುಮೆ ಸಂಸ್ಥೆ ವಿರುದ್ಧ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅನೇಕ ಅಧಿಕಾರಿಗಳು ಜೈಲು ಸೇರಿದ್ದರು. ಸದ್ಯ ಈಗ ಇದೇ ರೀತಿ ಆರೋಪ ಮತ್ತೊಂದು ಕಂಪನಿಯ ವಿರುದ್ಧ ಕೇಳಿ ಬಂದಿದೆ. ಇಲ್ಲಿ 25 ಸಾವಿರಕ್ಕೆ ಮತದಾರರ ದತ್ತಾಂಶ ಮಾರಾಟ ಮಾಡಲಾಗುತ್ತೆ.

25 ಸಾವಿರ ಕೊಟ್ರೆ ಸಾಕು ಮತದಾರರ ದತ್ತಾಂಶ ಮಾರಾಟ?

ಹೌದು ಹಣ ಪಡೆದು ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕಂಪನಿಯೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದ್ಯ ಕಂಪನಿಯ ಹೆಸರನ್ನು ಬಹಿರಂಗ ಪಡೆಸದೆ ಗೌಪತ್ಯೆ ಕಾಪಾಡಲಾಗಿದೆ. ಚಿಲುಮೆ ಸಂಸ್ಥೆಯ ರೀತಿಯಲ್ಲೇ ಈ ಕಂಪನಿಯು ಸಹ‌ ಕೆಲಸ ಮಾಡುತ್ತಿತ್ತು. ಮತದಾರರ ಸಂಪೂರ್ಣ ವಿವರವನ್ನು ಸಂಸ್ಥೆ ಸಂಗ್ರಹಿಸುತ್ತಿತ್ತು. ಪ್ರತ್ಯೇಕ ಆ್ಯಪ್ ಬಳಸಿ ಮತದಾರರ ಮಾಹಿತಿ, ಹೆಸರು, ವಿಳಾಸ, ಜಾತಿ, ಮತದಾರರು ಕಳೆದ ಬಾರಿ ಯಾವ ಪಕ್ಷಕ್ಕೆ ಬೆಂಬಲಿಸಿದ್ದರು, ಈ ಬಾರಿ ಯಾವ‌ ಪಕ್ಷಕ್ಕೆ ಬೆಂಬಲಿಸಲಿದ್ದಾರೆ ಎಂಬ ಎಲ್ಲಾ ಮಾಹಿತಿಯನ್ನು ಆ್ಯಪ್​ನಲ್ಲಿ ಹಾಕಲಾಗುತ್ತಿತ್ತು. ಕಂಪನಿ ತನ್ನ ವೆಬ್ ಸೈಟ್‌ನಲ್ಲಿ ಮತದಾರರ ಮೊಬೈಲ್ ಸಂಖ್ಯೆ ಹಾಕುತ್ತಿತ್ತು, 25 ಸಾವಿರ ನೀಡಿದರೆ ಲಾಗ್ ಇನ್ ಐಡಿ ನೀಡುತ್ತಿತ್ತು. ಸುಮಾರು 6 ಲಕ್ಷ ದಷ್ಟು ಮತದಾರರ ಮಾಹಿತಿ ಈ ಸಂಸ್ಥೆಯ ಬಳಿ ಇತ್ತು ಎನ್ನುವ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Voter ID Scam: ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ

ಇದು ನಿರ್ದಿಷ್ಟ ಕ್ಷೇತ್ರದ ಮತದಾರರ ಪಟ್ಟಿಯೇ ಅಥವಾ ಬೇರೆ ಯಾವ ಯಾವ ಕ್ಷೇತ್ರದ ಮತದಾರರ ಮಾಹಿತಿ ಈ ಸಂಸ್ಥೆಯ ಬಳಿ ಇದೆ ಎಂಬ ಬಗ್ಗೆ ತನಿಖೆ ಮುಂದುವರೆದಿದೆ. ಮೊದಲಿಗೆ ರಾಜ್ಯ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು ಈ ವೆಬ್ ಸೈಟ್ ತೆಗೆದ ತಕ್ಷಣ ಸ್ವಾಗತ ಎಂಬ ಸಂದೇಶ ಬರುತ್ತಿತ್ತು. 25 ಸಾವಿರ ಜೊತೆಗೆ 500 ಸೇವಾ ಶುಲ್ಕ ನೀಡಿದರೆ ಕ್ಷೇತ್ರದ ಮತದಾರರ ಮಾಹಿತಿ ನೀಡಲಾಗುತ್ತಿತ್ತು. ಮಾಹಿತಿ ಪಡೆದು ಚುನಾವಣೆಯಲ್ಲಿ ಜಯಶಾಲಿಯಾಗಿ ಎಂದು ಹೇಳುತ್ತಿತ್ತು. ಒಂದು ವೇಳೆ ಸೋತರೆ ಹಣ ವಾಪಸ್ ಎಂಬಾ ಪ್ರಣಾಳಿಕೆ ಮಾಡಿಕೊಂಡಿತ್ತು. ಪಕ್ಷೇತರ ಅಭ್ಯರ್ಥಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ