AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್

ಕಾಂಗ್ರೆಸ್​ ಟಿಕೆಟ್​ಗಾಗಿ ಜೆಡಿಎಸ್​ ತೊರೆದಿದ್ದ ವೈಎಸ್​ವಿ ದತ್ತಾ ಅವರಿಗೆ ಟಿಕೆಟ್​ ಕೈತಪ್ಪಿದೆ. ಇದೀಗ ಇದೇ ಪರಿಸ್ಥಿತಿ ಮತ್ತೋರ್ವ ಜೆಡಿಎಸ್​ ಮಾಜಿ ಶಾಸಕರೊಬ್ಬರಿಗೆ ಬಂದಿದೆ, ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದಿದ್ದ ರಾಮಸ್ವಾಮಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್
ಎಟಿ ರಾಮಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 9:48 AM

Share

ಹಾಸನ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಜೆಡಿಎಸ್​(JDS) ತೊರೆದು ಕಮಲ ಮುಡಿದಿದ್ದ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ(AT Ramaswamy) ಹೈಕಮಾಂಡ್​ ಬಿಗ್ ಶಾಕ್ ಕೊಟ್ಟಿದೆ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಟಿಕೆಟ್​​ ಯೋಗ ರಮೇಶ್‌ ಅವರಿಗೆ ನೀಡಲಾಗಿದೆ. ಇದರಿಂದ ಜೆಡಿಎಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಎಟಿ ರಾಮಸ್ವಾಮಿ ಟಿಕೆಟ್​ ಕೈತಪ್ಪಿದ್ದು, ಅಚ್ಚರಿಕೆ ಕಾರಣವಾಗಿದೆ. ಏಕೆಂದರೆ ರಾಮಸ್ವಾಮಿ ಅವರು ಬಿಜೆಪಿ ಟಿಕೆಟ್​ ನಿರೀಕ್ಷೆ ಮೇರೆಗೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ರೆ, ಇದೀಗ ಟಿಕೆಟ್​ ಮಿಸ್ ಆಗಿದ್ದರಿಂದ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್, ದೆಹಲಿಗೆ ಹೋಗುವ ಮುನ್ನ ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್

ಬಿಜೆಪಿ ಸೇರಿದ್ದ ರಾಮಸ್ವಾಮಿಗೆ ನಿರಾಸೆಯಾಗಿದ್ದು, ಮೊದಲ ಪಟ್ಟಿಯಲ್ಲಿ ಅರಕಗೂಡು ಟಿಕೆಟ್​ ಯೋಗಾ ರಮೇಶ್ ಒಲಿದಿದೆ. ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದ್ದ ಯೋಗಾ ರಮೇಶ್ , ಕಳೆದ ಬಾರಿಯೂ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇದೀಗ ಹೈಕಮಾಂಡ್​ ವಲಸೆ ಬಂದ ರಾಮಸ್ವಾಮಿ ಅವರನ್ನು ಬಿಟ್ಟು ಮತ್ತೊಮ್ಮೆ ಯೋಗಾ ರಮೇಶ್​ ಅವಕಾಶ ನೀಡಿದೆ.

ಜೆಡಿಎಸ್ ನಿಂದ ಟಿಕೆಟ್ ಮಿಸ್ ಆದ ವೇಳೆ ಈ ಭಾರೀ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡ್ತೇನೆ ರಾಮಸ್ವಾಮಿ ಶಪಥ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಈ ಭಾರಿ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುತ್ತೆ ಎಂದೇ ಹೇಳಲಾಗಿತ್ತು. ಬಿಜೆಪಿ ಸೇರಿದ ಬಳಿಕ ನಾನು ಯಾವುದೇ ಷರತ್ತು‌ ಇಲ್ಲದೇ ಸೇರಿದ್ದೇನೆ ಎಂದಿದ್ದರು.

ಇನ್ನು ಇದೇ ಪರಿಸ್ಥಿತಿ ವೈಎಸ್​ವಿ ದತ್ತಾ ಅವರಿಗೆ ಬಂದಿದೆ. ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ದತ್ತಾ ಅವರಿಗೂ ಸಹ ಟಿಕೆಟ್​​ ಕೈತಪ್ಪಿದೆ. ಜೆಡಿಎಸ್​ನಿಂದ ಬಂದಿದ್ದ ದತ್ತಾ ಬದಲಿಗೆ ಆನಂದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್​ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈಗ ಬಿಜೆಪಿ ಟಿಕೆಟ್ ಮಿಸ್ ಆಗಿದ್ದರಿಂದ ಎಟಿ ರಾಮಸ್ವಾಮಿ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಲೈವ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:22 am, Wed, 12 April 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ