AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್

ಕಾಂಗ್ರೆಸ್​ ಟಿಕೆಟ್​ಗಾಗಿ ಜೆಡಿಎಸ್​ ತೊರೆದಿದ್ದ ವೈಎಸ್​ವಿ ದತ್ತಾ ಅವರಿಗೆ ಟಿಕೆಟ್​ ಕೈತಪ್ಪಿದೆ. ಇದೀಗ ಇದೇ ಪರಿಸ್ಥಿತಿ ಮತ್ತೋರ್ವ ಜೆಡಿಎಸ್​ ಮಾಜಿ ಶಾಸಕರೊಬ್ಬರಿಗೆ ಬಂದಿದೆ, ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದಿದ್ದ ರಾಮಸ್ವಾಮಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್
ಎಟಿ ರಾಮಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 9:48 AM

Share

ಹಾಸನ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಜೆಡಿಎಸ್​(JDS) ತೊರೆದು ಕಮಲ ಮುಡಿದಿದ್ದ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ(AT Ramaswamy) ಹೈಕಮಾಂಡ್​ ಬಿಗ್ ಶಾಕ್ ಕೊಟ್ಟಿದೆ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಟಿಕೆಟ್​​ ಯೋಗ ರಮೇಶ್‌ ಅವರಿಗೆ ನೀಡಲಾಗಿದೆ. ಇದರಿಂದ ಜೆಡಿಎಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಎಟಿ ರಾಮಸ್ವಾಮಿ ಟಿಕೆಟ್​ ಕೈತಪ್ಪಿದ್ದು, ಅಚ್ಚರಿಕೆ ಕಾರಣವಾಗಿದೆ. ಏಕೆಂದರೆ ರಾಮಸ್ವಾಮಿ ಅವರು ಬಿಜೆಪಿ ಟಿಕೆಟ್​ ನಿರೀಕ್ಷೆ ಮೇರೆಗೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ರೆ, ಇದೀಗ ಟಿಕೆಟ್​ ಮಿಸ್ ಆಗಿದ್ದರಿಂದ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್, ದೆಹಲಿಗೆ ಹೋಗುವ ಮುನ್ನ ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್

ಬಿಜೆಪಿ ಸೇರಿದ್ದ ರಾಮಸ್ವಾಮಿಗೆ ನಿರಾಸೆಯಾಗಿದ್ದು, ಮೊದಲ ಪಟ್ಟಿಯಲ್ಲಿ ಅರಕಗೂಡು ಟಿಕೆಟ್​ ಯೋಗಾ ರಮೇಶ್ ಒಲಿದಿದೆ. ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದ್ದ ಯೋಗಾ ರಮೇಶ್ , ಕಳೆದ ಬಾರಿಯೂ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇದೀಗ ಹೈಕಮಾಂಡ್​ ವಲಸೆ ಬಂದ ರಾಮಸ್ವಾಮಿ ಅವರನ್ನು ಬಿಟ್ಟು ಮತ್ತೊಮ್ಮೆ ಯೋಗಾ ರಮೇಶ್​ ಅವಕಾಶ ನೀಡಿದೆ.

ಜೆಡಿಎಸ್ ನಿಂದ ಟಿಕೆಟ್ ಮಿಸ್ ಆದ ವೇಳೆ ಈ ಭಾರೀ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡ್ತೇನೆ ರಾಮಸ್ವಾಮಿ ಶಪಥ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಈ ಭಾರಿ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುತ್ತೆ ಎಂದೇ ಹೇಳಲಾಗಿತ್ತು. ಬಿಜೆಪಿ ಸೇರಿದ ಬಳಿಕ ನಾನು ಯಾವುದೇ ಷರತ್ತು‌ ಇಲ್ಲದೇ ಸೇರಿದ್ದೇನೆ ಎಂದಿದ್ದರು.

ಇನ್ನು ಇದೇ ಪರಿಸ್ಥಿತಿ ವೈಎಸ್​ವಿ ದತ್ತಾ ಅವರಿಗೆ ಬಂದಿದೆ. ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ದತ್ತಾ ಅವರಿಗೂ ಸಹ ಟಿಕೆಟ್​​ ಕೈತಪ್ಪಿದೆ. ಜೆಡಿಎಸ್​ನಿಂದ ಬಂದಿದ್ದ ದತ್ತಾ ಬದಲಿಗೆ ಆನಂದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್​ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈಗ ಬಿಜೆಪಿ ಟಿಕೆಟ್ ಮಿಸ್ ಆಗಿದ್ದರಿಂದ ಎಟಿ ರಾಮಸ್ವಾಮಿ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಲೈವ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:22 am, Wed, 12 April 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ