AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್

ಕಾಂಗ್ರೆಸ್​ ಟಿಕೆಟ್​ಗಾಗಿ ಜೆಡಿಎಸ್​ ತೊರೆದಿದ್ದ ವೈಎಸ್​ವಿ ದತ್ತಾ ಅವರಿಗೆ ಟಿಕೆಟ್​ ಕೈತಪ್ಪಿದೆ. ಇದೀಗ ಇದೇ ಪರಿಸ್ಥಿತಿ ಮತ್ತೋರ್ವ ಜೆಡಿಎಸ್​ ಮಾಜಿ ಶಾಸಕರೊಬ್ಬರಿಗೆ ಬಂದಿದೆ, ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದಿದ್ದ ರಾಮಸ್ವಾಮಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ.

ಟಿಕೆಟ್​ ನಿರೀಕ್ಷೆಯೊಂದಿಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಗ್ ಶಾಕ್
ಎಟಿ ರಾಮಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 9:48 AM

Share

ಮುಖ್ಯಾಂಶಗಳು

  • ಜೆಡಿಎಸ್ ತೊರೆದು ಬಿಜೆಪಿ ಸೇರಿಸಿದ್ದ ಎ.ಟಿ.ರಾಮಸ್ವಾಮಿಗೆ ಟಿಕೆಟ್ ಮಿಸ್
  • ಅರಕಲಗೂಡು ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದ ಎ.ಟಿ.ರಾಮಸ್ವಾಮಿ
  • ಅರಕಲಗೂಡು ಕ್ಷೇತ್ರಕ್ಕೆ ಯೋಗಾರಮೇಶ್ ಗೆ ಟಿಕೆಟ್ ನೀಡಿದ ಬಿಜೆಪಿ

ಹಾಸನ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಜೆಡಿಎಸ್​(JDS) ತೊರೆದು ಕಮಲ ಮುಡಿದಿದ್ದ ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ(AT Ramaswamy) ಹೈಕಮಾಂಡ್​ ಬಿಗ್ ಶಾಕ್ ಕೊಟ್ಟಿದೆ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಟಿಕೆಟ್​​ ಯೋಗ ರಮೇಶ್‌ ಅವರಿಗೆ ನೀಡಲಾಗಿದೆ. ಇದರಿಂದ ಜೆಡಿಎಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಎಟಿ ರಾಮಸ್ವಾಮಿ ಟಿಕೆಟ್​ ಕೈತಪ್ಪಿದ್ದು, ಅಚ್ಚರಿಕೆ ಕಾರಣವಾಗಿದೆ. ಏಕೆಂದರೆ ರಾಮಸ್ವಾಮಿ ಅವರು ಬಿಜೆಪಿ ಟಿಕೆಟ್​ ನಿರೀಕ್ಷೆ ಮೇರೆಗೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ರೆ, ಇದೀಗ ಟಿಕೆಟ್​ ಮಿಸ್ ಆಗಿದ್ದರಿಂದ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್, ದೆಹಲಿಗೆ ಹೋಗುವ ಮುನ್ನ ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್

ಬಿಜೆಪಿ ಸೇರಿದ್ದ ರಾಮಸ್ವಾಮಿಗೆ ನಿರಾಸೆಯಾಗಿದ್ದು, ಮೊದಲ ಪಟ್ಟಿಯಲ್ಲಿ ಅರಕಗೂಡು ಟಿಕೆಟ್​ ಯೋಗಾ ರಮೇಶ್ ಒಲಿದಿದೆ. ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದ್ದ ಯೋಗಾ ರಮೇಶ್ , ಕಳೆದ ಬಾರಿಯೂ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇದೀಗ ಹೈಕಮಾಂಡ್​ ವಲಸೆ ಬಂದ ರಾಮಸ್ವಾಮಿ ಅವರನ್ನು ಬಿಟ್ಟು ಮತ್ತೊಮ್ಮೆ ಯೋಗಾ ರಮೇಶ್​ ಅವಕಾಶ ನೀಡಿದೆ.

ಜೆಡಿಎಸ್ ನಿಂದ ಟಿಕೆಟ್ ಮಿಸ್ ಆದ ವೇಳೆ ಈ ಭಾರೀ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡ್ತೇನೆ ರಾಮಸ್ವಾಮಿ ಶಪಥ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಈ ಭಾರಿ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುತ್ತೆ ಎಂದೇ ಹೇಳಲಾಗಿತ್ತು. ಬಿಜೆಪಿ ಸೇರಿದ ಬಳಿಕ ನಾನು ಯಾವುದೇ ಷರತ್ತು‌ ಇಲ್ಲದೇ ಸೇರಿದ್ದೇನೆ ಎಂದಿದ್ದರು.

ಇನ್ನು ಇದೇ ಪರಿಸ್ಥಿತಿ ವೈಎಸ್​ವಿ ದತ್ತಾ ಅವರಿಗೆ ಬಂದಿದೆ. ಟಿಕೆಟ್​ ನಿರೀಕ್ಷೆ ಇಟ್ಟುಕೊಂಡು ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ದತ್ತಾ ಅವರಿಗೂ ಸಹ ಟಿಕೆಟ್​​ ಕೈತಪ್ಪಿದೆ. ಜೆಡಿಎಸ್​ನಿಂದ ಬಂದಿದ್ದ ದತ್ತಾ ಬದಲಿಗೆ ಆನಂದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್​ ಮಣೆ ಹಾಕಿದೆ. ಇದರಿಂದ ಅಸಮಾಧಾನಗೊಂಡಿರುವ ದತ್ತಾ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈಗ ಬಿಜೆಪಿ ಟಿಕೆಟ್ ಮಿಸ್ ಆಗಿದ್ದರಿಂದ ಎಟಿ ರಾಮಸ್ವಾಮಿ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಲೈವ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:22 am, Wed, 12 April 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ