AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ ಬಹುತೇಕ ನಿಶ್ಚಿತ, ಹಾಲಿ ಶಾಸಕ ಕಾಂಗ್ರೆಸ್​ ಸೇರ್ಪಡೆ ಸುಳಿವು ಕೊಟ್ಟ ಧ್ರುವನಾರಾಯಣ

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸುಳಿವು ಕೊಟ್ಟಿದ್ದಾರೆ.

ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ ಬಹುತೇಕ ನಿಶ್ಚಿತ, ಹಾಲಿ ಶಾಸಕ ಕಾಂಗ್ರೆಸ್​ ಸೇರ್ಪಡೆ ಸುಳಿವು ಕೊಟ್ಟ ಧ್ರುವನಾರಾಯಣ
JDS
TV9 Web
| Edited By: |

Updated on: Jan 12, 2023 | 4:20 PM

Share

ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹೊತ್ತಲ್ಲಿ ರಾಜ್ಯದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಈಗಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ(Shivalinge Gowda) ಕಾಂಗ್ರೆಸ್​ ಸೇರುವುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ನಿರೀಕ್ಷಿಸಿದಂತೆ ಹಾಸನ ಜಿಲ್ಲೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ (Congress)​ ಸೇರ್ಪಡೆ ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸುಳಿವು ಕೊಟ್ಟಿದ್ದಾರೆ.

ಇದನ್ನೂ ಓದಿ: ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್

ಚಾಮರಾಜನಗರದಲ್ಲಿ ಇಂದು(ಜನವರಿ 12) ಮಾಧ್ಯಮಗಳ ಜೊತೆ ಮಾತನಾಡಿದ ಧ್ರುವನಾರಾಯಣ, ಕೆ.ಎಂ.ಶಿವಲಿಂಗೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಜೆಡಿಎಸ್ ಶಾಸಕ ಶಿವಲಿಂಗೇಗೌಡ ಜತೆ ಈಗಾಗಲೇ ಚರ್ಚೆ ನಡೆದಿದಿದ್ದು, ಅವರು ಕೂಡ ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಇತ್ತೀಚಿನ ಯಾವುದೇ ಜೆಡಿಎಸ್ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿವಲಿಂಗೇಗೌಡರು ಜೆಡಿಎಸ್​ ಕಾರ್ಯಚಟುವಟಿಕೆಗಳಿಂದ ದೂರು ಉಳಿದುಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಜನಾಭಿಪ್ರಾಯ ಸಂಗ್ರಹಿಸಲು ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದ ಚಿಹ್ನೆ, ಧ್ವಜ ಬಳಸದೇ ಅರಸೀಕೆರೆಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಮಾಡಿ ಯಶಸ್ವಿಯಾಗಿದ್ದಾರೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಶಿವಲಿಂಗೇಗೌಡರು ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ ಹಲವು ಬಾರಿ ಮಾತುಕತೆ ನಡೆಸಿದ್ದು, ಕೊನೆಗೂ ತೆನೆ ಇಳಿಸಿ ಕೈ ಹಿಡಿಯಲು ತೀರ್ಮಾನಿಸಿದ್ದಾರೆ. ಇದಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಹೇಳಿಕೆಯೇ ಇದಕ್ಕೆ ಪುಷ್ಠಿ ನೀಡಿದೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯವಾಗಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಏನೆಲ್ಲ ಮಾಡಬೇಕೋ ಅವೆಲ್ಲ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಜೆಡಿಎಸ್‌ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್‌ನ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಸನ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರಿಗೆ ಗಾಳ ಹಾಕಿದ್ದು, ಅದು ಇದೀಗ ಬಹುತೇಕ ಯಶಸ್ವಿಯಾಗಿದೆ.

ಇನ್ನು 2018ರ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಕಳೆದುಕೊಂಡಿರುವ ಜೆಡಿಎಸ್‌, ಈ ಬಾರಿ ಮರಳಿ ಪಡೆಯುವ ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಶಾಸಕ ಪ್ರೀತಂ ಜೆ. ಗೌಡ ಪಂಥಾಹ್ವಾನ ನೀಡಿದ್ದಾರೆ. ಒಟ್ಟಾರೆ 2023ರ ಚುನಾವಣೆಗೆ ಜೆಡಿಎಸ್‌ ಭದ್ರಕೋಟೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡು ಪಕ್ಷವನ್ನು ಎದುರಿಸುವ ಸವಾಲು ಎದುರಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು