AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arkalgud Election 2023 Winner: ಅರಕಲಗೂಡು ಕ್ಷೇತ್ರದಲ್ಲಿ ಎ ಮಂಜು ಗೆಲುವು; ಮೂರು ಪಕ್ಷಗಳಿಂದ ಗೆದ್ದ ಸಾಧನೆ

A Manju: ಅರಕಲಗೂಡು ಕ್ಷೇತ್ರದಲ್ಲಿ ಎದುರಾದ ಚತುಷ್ಕೋನ ಸ್ಪರ್ಧೆಯಲ್ಲಿ ಜೆಡಿಎಸ್​ನ ಎ ಮಂಜು ಸುಲಭವಾಗಿ ಗೆದ್ದಿದ್ದಾರೆ. ಕಾಂಗ್ರೆಸ್​ನಿಂದ ಬಂಡಾಯ ಎದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಕೃಷ್ಣೇಗೌಡರು ಎರಡನೇ ಸ್ಥಾನ ಪಡೆದಿದ್ದಾರೆ.

Arkalgud Election 2023 Winner: ಅರಕಲಗೂಡು ಕ್ಷೇತ್ರದಲ್ಲಿ ಎ ಮಂಜು ಗೆಲುವು; ಮೂರು ಪಕ್ಷಗಳಿಂದ ಗೆದ್ದ ಸಾಧನೆ
ಎ ಮಂಜು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 6:44 PM

Share

Arkalgud Assembly Election Results 2023: ಬಿಜೆಪಿಯಿಂದ ಜೆಡಿಎಸ್​ಗೆ ಪಕ್ಷಾಂತರವಾಗಿದ್ದ ಎ ಮಂಜು ಅರಕಲಗೂಡು ಕ್ಷೇತ್ರವನ್ನು ಮರಳಿ ಪಡೆಯುವಲ್ಲಿ ಸಫಲರಾಗಿದ್ದಾರೆ. ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಚತುಷ್ಕೋನ ಸ್ಪರ್ಧೆ ಕಂಡ ಈ ಕ್ಷೇತ್ರದಲ್ಲಿ ವಾಲೆ ಮಂಜು ನಿರೀಕ್ಷೆಗಿಂತ ತುಸು ಸುಲಭವಾಗಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಇಲ್ಲಿ 3 ಮತ್ತು 4ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಕಾಂಗ್ರೆಸ್​ನಲ್ಲಿ ಟಿಕೆಟ್ ಸಿಗದೇ ಬಂಡಾಯ ಎದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಎಂ.ಟಿ. ಕೃಷ್ಣೇಗೌಡ ಎರಡನೇ ಸ್ಥಾನ ಪಡೆದಿದ್ದಾರೆ.

ಅರಕಲಗೂಡು ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ ವಿವರ

  • ಜೆಡಿಎಸ್: ಎ ಮಂಜು (74,643 ಮತಗಳು)
  • ಪಕ್ಷೇತರ: ಎಂ.ಟಿ. ಕೃಷ್ಣೇಗೌಡ (55,038 ಮತಗಳು)
  • ಎಚ್.ಪಿ. ಶ್ರೀಧರಗೌಡ (35,947 ಮತಗಳು)
  • ಎಚ್. ಯೋಗಾರಮೇಶ (19,575 ಮತಗಳು)

ಇದನ್ನೂ ಓದಿBelur Election 2023 Winner: ಬೇಲೂರಿನಲ್ಲಿ ತ್ರಿಕೋನ ಯುದ್ಧದಲ್ಲಿ ಗೆದ್ದುಬೀಗಿದ ಬಿಜೆಪಿಯ ಹುಲ್ಲಳ್ಳಿ ಸುರೇಶ್

ಜೆಡಿಎಸ್​ನಿಂದ ವಲಸೆ ಬಂದಿದ್ದ ಶ್ರೀಧರ್ ಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಎಂಟಿ ಕೃಷ್ಣೇಗೌಡರು ಬಂಡಾಯ ಎದ್ದಿದ್ದು ಕಾಂಗ್ರೆಸ್ ಸೋಲಿಗೆ ಕಾರಣವಾಗಿರಬಹುದು. ಎ ಮಂಜು ಬಿಜೆಪಿ ಸೇರಿದಾಗ ಜೆಡಿಎಸ್ ಪಾಳಯ ಸೇರಿದ್ದ ಯೋಗಾರಮೇಶ್ ಈ ಬಾರಿ ಬಿಜೆಪಿಗೆ ಮರಳಿದ್ದರು. ಆದರೆ, ಅವರಿಂದ ಪೈಪೋಟಿ ನಿರೀಕ್ಷೆ ಇರಲಿಲ್ಲ.

ದೇವೇಗೌಡರ ಕುಟುಂಬದ ವಿರುದ್ಧ ರಾಜಕಾರಣ ಮಾಡಿಕೊಂಡೇ ಬಂದಿದ್ದ ವಾಲೆ ಮಂಜು ಎಂತಲೇ ಹೆಸರುವಾಸಿಯಾಗಿರುವ ಎ ಮಂಜು ಇದೀಗ ಜೆಡಿಎಸ್​ನಿಂದ ಸ್ಪರ್ಧಿಸಿರುವುದೇ ಕೌತುಕ ಎನಿಸಿತ್ತು. ಈ ಕ್ಷೇತ್ರದಲ್ಲಿ ಅವರು 1994ರಿಂದಲೂ ಸತತವಾಗಿ ಸ್ಪರ್ಧಿಸುತ್ತಾ ಬಂದಿದ್ದಾರೆ. 1999ರಲ್ಲಿ ಬಿಜೆಪಿ ಟಿಕೆಟ್​ನಲ್ಲಿ ಗೆಲುವು ಕೂಡ ಪಡೆದಿದ್ದರು. 2008 ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್​ನಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್​ನ ಎಟಿ ರಾಮಸ್ವಾಮಿ ಎದುರು ಎ ಮಂಜು ಸೋಲನುಭವಿಸಿದ್ದರು. ಈಗ ಜೆಡಿಎಸ್ ಟಿಕೆಟ್​ನಲ್ಲಿ ಗೆಲುವು ಪಡೆಯುವುದರೊಂದಿಗೆ ಎ ಮಂಜು ಒಂದು ಕ್ಷೇತ್ರದಲ್ಲಿ 3 ಪಕ್ಷಗಳಿಂದ ಜಯ ಪಡೆದ ಸಾಧನೆ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?