AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arsikere Election Results 2023: ಅರಸೀಕೆರೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​ನ ಶಿವಲಿಂಗೇಗೌಡಗೆ ಗೆಲುವು; ಜೆಡಿಎಸ್​ನ ಎನ್ ಆರ್ ಸಂತೋಷ್ ಹಿನ್ನಡೆ

Arsikere Assembly Election Result 2023 Live Counting Updates: ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಯಡಿಯೂರಪ್ಪ ಮಾಜಿ ಕಾರ್ಯದರ್ಶಿ ಎನ್ ಆರ್ ಸಂತೊಷ್, ಕಾಂಗ್ರೆಸ್​ನಿಂದ ಮಾಜಿ ಜೆಡಿಎಸ್ ನಾಯಕ ಶಿವಲಿಂಗೇಗೌಡ ಸ್ಪರ್ಧಿಸಿದ್ದು ಅವರಿಬ್ಬರ ಮಧ್ಯೆ ನೇರ ಪೈಪೋಟಿ ಇದೆ. ಈ ಕ್ಷೇತ್ರದ ಮತ ಎಣಿಕೆಯ ವಿವರ ಇಲ್ಲಿದೆ.

Arsikere Election Results 2023: ಅರಸೀಕೆರೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​ನ ಶಿವಲಿಂಗೇಗೌಡಗೆ ಗೆಲುವು; ಜೆಡಿಎಸ್​ನ ಎನ್ ಆರ್ ಸಂತೋಷ್ ಹಿನ್ನಡೆ
ಅರಸೀಕೆರೆ ವಿಧಾನಸಭಾ ಕ್ಷೇತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 13, 2023 | 12:42 PM

Share

Arsikere Assembly Election Result 2023: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ (Karntaka Assembly Elections 2023 Results) ಇಂದು ಪ್ರಕಟವಾಗುತ್ತಿದ್ದು, ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಅರಸೀಕೆರೆಯೂ (Arsikere Constituency) ಒಂದು. ಇಂದು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಶಿವಲಿಂಗೇಗೌಡರು ಮುನ್ನಡೆ ಪಡೆದಿದ್ದಾರೆ. ಯಡಿಯೂರಪ್ಪರ ಮಾಜಿ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕೆಎಂ ಶಿವಲಿಂಗೇಗೌಡರನ್ನು ಸೋಲಿಸುವ ಪ್ರಯತ್ನ ವಿಫಲವಾಗುವಂತಿದೆ. ಜೆಡಿಎಸ್​ನಲ್ಲಿದ್ದು ಸತತ 3 ಬಾರಿ ಗೆದ್ದಿದ್ದ ಕೆಎಂ ಶಿವಲಿಂಗೇಗೌಡರು ಈಗ ಕಾಂಗ್ರೆಸ್ ಟಿಕೆಟ್​ನಲ್ಲಿ ಸ್ಪರ್ಧಿಸಿದ್ದಾರೆ. ಮುನ್ನಡೆಯಲ್ಲಿರುವ ಅವರು ಗೆದ್ದರೆ ಸತತ 4ನೇ ಬಾರಿ ಶಾಸಕರಾದಂತಾಗುತ್ತದೆ.

ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಜಿ.ವಿ.ಟಿ. ಬಸವರಾಜು ಸ್ಪರ್ಧಿಸುತ್ತಿದ್ದಾರಾದರೂ ಫೈಟ್ ಇರುವುದು ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆಯೇ.

ಅರಸೀಕೆರೆ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಮತದಾರರ ಪ್ರಾಬಲ್ಯ ಹೆಚ್ಚಿದೆ. ಇಲ್ಲಿ ಬೇರೆ ಸಮುದಾಯದವರು ಗೆಲ್ಲಲು ಸಾಧ್ಯವೇ ಇಲ್ಲ ಎನ್ನುವಂಥ ಕಾಲ ಇತ್ತು. 1994ರಲ್ಲಿ ವೀರಶೈವ ಲಿಂಗಾಯತ ಸಮುದಾಯದ ಹಾರನಹಳ್ಳಿ ರಾಮಸ್ವಾಮಿ ಅವರನ್ನು ಜೆಡಿಎಸ್​ನ ಜಿಎಸ್ ಪರಮೇಶ್ವರಪ್ಪ ಸೋಲಿಸಿ ಅಚ್ಚರಿ ಮೂಡಿಸಿದ್ದರು. ಒಕ್ಕಲಿಗ ಸಮುದಾಯದ ಕೆಎಂ ಶಿವಲಿಂಗೇಗೌಡರು 2008ರಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿಯೂ ಶಿವಲಿಂಗೇಗೌಡರು ಗೆಲುವಿನ ದಡ ತಲುಪುತ್ತಾರಾ ನೋಡಬೇಕು.

ಎನ್ ಆರ್ ಸಂತೋಷ್ ಅವರು ಯಡಿಯೂರಪ್ಪರ ಮಾಜಿ ರಾಜಕೀಯ ಕಾರ್ಯದರ್ಶಿ ಆಗಿದ್ದಷ್ಟೇ ಅಲ್ಲ, ಅವರ ಸಂಬಂಧಿಯೂ ಹೌದು. ಲಿಂಗಾಯತ ಸಮುದಾಯಕ್ಕೆ ಸೇರಿದ ಸಂತೋಷ್ ಅವರಿಗೆ ಕ್ಷೇತ್ರದ ವೀರಶೈವ ಲಿಂಗಾಯತ ಮತದಾರರು ಕೈಹಿಡಿದು ಗೆಲ್ಲಿಸುತ್ತಾರಾ? ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್​ಗೆ ಆಸೆಪಟ್ಟಿದ್ದ ಎನ್ ಆರ್ ಸಂತೋಷ್​ಗೆ ಟಿಕೆಟ್ ಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಲಿಲ್ಲ. ಈ ಕಾರಣಕ್ಕೆ ಅತೃಪ್ತಿಗೊಂಡಿದ್ದ ಸಂತೋಷ್​ಗೆ ಜೆಡಿಎಸ್ ಅವಕಾಶ ನೀಡಿದೆ. ಜೆಡಿಎಸ್​ಗೆ ಈ ಬಾರಿ ಗೆದ್ದರೆ ಸತತ 4ನೇ ಗೆಲುವಾಗುತ್ತದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

 

Published On - 3:28 am, Sat, 13 May 23

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್