AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನು ಗ್ಯಾರಂಟಿ ಕೊಡಬೇಕೆಂಬುದು ರಾಹುಲ್​ಗೇ ಗೊತ್ತಿಲ್ಲ; ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದು ಈ ಕಾರಣಕ್ಕೆ ನೋಡಿ

ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜವಳಿ ಪಾರ್ಕ್​ಗಾಗಿ 5,000 ಕೋಟಿ ರೂ. ಹೂಡಿಕೆ ಮಾಡುವ ಭರವಸೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಅವರನ್ನು ಲೇವಡಿ ಮಾಡಿದ್ದಾರೆ.

ಏನು ಗ್ಯಾರಂಟಿ ಕೊಡಬೇಕೆಂಬುದು ರಾಹುಲ್​ಗೇ ಗೊತ್ತಿಲ್ಲ; ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದು ಈ ಕಾರಣಕ್ಕೆ ನೋಡಿ
ಗ್ಯಾರಂಟಿ ಬಗ್ಗೆ ಸುರ್ಜೇವಾಲ ಬಳಿ ಮಾಹಿತಿ ಕೇಳುತ್ತಿರುವ ರಾಹುಲ್ ಗಾಂಧಿImage Credit source: Twitter
Ganapathi Sharma
|

Updated on: Apr 29, 2023 | 7:15 PM

Share

ಬೆಂಗಳೂರು: ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುವ ವೇಳೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಜವಳಿ ಪಾರ್ಕ್​ಗಾಗಿ 5,000 ಕೋಟಿ ರೂ. ಹೂಡಿಕೆ ಮಾಡುವ ಭರವಸೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಅವರನ್ನು ಲೇವಡಿ ಮಾಡಿದ್ದಾರೆ. ಭರವಸೆ ನೀಡುವುದಕ್ಕೂ ಮೊದಲು, ‘ಎಷ್ಟು ಮೊತ್ತದ ಜವಳಿ ಪಾರ್ಕ್’​ ಎಂದು ರಾಹುಲ್ ಗಾಂಧಿ ಅವರು ರಣದೀಪ್ ಸುರ್ಜೇವಾಲ ಅವರನ್ನು ಕೇಳುತ್ತಿರುವ ವಿಡಿಯೋ ಟ್ವೀಟ್ ಮಾಡಿರುವ ಬಿಜೆಪಿ ನಾಯಕರು, ಏನು ಗ್ಯಾರಂಟಿ ನೀಡಬೇಕೆಂಬುದೇ ಇವರಿಗೆ ಗೊತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳೆಲ್ಲ ಸುಳ್ಳು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಏನು ಗ್ಯಾರಂಟಿ ನೀಡುತ್ತಿದ್ದೇವೆ, ಎಷ್ಟು ನೀಡುತ್ತಿದ್ದೇವೆ ಎಂಬುದು ಇವರಿಗೇ ತಿಳಿದಿಲ್ಲ. ಇದು ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಜನರಿಗೆ ನೀಡುವ ಗ್ಯಾರಂಟಿಯ ಅವಸ್ಥೆ. ರಾಜಸ್ಥಾನ, ಛತ್ತೀಸ್​ಗಡ ರಾಜ್ಯಗಳಲ್ಲಿ ಅವರ ಗ್ಯಾರಂಟಿಗಳೆಲ್ಲ ಈಡೇರಿಲ್ಲ. ಕರ್ನಾಟಕದ ಜನ ಈ ಗ್ಯಾರಂಟಿಗಳನ್ನೆಲ್ಲ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ತನಗೇ ಗೊತ್ತಿಲ್ಲದ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಲು ರಾಹುಲ್ ಗಾಂಧಿ ಮುಂದಾಗುತ್ತಿದ್ದಾರೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

ಗ್ಯಾರಂಟಿ ಬಗ್ಗೆ ಘೋಷಣೆ ಮಾಡುವ ಮುನ್ನ ರಾಹುಲ್ ಗಾಂಧಿ ಅವರು ಸುರ್ಜೇವಾಲ ಜತೆ, ಮೊತ್ತ 2000 ರೂಪಾಯಿಯೇ ಅಥವಾ 5000 ರೂಪಾಯಿಯೇ ಎಂದು ಪರಿಶೀಲನೆ ನಡೆಸುವುದು ವಿಡಿಯೋದಲ್ಲಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಐದು ಗ್ಯಾರಂಟಿಗಳನ್ನು ಈವರೆಗೆ ಘೋಷಿಸಿದೆ. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ, ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣದ ಭರವಸೆಗಳನ್ನು ನೀಡಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್