AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hirekeruru Election 2023 Winner:  ಕಾಂಗ್ರೆಸ್​ನ ಯುಬಿ ಬಣಕರ್​ಗೆ​ ಭರ್ಜರಿ ಗೆಲುವು, ಸೋಲು ಕಂಡ ಬಿಸಿ ಪಾಟೀಲ್​

U.B.Banakar: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಹೀರೆಕೆರೂರು ವಿಧಾನಸಭಾ ಕ್ಷೇತ್ರದ ( Hirekerur Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಯುಬಿ ಬಣಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 

Hirekeruru Election 2023 Winner:  ಕಾಂಗ್ರೆಸ್​ನ ಯುಬಿ ಬಣಕರ್​ಗೆ​ ಭರ್ಜರಿ ಗೆಲುವು, ಸೋಲು ಕಂಡ ಬಿಸಿ ಪಾಟೀಲ್​
ಯು ಬಿ ಬಣಕರ್​
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 2:10 PM

Share

Hirekeruru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಹೀರೆಕೆರೂರು ವಿಧಾನಸಭಾ ಕ್ಷೇತ್ರದ ( Hirekerur Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಯುಬಿ ಬಣಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ​ ಕೇವಲ 555 ಮತಗಳಿಂದ ಸೋತಿದ್ದರು. ಜೊತೆಗೆ ಕಳೆದ ಬಾರಿ ಬಿಜೆಪಿಯಲ್ಲಿದ್ದ ಇವರು  ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದರು. ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇಬೇಕೆಂದು ಹರಸಾಹಸ ಮಾಡಿದ್ದ ಇವರು ಇದೀಗ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್​ ವಿರುದ್ದ ಗೆಲುವಿನ ನಗೆ ಬಿರಿದ್ದಾರೆ.

ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಸಿ ಪಾಟೀಲ್, ಹೀನಾಯ ಸೋಲು ಕಂಡಿದ್ದಾರೆ.  ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಇವರು ಬಿಜೆಪಿಗೆ ಸೇರ್ಪಡೆಯಾಗಿ, ಇಡೀ ಸರ್ಕಾರವನ್ನ ಉರುಳಿಸಿದ್ದವರಲ್ಲಿ ಇವರು ಕೂಡ ಒಬ್ಬರು. ಬಳಿಕ  ಉಪ ಚುನಾವಣೆಯಲ್ಲಿ ಸ್ಫರ್ಧಿಸಿ 85,562 ಮತಗಳನ್ನ ಪಡೆದು, 29,067 ಮತಗಳ ಅಂತರದಲ್ಲಿ ಗೆದ್ದು, ಹಾಲಿ ಕೃಷಿ ಸಚಿವರಾಗಿದ್ದರು. ಈ ಬಾರಿ ಕೂಡ ಗೆಲ್ಲಲೇಬೇಕೆಂದು ನಟಿಯಾದ ಶೃತಿಯವರನ್ನ ಕರೆಯಿಸಿ ಭರ್ಜರಿ ಪ್ರಚಾರ ನಡೆಸಿದ್ದರು.  ಆದರೆ ಸೋಲುಂಡಿದ್ದಾರೆ. ಇನ್ನು ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಸ್ಪರ್ಧೆ ಮಾಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿತ್ತು. ಇಡೀ ಜಿಲ್ಲೆಯಲ್ಲಿ ಹಿರೇಕೆರೂರು ಕ್ಷೇತ್ರ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿ ಪರಿಣಮಿಸಿತ್ತು  ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್​ ನೇರಾನೇರ ಹಣಾಹಣಿ ಎದುರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್