AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aurad Election Results: ಔರಾದ್ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರಭು ಚೌಹಾಣ್​ಗೆ ಗೆಲುವು

Aurad Assembly Election Result 2023 Live Counting Updates: ಔರಾದ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯು ಹಾಲಿ ಶಾಸಕ, ಸಚಿವ ಪ್ರಭು ಚೌಹಾಣ್ ಅವರನ್ನೇ ಕಣಕ್ಕಿಳಿಸಿದ್ದು, ಅವರು ಗೆಲುವಿನ ನಗೆ ಬೀರಿದ್ದಾರೆ.

Aurad Election Results: ಔರಾದ್ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಪ್ರಭು ಚೌಹಾಣ್​ಗೆ ಗೆಲುವು
ಪ್ರಭು ಚೌಹಾಣ್
Follow us
Ganapathi Sharma
|

Updated on:May 13, 2023 | 10:33 PM

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಔರಾದ್ ವಿಧಾನಸಭಾ ಕ್ಷೇತ್ರದಿಂದ (Aurad Assembly constituency) ಬಿಜೆಪಿಯು ಹಾಲಿ ಶಾಸಕ, ಸಚಿವ ಪ್ರಭು ಚೌಹಾಣ್ ಅವರನ್ನೇ ಕಣಕ್ಕಿಳಿಸಿದೆ. ಕಾಂಗ್ರೆಸ್​ನಿಂದ ಡಾ. ಶಿಂಧೆ ಭೀಮಸೇನ ರಾವ್, ಜೆಡಿಎಸ್​​ನಿಂದ ಜಯಸಿಂಗ್ ರಾಥೋಡ್, ಎಎಪಿಯಿಂದ ಬಾಬು ರಾವ್ ಅಡ್ಕೆ ಕಣಕ್ಕಿಳಿದಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರಭು ಚೌಹಾಣ್ 10,592 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರಭು ಚೌಹಾಣ್ ಮತ್ತೆ ಗೆಲುವಿನ ನಗೆ ಬೀರಿದ್ದಾರೆ.

ಈ ಕ್ಷೇತ್ರದಲ್ಲಿ ಪ್ರಭು ಚೌಹಾಣ್ ನಿರಂತರ ಮೂರು ಬಾರಿ ಗೆಲುವು ದಾಖಲಿಸಿ ಹ್ಯಾಟ್ರಿಕ್ ಬಾರಿಸಿದ್ದಾರೆ. ಚುನಾವಣೆ ಘೋಷಣೆ ಆಗುವುದಕ್ಕೂ ಮುನ್ನವೇ ಈ ಕ್ಷೇತ್ರಕ್ಕೆ ಚೌಹಾಣ್ ಅವರೇ ಅಭ್ಯರ್ಥಿ ಎಂಬುದನ್ನು ಬಿಜೆಪಿ ಪರೋಕ್ಷವಾಗಿ ಹೇಳಿತ್ತು.ಜನವರಿಯಲ್ಲಿ ನಡೆದಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಚೌಹಾಣ್ ಅವರನ್ನು ಆಶೀರ್ವದಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದ್ದರು. ಚೌಹಾಣ್ ಅವರೇ ಬಿಜೆಪಿಯಿಂದ ಕಣಕ್ಕಿಳಿಯುವುದು ಅದಾಗಲೇ ಬಹುತೇಕ ಖಚಿತಗೊಂಡಿತ್ತು.

ತಿಂಗಳುಗಳ ಮೊದಲೇ ಕ್ಷೇತ್ದಾದ್ಯಂತ ಓಡಾಟ ಆರಂಭಿಸಿದ್ದ ಚೌಹಾಣ್, ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಲ್ಲಿ ಹರಿವು ಮೂಡಿಸುವ ಕೆಲಸ ಶುರು ಮಾಡಿದ್ದರು. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮರಾಠ ಮತ್ತು ಲಿಂಗಾಯತ ಸಮುದಾಯಗಳ ಮತಗಳನ್ನು ಸೆಳೆಯಲು ತಂತ್ರಗಾರಿಕೆ ರೂಪಿಸಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಹಾಗೂ ಜೆಡಿಎಸ್ ಮೂರನೇ ಸ್ಥಾನ ಪಡೆದಿದ್ದವು. ಈ ಬಾರಿ ಎರಡೂ ಪಕ್ಷಗಳು ಹೊಸಮುಖಗಳನ್ನು ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆ ನಡೆಸಿವೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:29 am, Sat, 13 May 23

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ